AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿದ ‘ಕೆಡಿ’; ಧ್ರುವ ಸಿನಿಮಾ ಕಲೆಕ್ಷನ್ ಎಷ್ಟು?

ಧ್ರುವ ಸರ್ಜಾ ಅವರ 'ಕೆಡಿ' ಸಿನಿಮಾ ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿದೆ. ಮೊದಲ ಎರಡು ದಿನಗಳಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರವು ಧ್ರುವ ಸರ್ಜಾ ವೃತ್ತಿಜೀವನಕ್ಕೆ ಹೊಸ ಗೆಲುವು ತಂದಿದೆ. 'ಮಾರ್ಟಿನ್' ಸೋಲಿನ ನಂತರದ ಈ ಯಶಸ್ಸು ಅವರಿಗೆ ಮುಖ್ಯವಾಗಿದೆ. ಮೇ 1ರ ಕಾರ್ಮಿಕರ ದಿನದ ರಜೆಯೂ ಗಳಿಕೆಗೆ ನೆರವಾಗಿದೆ.

ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿದ ‘ಕೆಡಿ’; ಧ್ರುವ ಸಿನಿಮಾ ಕಲೆಕ್ಷನ್ ಎಷ್ಟು?
ಕೆಡಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: May 02, 2026 | 7:06 AM

Share

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬಂದಿದೆ. ಜೋಗಿ ಪ್ರೇಮ್ ಅವರು ಹಲವು ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದಾರೆ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈ ಸಿನಿಮಾಗೆ ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನ ಶೋಗಳ ಸಂಖ್ಯೆ ಕೊಂಚ ಕಡಿಮೆ ಆಗಿದೆ. ಎರಡನೇ ದಿನ ಫ್ಯಾನ್ಸ್ ಶೋ ಇಲ್ಲದಿರುವುದು ಕೂಡ ಇದಕ್ಕೆ ಕಾರಣ. ಹಾಗಾದರೆ, ‘ಕೆಡಿ’ ಸಿನಿಮಾ ಎರಡನೇ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ಎರಡನೇ ದಿನ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಮೊದಲ ದಿನ ಈ ಚಿತ್ರ 3.5 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಹಾಗೂ 4.1 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿತ್ತು. ಎರಡನೇ ದಿನವೂ ಇದೇ ಟ್ರೆಂಡ್ ಮುಂದುವರಿದಿದೆ. ಸಿನಿಮಾ ರಿಲೀಸ್ ಆಗಿದ್ದು ಏಪ್ರಿಲ್ 30. ಮೇ 1 ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜಾ ಇತ್ತು. ಹೀಗಾಗಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ನೋಡಿದ್ದಾರೆ.

ಮೊದಲ ದಿನ ಚಿತ್ರಕ್ಕೆ 845 ಶೋಗಳನ್ನು ನೀಡಲಾಗಿತ್ತು. ಎರಡನೇ ದಿನ ಸಿನಿಮಾಗೆ 817 ಶೋಗಳನ್ನು ನೀಡಲಾಗಿತ್ತು. ಅಂದು 3.50 ಕೋಟಿ ರೂಪಾಯಿ ನೆಟ್​ ಹಾಗೂ 4.1 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರದ ಗ್ರಾಸ್ ಕಲೆಕ್ಷನ್ ಎರಡು ದಿನಕ್ಕೆ 8.19 ಕೋಟಿ ರೂಪಾಯಿ ಆಗಿದೆ. ನೆಟ್ ಕಲೆಕ್ಷನ್ 7 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಧ್ರುವ ಸರ್ಜಾಗೆ ವಿಶ್ ಮಾಡಿ ‘ಕೆಡಿ’ ಚಿತ್ರದ ಬೆಂಬಲಕ್ಕೆ ನಿಂತ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು

ಕೆಡಿ ಚಿತ್ರದಲ್ಲಿ ದೊಡ್ಡದಾದ ಪಾತ್ರವರ್ಗ ಇದೆ. ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರವಿ ಶಂಕರ್ ಮೊದಲಾದವರು ನಟಿಸಿದ್ದಾರೆ. ಧ್ರುವ ಸರ್ಜಾ ವೃತ್ತಿ ಜೀವನದ ದೃಷ್ಟಿಯಿಂದ ಸಿನಿಮಾ ತುಂಬಾನೇ ಮುಖ್ಯವಾಗಿತ್ತು. ‘ಮಾರ್ಟಿನ್’ ಚಿತ್ರದ ಸೋಲಿನಿಂದ ಅವರು ಕಂಗೆಟ್ಟಿದ್ದರು. ಅವರಿಗೆ ಈ ಚಿತ್ರ ದೊಡ್ಡ ಗೆಲುವು ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್