AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಟೀಸರ್ ಲಾಂಚ್​​ನಲ್ಲಿ ತಾರಾ ಮೇಳ: ಯಾರು ಏನು ಹೇಳಿದರು?

KD Kannada movie: ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾದ ಕನ್ನಡ ಟೀಸರ್ ಇಂದು (ಜುಲೈ 12) ಬೆಂಗಳೂರಿನಲ್ಲಿ ಬಿಡುಗಡೆ ಆಯ್ತು. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಹಲವು ತಾರೆಯರು ವೇದಿಕೆ ಮೇಲೆ ಸೇರಿದ್ದರು. ಈ ವೇಳೆ ಎಲ್ಲ ನಟ-ನಟಿಯರು ಸಿನಿಮಾದ ಜೊತೆಗೆ ಹಳೆಯ ದಿನಗಳನ್ನು ಸಹ ಮೆಲಕು ಹಾಕಿದರು.

‘ಕೆಡಿ’ ಟೀಸರ್ ಲಾಂಚ್​​ನಲ್ಲಿ ತಾರಾ ಮೇಳ: ಯಾರು ಏನು ಹೇಳಿದರು?
Kd Movie
ಮಂಜುನಾಥ ಸಿ.
|

Updated on: Jul 12, 2025 | 9:39 PM

Share

ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾದ ಕನ್ನಡ ಟೀಸರ್ ಇಂದು (ಜುಲೈ 12) ಬೆಂಗಳೂರಿನಲ್ಲಿ ಬಿಡುಗಡೆ ಆಯ್ತು. ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಎರಡು ದಿನಗಳ ಹಿಂದಷ್ಟೆ ಇದೇ ಸಿನಿಮಾದ ಹಿಂದಿ ಟೀಸರ್ ಮುಂಬೈನಲ್ಲಿ ಬಿಡುಗಡೆ ಮಾಡಲಾಯ್ತು. ಟೀಸರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯ್ತು. ಇಂದು ಕನ್ನಡ ಟೀಸರ್ ಬಿಡುಗಡೆ ಮಾಡಲಾಗಿದೆ. ಬಹುತಾರಾಗಣದ ಸಿನಿಮಾ ಇದಾಗಿದ್ದು, ಇಂದು ನಡೆದ ಕಾರ್ಯಕ್ರಮದಲ್ಲಿ ಹಲವು ತಾರೆಯರು ವೇದಿಕೆ ಮೇಲೆ ಒಟ್ಟಿಗೆ ಕಾಣಿಸಿಕೊಂಡರು.

‘ಕೆಡಿ’ ಸಿನಿಮಾನಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ರವಿಚಂದ್ರನ್, ಸಂಜಯ್ ದತ್ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ. ಇಂದು ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಎಲ್ಲ ತಾರೆಯರು ಒಟ್ಟಿಗೆ ವೇದಿಕೆ ಮೇಲೆ ಕಾಣಿಸಿಕೊಂಡರು. ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಹಳೆಯ ದಿನಗಳನ್ನು ಸಹ ನೆನಪು ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್ ಅರವಿಂದ್, ‘ನಾನು ದಶಕಗಳಿಂದ ಚಿತ್ರರಂಗದಲ್ಲಿದ್ದೇನೆ, ಆದರೆ ಎಂದೂ ಶೂಟಿಂಗ್ ಬ್ಲಡ್ ಬಳಸಿಲ್ಲ. ಇದ್ದರೂ ನನ್ನ ಮೇಲೆ ಬಳಸುತ್ತಿರಲಿಲ್ಲ. ಆದರೆ ಇಷ್ಟು ವರ್ಷದಲ್ಲಿ ಬಳಸದೇ ಇರದ ಅಷ್ಟೂ ಶೂಟಿಂಗ್ ಬ್ಲಡ್ ಅನ್ನು ಇದೊಂದೇ ಸಿನಿಮಾನಲ್ಲಿ ನನ್ನ ಮೇಲೆ ಬಳಸಿದ್ದಾರೆ’ ಎಂದು ಚಟಾಕಿ ಹಾರಿಸಿದರು ನಟ ರಮೇಶ್ ಅರವಿಂದ್.

ಇದನ್ನೂ ಓದಿ:‘ಕೆಡಿ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾದ ಸತ್ಯವತಿ ಶಿಲ್ಪಾ ಶೆಟ್ಟಿ

ಇನ್ನು ನಟ ಸಂಜಯ್ ದತ್ ಮಾತನಾಡಿ, ‘ನನಗೆ 398 ಮಂದಿ ಗರ್ಲ್​ ಫ್ರೆಂಡ್ಸ್ ಇದ್ದಾರೆಂದು ತಮಾಷೆ ಮಾಡುತ್ತಾರೆ. ಆದರೆ ರವಿಚಂದ್ರನ್ ಅವರಿಗೆ ಅದಕ್ಕಿಂತಲೂ ಹೆಚ್ಚು ಗರ್ಲ್​ಫ್ರೆಂಡ್ಸ್ ಇದ್ದಾರಂತೆ. ಬ್ಯೂಟಿಫುಲ್ ಹೀರೋಯಿನ್​ಗಳನ್ನು ತಂದಿದ್ದೇ ಅವರಂತೆ’ ಎಂದು ಹಾಸ್ಯ ಮಾಡಿದರು. ನಟ ಧ್ರುವ ಸರ್ಜಾ ಬಗ್ಗೆ ಮಾತನಾಡಿ, ‘ನಾನು ನಾಯಕನಾಗಿ ನಟಿಸುವಾಗ ನನ್ನ ಹಿರಿಯರಿಗೆ ಹೇಗೆ ಗೌರವ ಕೊಡುತ್ತಿದ್ದೆನೊ ಹಾಗೆಯೇ ಧ್ರುವ ನನಗೆ ಗೌರವ ಕೊಟ್ಟರು’ ಎಂದರು.

ಇನ್ನು ನಟ ರವಿಚಂದ್ರನ್ ಮಾತುಗಳಂತೂ ಸಭೆಯಲ್ಲಿ ನಗುವಿನ ಅಲೆಯನ್ನೇ ಎಬ್ಬಿಸಿದರು. ನಟಿ ಶಿಲ್ಪಾ ಶೆಟ್ಟಿ ಜೊತೆಗೆ ದಶಕಗಳ ಬಳಿಕ ವೇದಿಕೆ ಹಂಚಿಕೊಂಡ ನಟ ರವಿಚಂದ್ರನ್, ಶಿಲ್ಪಾ ಶೆಟ್ಟಿ ಜೊತೆಗೆ ನಟಿಸಿದ ‘ಪ್ರೀತ್ಸೋದ್ ತಪ್ಪಾ’ ಸಿನಿಮಾ ಬಗ್ಗೆ ಮಾತನಾಡಿದರು. ‘ಪುಣ್ಯಕ್ಕೆ ಇನ್ನೂ ನನ್ನ ವಯಸ್ಸು, ಬೆಳೆದ ಹೊಟ್ಟೆ ಬಗ್ಗೆ ಮಾತನಾಡಿಲ್ಲ’ ಎಂದು ತಮಾಷೆ ಮಾಡಿದರು. ಅದಕ್ಕೆ ಶಿಲ್ಪಾ ಸಹ, ‘ಆಗ ಒಟ್ಟಿಗೆ ನಟಿಸುವಾಗ ಹೊಗಳುತ್ತಿರಲಿಲ್ಲ, ಈಗ ಹೊಗಳುತ್ತಿದ್ದಾರೆ’ ಎಂದು ತಮಾಷೆ ಮಾಡಿದರು. ಇಬ್ಬರೂ ಸಹ ‘ಪ್ರೀತ್ಸೋದ್ ತಪ್ಪಾ’ ಹಾಡಿಗೆ ಡ್ಯಾನ್ಸ್ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​