AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ

V Ravichandran Birthday: ‘ಕೆಡಿ’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಾಕೆಂದರೆ ಈ ಸಿನಿಮಾದಲ್ಲಿ ರವಿಚಂದ್ರನ್​ ಲುಕ್​ ಭಿನ್ನವಾಗಿದೆ. ಇಂದು (ಮೇ 30) ಕ್ರೇಜಿ ಸ್ಟಾರ್​ ಜನ್ಮದಿನ. ಆ ಪ್ರಯುಕ್ತ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ
ರವಿಚಂದ್ರನ್​
ಮದನ್​ ಕುಮಾರ್​
|

Updated on: May 30, 2023 | 12:53 PM

Share

ರವಿಚಂದ್ರನ್​ (V Ravichandran) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಗೆಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ‘ಕೆಡಿ’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಾಕೆಂದರೆ ಈ ಸಿನಿಮಾದಲ್ಲಿ ಅವರ ಲುಕ್​ ಭಿನ್ನವಾಗಿದೆ. ಇಂದು (ಮೇ 30) ಕ್ರೇಜಿ ಸ್ಟಾರ್​ ಜನ್ಮದಿನ (V Ravichandran Birthday). ಆ ಪ್ರಯುಕ್ತ ‘ಕೆಡಿ’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಈ ಪೋಸ್ಟರ್​ ಮೂಲಕ ರವಿಚಂದ್ರನ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗುತ್ತಿದೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ. ‘ಕೆಡಿ’ ಸಿನಿಮಾ (KD Kannada Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಕನ್ನಡ, ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ತೆರೆಕಾಣಲಿದೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಇದೆ. ಅರ್ಜುನ್​ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ತೆರೆ ಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಈ ಚಿತ್ರಕ್ಕೆ ಹೀರೋ. ಅವರ ವೃತ್ತಿಜೀವನಕ್ಕೆ ಇದು ಮಹತ್ವದ ಸಿನಿಮಾ ಆಗುವ ನಿರೀಕ್ಷೆ ಇದೆ.

‘ಕೆಡಿ’ ಚಿತ್ರತಂಡದಿಂದ ರವಿಚಂದ್ರನ್​ ಅವರ ಪೋಸ್ಟರ್​ ಬಿಡುಗಡೆ ಆಗಿದ್ದು ಇದೇ ಮೊದಲೇನೂ ಅಲ್ಲ. ಹೊಸ ವರ್ಷದ ಪ್ರಯುಕ್ತ ಜನವರಿ 1ರಂದು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಕಪ್ಪು ಬಟ್ಟೆ, ಉದ್ದ ಕೂದಲು, ಕೂಲಿಂಗ್​ ಗ್ಲಾಸ್​, ಹಣೆಯಲ್ಲಿ ವಿಭೂತಿ.. ಹೀಗೆ ವಿಶೇಷ ಗೆಟಪ್​ನಲ್ಲಿ ರವಿಚಂದ್ರನ್​ ಅವರ ಪಾತ್ರ ಇರಲಿದೆ. ಸಿಕ್ಕಾಪಟ್ಟೆ ಗತ್ತಿನಲ್ಲಿ ಅವರು ಪೋಸ್​ ನೀಡಿದ್ದಾರೆ. ಈ ಪೋಸ್ಟರ್​ನಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಮಾಸ್​ ಸಿನಿಮಾಗಳಿಂದ ಫೇಮಸ್​ ಆದವರು ‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ. ‘ಕೆಡಿ’ ಚಿತ್ರದಲ್ಲೂ ಅವರ ಮಾಸ್​ ಅವತಾರ ಮುಂದುವರಿಯಲಿದೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ನೀಡಲಾಗಿತ್ತು. ರೆಟ್ರೋ ಕಾಲದ ಕಥೆ ಈ ಚಿತ್ರದಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ತಕ್ಕಂತೆಯೇ ರವಿಚಂದ್ರನ್​ ಅವರ ಲುಕ್​ ಮೂಡಿಬಂದಿದೆ. ಅಭಿಮಾನಿಗಳ ವಲಯದಲ್ಲಿ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ.

View this post on Instagram

A post shared by Prem❣️s (@directorprems)

‘ಜೋಗಿ’ ಪ್ರೇಮ್​ ಅವರು ‘ಕೆಡಿ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಪ್ರೇಮ್​ ನಿರ್ದೇಶನದ ಸಿನಿಮಾ ಎಂದರೆ ಸಿನಿಪ್ರಿಯರಿಗೆ ನಿರೀಕ್ಷೆ ಇದ್ದೇ ಇರುತ್ತದೆ. ಅವರ ಜೊತೆ ರವಿಚಂದ್ರನ್​ ಕೈ ಜೋಡಿಸಿರುವುದು ಹೈಪ್​ ಹೆಚ್ಚಲು ಕಾರಣ ಆಗಿದೆ. ಕೆವಿಎನ್​ ಪ್ರೊಡಕ್ಷನ್ಸ್​ ಮೂಲಕ ‘ಕೆಡಿ’ ಸಿನಿಮಾ ಮೂಡಿಬರುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ರವಿಚಂದ್ರನ್​ ಅವರ ಲುಕ್​ ಸಖತ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅವರು ಅಣ್ಣಯ್ಯಪ್ಪ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ನನಗೆ ದುಡ್ಡು ಬೇಕು ಅನ್ನೋದು ಸಿನಿಮಾ ಮಾಡೋಕೆ’; ಚಿತ್ರರಂಗದ ಮೇಲೆ ರವಿಚಂದ್ರನ್​ಗೆ ಇದೆ ಅತೀವ ಪ್ರೀತಿ

ವಿ. ರವಿಚಂದ್ರನ್ ಅವರು ಹುಟ್ಟುಹಬ್ಬಕ್ಕೆ ಶುಭ ಕೋರಲು ಅನೇಕ ಅಭಿಮಾನಿಗಳು ಅವರ ನಿವಾಸದ ಮುಂದೆ ಕಾದಿದ್ದಾರೆ. ಆದರೆ ರವಿಚಂದ್ರನ್ ಅವರು ನಿವಾಸದಲ್ಲಿ ಇಲ್ಲ ಎನ್ನಲಾಗಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ಸಂಜೆವರೆಗೂ ಅವರಿಗಾಗಿ ಕಾಯ್ತೀವಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಚಂದನವನದ ಅನೇಕರು ‘ಕ್ರೇಜಿ ಸ್ಟಾರ್​’ಗೆ ಶುಭಾಶಯ ತಿಳಿಸುತ್ತಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ