AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ?

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ 'ಕೆಡಿ' ಚಿತ್ರ 20 ದಿನಗಳಲ್ಲಿ 23 ಕೋಟಿ ಗಳಿಸಿದೆ. 100-120 ಕೋಟಿ ಬಜೆಟ್ ಹೊಂದಿರುವ ಈ ಚಿತ್ರಕ್ಕೆ ಒಟಿಟಿ, ಸಂಗೀತ ಹಕ್ಕುಗಳಿಂದ ಆದಾಯ ಬಂದಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಭಾರೀ ನಷ್ಟವಾಗಿರುವ ಸಾಧ್ಯತೆ ಇದೆ. ನಿರ್ಮಾಪಕರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದು ತಜ್ಞರ ಅಭಿಪ್ರಾಯ.

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ?
ಕೆಡಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: May 20, 2026 | 11:45 AM

Share

‘ಕೆಡಿ’ ಸಿನಿಮಾ (KD Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಟನೆ ಸಿನಿಮಾದ ಹೈಲೈಟ್ ಆಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 20 ದಿನಗಳು ಕಳೆದಿವೆ. ಕೆಲವರು ಚಿತ್ರವನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ‘ಕೆಡಿ’ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ? ನಿರ್ಮಾಪಕರಿಗೆ ಲಾಭವೋ ಅಥವಾ ನಷ್ಟವೋ? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ರಿಲೀಸ್ ಆಗಿದ್ದು ಮೇ 1ರಂದು. ಅಂದರೆ ಸಿನಿಮಾ ತೆರೆಗೆ ಬಂದು ಇಂದಿಗೆ (ಮೇ 20) ಮೂರು ವಾರಗಳು ಪೂರ್ಣಗೊಳ್ಳಲಿವೆ. ಇಂದಿನ ಗಳಿಕೆಯ ಸಂಪೂರ್ಣ ಲೆಕ್ಕಾಚಾರ ಈಗಲೇ ಸಿಗೋದಿಲ್ಲ. ಹೀಗಾಗಿ, 20 ದಿನಗಳ ಗಳಿಕೆಯ ವಿವರವನ್ನು ನಾವು ನೀಡುತ್ತಿದ್ದೇವೆ.

‘ಕೆಡಿ’ ಸಿನಿಮಾ ಮೊದಲ ನಾಲ್ಕು ದಿನ ಅಬ್ಬರದ ಕಲೆಕ್ಷನ್ ಮಾಡಿತ್ತು. ಮೊದಲ ನಾಲ್ಕು ದಿನಕ್ಕೆ ಸಿನಿಮಾ 13.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಕುಗ್ಗುತ್ತಾ ಸಾಗಿತು. ಮಂಗಳವಾರ (ಮೇ 19) ಸಿನಿಮಾ ಕೇವಲ 19 ಲಕ್ಷ ಗಳಿಕೆ ಮಾಡಿದೆ. ರಾಜ್ಯಾದ್ಯಂತ ಚಿತ್ರಕ್ಕೆ 300 ಶೋಗಳನ್ನು ನೀಡಲಾಗಿದೆ.

‘ಕೆಡಿ’ ಸಿನಿಮಾದ ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ 23 ಕೋಟಿ ರೂಪಾಯಿ ಆಗಿದೆ. ಈ ಚಿತ್ರದ ಒಟಿಟಿ ಹಕ್ಕು, ಟಿವಿ ಹಕ್ಕು ಹಾಗೂ ಮ್ಯೂಸಿಕ್ ಹಕ್ಕುಗಳು ಒಳ್ಳೆಯ ಮೊತ್ತಕ್ಕೆ ಮಾರಾಟ ಆಗಿವೆ ಎನ್ನಲಾಗಿದೆ. ಕೆಲವು ವರದಿ ಪ್ರಕಾರ ಚಿತ್ರದ ಬಜೆಟ್ 100-120 ಕೋಟಿ ರೂಪಾಯಿ ಎನ್ನಲಾಗಿದೆ. ಇದನ್ನು ಲೆಕ್ಕಾಚಾರ ಹಾಕಿದರೆ ನಿರ್ಮಾಣ ಸಂಸ್ಥೆಗೆ ಭಾರೀ ನಷ್ಟ ಆಗಿರಬಹುದು ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಇದನ್ನೂ ಓದಿ: ಮೂರನೇ ಭಾನುವಾರ ‘ಕೆಡಿ’ ಗಳಿಸಿದ್ದೆಷ್ಟು? ಒಟ್ಟೂ ಕಲೆಕ್ಷನ್ ವಿವರ ಇಲ್ಲಿದೆ

ಜೋಗಿ ಪ್ರೇಮ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಕೆಡಿ’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಬಾಲಿವುಡ್ ನಟ ಸಂಜಯ್ ದತ್ ಮುಖ್ಯ ವಿಲನ್ ಆಗಿ ಕಾಣಿಸಿಕೊಂಡರೆ, ಶಿಲ್ಪಾ ಶೆಟ್ಟಿ ‘ಸತ್ಯವತಿ’ ಎಂಬ ಪ್ರಮುಖ ಪಾತ್ರದಲ್ಲಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಪ್ರೇರಣಾ ಕಂಬಂ ಚಿತ್ರದ ಇತರ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More