Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್
ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on:Nov 22, 2023 | 6:21 PM

ಕಿಚ್ಚ ಸುದೀಪ್ (Kichcha Sudeep) ಅವರಿಗೆ ಕ್ರಿಕೆಟ್ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಈ ಕಾರಣಕ್ಕೆ ಸಿನಿಮಾ ಕೆಲಸಗಳ ಜೊತೆ ಅವರು ಕ್ರಿಕೆಟ್ ಕೂಡ ಆಡುತ್ತಾರೆ. ಈಗ ‘ಕನ್ನಡ ಚಲನಚಿತ್ರ ಕಪ್’ (KCC) ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್​ನಲ್ಲಿ ಕೆಸಿಸಿಯ ನಾಲ್ಕನೇ ಆವೃತ್ತಿ ಆರಂಭ ಆಗಲಿದೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ. ಈಗಾಗಲೇ ಯಶಸ್ವಿಯಾಗಿ ಕೆಸಿಸಿಯ ಮೂರು ಸೀಸನ್ ಪೂರ್ಣಗೊಂಡಿದೆ. ಈಗ ನಾಲ್ಕನೇ ಸೀಸನ್ ಆರಂಭ ಆಗಲಿದೆ. ನವೆಂಬರ್ 26ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.

‘ಡಿಸೆಂಬರ್ 23ರಿಂದ ಡಿಸೆಂಬರ್ 25ರವರೆಗೆ ‘ಕೆಸಿಸಿ’ ನಾಲ್ಕನೇ ಸೀಸನ್ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ಗಳು ನಡೆಯಲಿವೆ. ಕಳೆದ ಸೀಸನ್​ಗಳಲ್ಲಿ ವಿದೇಶದ ಆಟಗಾರರು ಭಾಗಿ ಆಗಿದ್ದರು. ಈ ಬಾರಿಯೂ ವಿದೇಶಿ ಆಟಗಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಶಿವಣ್ಣ, ಉಪೇಂದ್ರ, ಧನಂಜಯ್, ಗಣೇಶ್, ದುನಿಯಾ ವಿಜಯ್, ಕೆಪಿ ಶ್ರೀಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮ್ಯಾಚ್​ನಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ಹಲವು ತಂಡಗಳು ಕೆಸಿಸಿಯಲ್ಲಿ ಭಾಗಿ ಆಗಲಿವೆ. ಎಷ್ಟು ಓವರ್​ಗಳ ಮ್ಯಾಚ್, ಯಾವ ಯಾವ ತಂಡ ಇರಲಿದೆ, ಯಾವ ತಂಡಕ್ಕೆ ಯಾರು ಕ್ಯಾಪ್ಟನ್ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ವರ್ಷದ ಆರಂಭದಲ್ಲಿ ಮೂರನೇ ಸೀಸನ್ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:11 pm, Wed, 22 November 23

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ