AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Nov 22, 2023 | 6:21 PM

Share

ಕಿಚ್ಚ ಸುದೀಪ್ (Kichcha Sudeep) ಅವರಿಗೆ ಕ್ರಿಕೆಟ್ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಈ ಕಾರಣಕ್ಕೆ ಸಿನಿಮಾ ಕೆಲಸಗಳ ಜೊತೆ ಅವರು ಕ್ರಿಕೆಟ್ ಕೂಡ ಆಡುತ್ತಾರೆ. ಈಗ ‘ಕನ್ನಡ ಚಲನಚಿತ್ರ ಕಪ್’ (KCC) ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್​ನಲ್ಲಿ ಕೆಸಿಸಿಯ ನಾಲ್ಕನೇ ಆವೃತ್ತಿ ಆರಂಭ ಆಗಲಿದೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ. ಈಗಾಗಲೇ ಯಶಸ್ವಿಯಾಗಿ ಕೆಸಿಸಿಯ ಮೂರು ಸೀಸನ್ ಪೂರ್ಣಗೊಂಡಿದೆ. ಈಗ ನಾಲ್ಕನೇ ಸೀಸನ್ ಆರಂಭ ಆಗಲಿದೆ. ನವೆಂಬರ್ 26ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.

‘ಡಿಸೆಂಬರ್ 23ರಿಂದ ಡಿಸೆಂಬರ್ 25ರವರೆಗೆ ‘ಕೆಸಿಸಿ’ ನಾಲ್ಕನೇ ಸೀಸನ್ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ಗಳು ನಡೆಯಲಿವೆ. ಕಳೆದ ಸೀಸನ್​ಗಳಲ್ಲಿ ವಿದೇಶದ ಆಟಗಾರರು ಭಾಗಿ ಆಗಿದ್ದರು. ಈ ಬಾರಿಯೂ ವಿದೇಶಿ ಆಟಗಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಶಿವಣ್ಣ, ಉಪೇಂದ್ರ, ಧನಂಜಯ್, ಗಣೇಶ್, ದುನಿಯಾ ವಿಜಯ್, ಕೆಪಿ ಶ್ರೀಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮ್ಯಾಚ್​ನಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ಹಲವು ತಂಡಗಳು ಕೆಸಿಸಿಯಲ್ಲಿ ಭಾಗಿ ಆಗಲಿವೆ. ಎಷ್ಟು ಓವರ್​ಗಳ ಮ್ಯಾಚ್, ಯಾವ ಯಾವ ತಂಡ ಇರಲಿದೆ, ಯಾವ ತಂಡಕ್ಕೆ ಯಾರು ಕ್ಯಾಪ್ಟನ್ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ವರ್ಷದ ಆರಂಭದಲ್ಲಿ ಮೂರನೇ ಸೀಸನ್ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:11 pm, Wed, 22 November 23

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್