AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCN Mohan: ಊರ್ವಶಿ ಥಿಯೇಟರ್​ ಮಾಲಿಕ, ನಿರ್ಮಾಪಕ ಕೆಸಿಎನ್​ ಮೋಹನ್​ ನಿಧನ: ಕಂಬನಿ ಮಿಡಿದ ಚಿತ್ರರಂಗ

KCN Mohan Death: ಕೆಸಿಎನ್​ ಮೋಹನ್​ ಅವರಿಗೆ ಇತ್ತೀಚೆಗೆ ಆರೋಗ್ಯ ಕೈ ಕೊಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

KCN Mohan: ಊರ್ವಶಿ ಥಿಯೇಟರ್​ ಮಾಲಿಕ, ನಿರ್ಮಾಪಕ ಕೆಸಿಎನ್​ ಮೋಹನ್​ ನಿಧನ: ಕಂಬನಿ ಮಿಡಿದ ಚಿತ್ರರಂಗ
ಕೆಸಿಎನ್​ ಮೋಹನ್​
ಮದನ್​ ಕುಮಾರ್​
|

Updated on:Jul 02, 2023 | 2:50 PM

Share

ಸ್ಯಾಂಡಲ್​ವುಡ್​ನಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಹಿರಿಯ ನಿರ್ಮಾಪಕ, ಪ್ರದರ್ಶಕ ಕೆಸಿಎನ್​ ಮೋಹನ್​ (KCN Mohan) ಅವರು ನಿಧನರಾಗಿದ್ದಾರೆ. ಅವರು ಕೊನೆಯುಸಿರೆಳೆದ (KCN Mohan Death) ಸುದ್ದಿ ಕೇಳಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಹಲವಾರು ಸಿನಿಮಾಗಳನ್ನು ಕೆಸಿಎನ್​ ಮೋಹನ್​ ನಿರ್ಮಾಣ ಮಾಡಿದ್ದರು. ನವರಂಗ್​, ಊರ್ವಶಿ ಚಿತ್ರಮಂದಿರಗಳ ಮಾಲೀಕರಾಗಿದ್ದ ಅವರು ಪ್ರದರ್ಶಕರಾಗಿ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು. ಇತ್ತೀಚೆಗೆ ಮೋಹನ್​ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಕೆಸಿಎನ್​ ಮೋಹನ್​ ನಿಧನರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ರಮ್ಯಾ ದಿವ್ಯ ಸ್ಪಂದನಾ ನಟನೆಯ ‘ಜೂಲಿ’, ‘ರಾಮರಾಜ್ಯದಲ್ಲಿ ರಾಕ್ಷಸರು’, ‘ಜಯಸಿಂಹ’, ‘ಧರ್ಮ ಯುದ್ಧ’, ಶಂಕರ್​ ನಾಗ್​ ನಟನೆ ‘ಭಲೇ ಚತುರು’  ಮುಂತಾದ ಸಿನಿಮಾಗಳನ್ನು ಕೆಸಿಎನ್​ ಮೋಹನ್​ ಅವರು ನಿರ್ಮಾಣ ಮಾಡಿದ್ದರು. ಸಿನಿಮಾ ವಿತರಣೆಯಲ್ಲಿ ಅವರು ಪಳಗಿದ್ದರು. ಮೋಹನ್​ ಅವರ ತಂದೆ ಕೆಸಿಎನ್​ ಗೌಡ ಕೂಡ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಡಾ. ರಾಜ್​ಕುಮಾರ್​ ನಟನೆಯ ಹಲವು ಸಿನಿಮಾಗಳಿಗೆ ಕೆಸಿಎನ್​ ಗೌಡ ಅವರು ಬಂಡವಾಳ ಹೂಡಿದ್ದರು.

ಇದನ್ನೂ ಓದಿ: Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು

ಕಪ್ಪು ಬಿಳುಪಿನಲ್ಲಿ ಮೂಡಿಬಂದಿದ್ದ ರಾಜ್​ಕುಮಾರ್​ ನಟನೆಯ ‘ಸತ್ಯ ಹರಿಶ್ಚಂದ್ರ’ ಮತ್ತು ‘ಕಸ್ತೂರಿ ನಿವಾಸ’ ಸಿನಿಮಾವನ್ನು ಕಲರ್​ಗೆ ಪರಿವರ್ತಿಸಿ ಬಿಡುಗಡೆ ಮಾಡಿದ ಖ್ಯಾತಿ ಕೆಸಿಎನ್​ ಮೋಹನ್​ ಅವರಿಗೆ ಸಲ್ಲುತ್ತದೆ. ಮೋಹನ್​ ಅವರ ಪತ್ನಿ ರೇಣುಕಾ ಮೋಹನ್ ಅವರು ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. ‘ಜೂಲಿ’ ಸಿನಿಮಾ ಮೂಡಿಬಂದಿದ್ದು ರೇಣುಕಾ ಅವರ ನಿರ್ದೇಶನದಲ್ಲಿ. 2017ರಲ್ಲಿ ರೇಣುಕಾ ನಿಧನರಾದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:32 pm, Sun, 2 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ