KCN Mohan: ಊರ್ವಶಿ ಥಿಯೇಟರ್​ ಮಾಲಿಕ, ನಿರ್ಮಾಪಕ ಕೆಸಿಎನ್​ ಮೋಹನ್​ ನಿಧನ: ಕಂಬನಿ ಮಿಡಿದ ಚಿತ್ರರಂಗ

KCN Mohan Death: ಕೆಸಿಎನ್​ ಮೋಹನ್​ ಅವರಿಗೆ ಇತ್ತೀಚೆಗೆ ಆರೋಗ್ಯ ಕೈ ಕೊಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

KCN Mohan: ಊರ್ವಶಿ ಥಿಯೇಟರ್​ ಮಾಲಿಕ, ನಿರ್ಮಾಪಕ ಕೆಸಿಎನ್​ ಮೋಹನ್​ ನಿಧನ: ಕಂಬನಿ ಮಿಡಿದ ಚಿತ್ರರಂಗ
ಕೆಸಿಎನ್​ ಮೋಹನ್​
Follow us
|

Updated on:Jul 02, 2023 | 2:50 PM

ಸ್ಯಾಂಡಲ್​ವುಡ್​ನಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಹಿರಿಯ ನಿರ್ಮಾಪಕ, ಪ್ರದರ್ಶಕ ಕೆಸಿಎನ್​ ಮೋಹನ್​ (KCN Mohan) ಅವರು ನಿಧನರಾಗಿದ್ದಾರೆ. ಅವರು ಕೊನೆಯುಸಿರೆಳೆದ (KCN Mohan Death) ಸುದ್ದಿ ಕೇಳಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಹಲವಾರು ಸಿನಿಮಾಗಳನ್ನು ಕೆಸಿಎನ್​ ಮೋಹನ್​ ನಿರ್ಮಾಣ ಮಾಡಿದ್ದರು. ನವರಂಗ್​, ಊರ್ವಶಿ ಚಿತ್ರಮಂದಿರಗಳ ಮಾಲೀಕರಾಗಿದ್ದ ಅವರು ಪ್ರದರ್ಶಕರಾಗಿ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು. ಇತ್ತೀಚೆಗೆ ಮೋಹನ್​ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಕೆಸಿಎನ್​ ಮೋಹನ್​ ನಿಧನರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ರಮ್ಯಾ ದಿವ್ಯ ಸ್ಪಂದನಾ ನಟನೆಯ ‘ಜೂಲಿ’, ‘ರಾಮರಾಜ್ಯದಲ್ಲಿ ರಾಕ್ಷಸರು’, ‘ಜಯಸಿಂಹ’, ‘ಧರ್ಮ ಯುದ್ಧ’, ಶಂಕರ್​ ನಾಗ್​ ನಟನೆ ‘ಭಲೇ ಚತುರು’  ಮುಂತಾದ ಸಿನಿಮಾಗಳನ್ನು ಕೆಸಿಎನ್​ ಮೋಹನ್​ ಅವರು ನಿರ್ಮಾಣ ಮಾಡಿದ್ದರು. ಸಿನಿಮಾ ವಿತರಣೆಯಲ್ಲಿ ಅವರು ಪಳಗಿದ್ದರು. ಮೋಹನ್​ ಅವರ ತಂದೆ ಕೆಸಿಎನ್​ ಗೌಡ ಕೂಡ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಡಾ. ರಾಜ್​ಕುಮಾರ್​ ನಟನೆಯ ಹಲವು ಸಿನಿಮಾಗಳಿಗೆ ಕೆಸಿಎನ್​ ಗೌಡ ಅವರು ಬಂಡವಾಳ ಹೂಡಿದ್ದರು.

ಇದನ್ನೂ ಓದಿ: Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು

ಕಪ್ಪು ಬಿಳುಪಿನಲ್ಲಿ ಮೂಡಿಬಂದಿದ್ದ ರಾಜ್​ಕುಮಾರ್​ ನಟನೆಯ ‘ಸತ್ಯ ಹರಿಶ್ಚಂದ್ರ’ ಮತ್ತು ‘ಕಸ್ತೂರಿ ನಿವಾಸ’ ಸಿನಿಮಾವನ್ನು ಕಲರ್​ಗೆ ಪರಿವರ್ತಿಸಿ ಬಿಡುಗಡೆ ಮಾಡಿದ ಖ್ಯಾತಿ ಕೆಸಿಎನ್​ ಮೋಹನ್​ ಅವರಿಗೆ ಸಲ್ಲುತ್ತದೆ. ಮೋಹನ್​ ಅವರ ಪತ್ನಿ ರೇಣುಕಾ ಮೋಹನ್ ಅವರು ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. ‘ಜೂಲಿ’ ಸಿನಿಮಾ ಮೂಡಿಬಂದಿದ್ದು ರೇಣುಕಾ ಅವರ ನಿರ್ದೇಶನದಲ್ಲಿ. 2017ರಲ್ಲಿ ರೇಣುಕಾ ನಿಧನರಾದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:32 pm, Sun, 2 July 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ