AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCN Chandrashekar: ‘ಹುಲಿಯ ಹಾಲಿನ ಮೇವು’ ಸಿನಿಮಾ ಖ್ಯಾತಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ

KCN Chandrashekar Death: ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಕೆಸಿಎನ್​ ಚಂದ್ರಶೇಖರ್ ಸೇವೆ ಸಲ್ಲಿಸಿದ್ದರು.

KCN Chandrashekar: ‘ಹುಲಿಯ ಹಾಲಿನ ಮೇವು’ ಸಿನಿಮಾ ಖ್ಯಾತಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ
ಕೆಸಿಎನ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on:Jun 14, 2021 | 8:33 AM

Share

ಸ್ಯಾಂಡಲ್​ವುಡ್​ನಲ್ಲಿ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ನಿಧನರಾದರು. ಇಂದು (ಜೂ.14) ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಶಿವಾನಂದ ಸರ್ಕಲ್​ ಬಳಿ ಇರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

ಹಲವು ವರ್ಷಗಳಿಂದ ಕೆಸಿಎನ್​ ಚಂದ್ರಶೇಖರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಡಾ. ರಾಜ್​ಕುಮಾರ್​ ನಟನೆಯ ‘ಹುಲಿಯ ಹಾಲಿನ ಮೇವು’, ‘ಬಬ್ರುವಾಹನ’ ಮುಂತಾದ ಕ್ಲಾಸಿಕ್​ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಕೆಸಿಎನ್​ ಚಂದ್ರಶೇಖರ್​ ಅವರು ಗುರುತಿಸಿಕೊಂಡಿದ್ದರು. ಇಂದು ಅವರ ನಿಧನಕ್ಕೆ ಚಂದನವನದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ನಿರ್ಮಾಪಕನಾಗಿ ಮಾತ್ರವಲ್ಲದೆ, ವಿತರಕರಾಗಿಯೂ ಕೆಸಿಎನ್​ ಚಂದ್ರಶೇಖರ್​ ಕೆಲಸ ಮಾಡಿದ್ದರು. ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಚಂದ್ರಶೇಖರ್​ ಅವರ ಇಡೀ ಕುಟುಂಬವೇ ಸಿನಿಮಾರಂಗದಲ್ಲಿ ತೊಡಗಿಕೊಂಡಿತ್ತು. ಅವರ ತಂದೆ ಕೆಸಿಎನ್​ ಗೌಡ ಅವರು ನಿರ್ಮಾಪಕರಾಗಿ, ಪ್ರದರ್ಶಕರಾಗಿ, ವಿತರಕರಾಗಿ ಗುರುತಿಸಿಕೊಂಡಿದ್ದರು. ಸಹೋದರ ಕೆಸಿಎನ್ ಮೋಹನ್​ ನಿರ್ಮಾಪಕರಾಗಿದ್ದಾರೆ.

ಕೆಸಿಎನ್​ ಚಂದ್ರಶೇಖರ್​ ನಿಧನಕ್ಕೆ ಗೀತರಚನಕಾರ, ನಿರ್ದೇಶಕ ನಾಗೇಂದ್ರ ಪ್ರಸಾದ್​ ಅವರು ಕಂಬನಿ ಮಿಡಿದಿದ್ದಾರೆ. ‘ನಲ್ಲ’ ಚಿತ್ರದ ನಿರ್ಮಾಪಕರು. ನನ್ನನ್ನು ನಿರ್ದೇಶಕನನ್ನಾಗಿ ಮಾಡಿದ ಅನ್ನದಾತರು ಕೆ.ಸಿ.ಎನ್. ಚಂದ್ರು ಸರ್ ಆತ್ಮಕ್ಕೆ ಭಗವಂತ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ನಾಗೇಂದ್ರ ಪ್ರಸಾದ್​ ಪೋಸ್ಟ್​ ಮಾಡಿದ್ದಾರೆ.

ಈ ವರ್ಷ ಕೊವಿಡ್​ ಎರಡನೇ ಅಲೆ ಆರಂಭ ಆದ ನಂತರವಂತೂ ಅನೇಕರನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ. ನಿರ್ಮಾಪಕ ಕೋಟಿ ರಾಮು, ಯುವ ನಿರ್ಮಾಪಕ, ನಟ ಡಿಎಸ್​ ಮಂಜುನಾಥ್​, ಪುಟ್ಟಣ್ಣ ಕಣಗಾಲ್​ ಪುತ್ರ ರಾಮು, ಹಿರಿಯ ನಟಿಯರಾದ ಸುರೇಖಾ, ಬಿ. ಜಯಾ, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಖನಾದ ಅರವಿಂದ್​, ನಟ-ಪತ್ರಕರ್ತ ಸುರೇಶ್​ ಚಂದ್ರ ಸೇರಿದಂತೆ ಅನೇಕರು ನಿಧನರಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ ನಿಧನ

Published On - 8:10 am, Mon, 14 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!