AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಸಿಸಿ’ ನಾಲ್ಕನೇ ಸೀಸನ್ ವಿನ್ನರ್ ‘ಗಂಗ ವಾರಿಯರ್ಸ್​’; ಶಿವಣ್ಣನ ತಂಡಕ್ಕೆ ಫೈನಲ್​​ನಲ್ಲಿ ಸೋಲು

KCC Season 4 Winners: ಗಣೇಶ್ ಅವರಿಗೆ ಕನ್ನಡ ಚಲನಚಿತ್ರ ಕಪ್​ ಅನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿದರು. ಈ ವೇಳೆ ಸುದೀಪ್, ದುನಿಯಾ ವಿಜಯ್, ಶಿವಣ್ಣ ಕೂಡ ಹಾಜರಿದ್ದರು.

‘ಕೆಸಿಸಿ’ ನಾಲ್ಕನೇ ಸೀಸನ್ ವಿನ್ನರ್ ‘ಗಂಗ ವಾರಿಯರ್ಸ್​’; ಶಿವಣ್ಣನ ತಂಡಕ್ಕೆ ಫೈನಲ್​​ನಲ್ಲಿ ಸೋಲು
ಕೆಸಿಸಿ ಫೈನಲ್ ವಿನ್ನರ್ಸ್
ರಾಜೇಶ್ ದುಗ್ಗುಮನೆ
|

Updated on:Dec 26, 2023 | 8:36 AM

Share

ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳೆ ನಡೆಸುವ ಕನ್ನಡ ಚಲನಚಿತ್ರ ಕಪ್​ನ ನಾಲ್ಕನೇ ಆವೃತ್ತಿಯ ಫೈನಲ್ ಪಂದ್ಯ ಸೋಮವಾರ (ಡಿಸೆಂಬರ್ 25) ನಡೆಯಿತು. ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golde Star Ganesh) ನಾಯಕತ್ವದ ‘ಗಂಗ ವಾರಿಯರ್ಸ್’ ತಂಡ ಶಿವರಾಜ್​ಕುಮಾರ್ ನಾಯಕತ್ವದ ‘ರಾಷ್ಟ್ರಕೂಟ ಪ್ಯಾಂತರ್ಸ್’ ತಂಡವನ್ನು ನಾಲ್ಕು ರನ್​ಗಳಿಂದ ಮಣಿಸಿದೆ. ಈ ಮೂಲಕ ಗಣೇಶ್ ತಂಡ ನಾಲ್ಕನೇ ಸೀಸನ್​ನ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿಸೆಂಬರ್ 23, ಡಿಸೆಂಬರ್ 24 ಹಾಗೂ ಡಿಸೆಂಬರ್ 25ರಂದು ಕೆಸಿಸಿ ಪಂದ್ಯಗಳು ನಡೆದವು. ಗಣೇಶ್, ಸುದೀಪ್, ದುನಿಯಾ ವಿಜಯ್ ಸೇರಿ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸಿದ್ದರು. ಗಣೇಶ್ ತಂಡ ಲೀಗ್ ಮ್ಯಾಚ್​ನಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕು ಮ್ಯಾಚ್​ನ ಗೆದ್ದಿತ್ತು. ಫಿನಾಲೆ ತಲುಪಿ ಕಪ್ ಗೆದ್ದಿದೆ.

ಶಿವಣ್ಣನ ನಾಯಕತ್ವದ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಂಗಾ ವಾರಿಯ್ಸ್ ತಂಡ 10 ಓವರ್​ನಲ್ಲಿ​ ಐದು ವಿಕೆಟ್ ನಷ್ಟಕ್ಕೆ 111 ರನ್​ಗಳನ್ನು ಕಲೆ ಹಾಕಿತು. ರಾಷ್ಟ್ರಕೂಟ ತಂಡವು ಉತ್ತಮ ಆರಂಭವನ್ನೇ ಕಂಡಿತು. ಆದರೆ, ಟಾರ್ಗೆಟ್ ರೀಚ್ ಆಗುವ ಮೊದಲು ಸೋಲು ಒಪ್ಪಿದರು.

ಇದನ್ನೂ ಓದಿ: ಬಿಡುಗಡೆಗೆ ಹತ್ತಿರವಾಗುತ್ತಿದೆ ‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ಹೊಸ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’

ಗಣೇಶ್ ಅವರಿಗೆ ಕನ್ನಡ ಚಲನಚಿತ್ರ ಕಪ್​ ಅನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿದರು. ಈ ವೇಳೆ ಸುದೀಪ್, ದುನಿಯಾ ವಿಜಯ್, ಶಿವಣ್ಣ ಕೂಡ ಹಾಜರಿದ್ದರು. ಸಿನಿಮಾ ಕೆಲಸಗಳ ಮಧ್ಯೆ ಬ್ರೇಕ್ ಪಡೆದು ಕೆಲವು ದಿನಗಳ ಕಾಲ ಆಟದತ್ತ ಸೆಲೆಬ್ರಿಟಿಗಳು ಗಮನ ಹರಿಸಿದ್ದಾರೆ. ಸೆಲೆಬ್ರಿಟಿಗಳು ಕ್ರಿಕೆಟ್ ಆಡುವುದನ್ನು ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:35 am, Tue, 26 December 23

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?