AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

ಕೆಡಿ ಸಿನಿಮಾದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ಅಶ್ಲೀಲ ಸಾಹಿತ್ಯದಿಂದ ಭಾರೀ ವಿವಾದಕ್ಕೆ ಸಿಲುಕಿದೆ. ಹಾಡಿನ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ನಿರ್ದೇಶಕ ಜೋಗಿ ಪ್ರೇಮ್ ಮತ್ತು ಡ್ಯಾನ್ಸರ್ ನೋರಾ ಫತೇಹಿ ಟೀಕೆಗೆ ಗುರಿಯಾಗಿದ್ದಾರೆ. ಗಾಯಕಿ ಐಶ್ವರ್ಯಾ ರಂಗರಾಜನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿರೋದು ಚರ್ಚೆ ಹುಟ್ಟುಹಾಕಿದೆ.

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್
ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Mar 19, 2026 | 1:34 PM

Share

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ.

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ ಆದ ಕೆಲವೇ ದಿನಕ್ಕೆ ವಿವಾದದ ಹೊಗೆ ಕಾಣಿಸಿಕೊಂಡಿತು. ಕನ್ನಡದಿಂದ ಹಿಡಿದು ಬಾಲಿವುಡ್​​ವರೆಗೆ ಈ ಚಿತ್ರದ ಹಾಡನ್ನು ಟೀಕಿಸಿದರು. ಸಾಹಿತ್ಯ ಅಶ್ಲೀಲವಾಗಿದೆ ಎಂದು ಟೀಕಿಸಲಾಯಿತು. ಈಗ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಯೂಟ್ಯೂಬ್​​ನಿಂದ ತೆಗೆಯಲಾಗಿದೆ.

‘ಸರ್ಸೆ’ ಹಾಡಿಗೆ ಕನ್ನಡದಲ್ಲಿ ಸಾಂಗ್ ಬರೆದಿದ್ದು ಜೋಗಿ ಪ್ರೇಮ್ ಅವರು. ಈ ಹಾಡನ್ನು ಹಾಡಿದ್ದು ಐಶ್ವರ್ಯಾ ಅವರು. ಈ ಕಾರಣಕ್ಕೆ ಅವರ ಇನ್​​ಸ್ಟಾ ಖಾತೆಗೆ ಸಾಕಷ್ಟು ಸಂದೇಶ ಹಾಗೂ ಕಮೆಂಟ್​​ಗಳು ಬಂದಿರಬಹುದು. ಈ ಕಾರಣದಿಂದ ಇನ್​​ಸ್ಟಾಗ್ರಾಮ್​​ನಿಂದ ದೂರ ಉಳಿದರೇ ಎನ್ನುವ ಪ್ರಶ್ನೆ ಮೂಡಿದೆ. ವಿವಾದ ತಣ್ಣಗಾದ ಬಳಿಕ ಅವರು ಕಂಬ್ಯಾಕ್ ಮಾಡಬಹುದು ಎಂಬ ನಿರೀಕ್ಷೆ ಇದೆ.

ಇನ್​​ಸ್ಟಾಗ್ರಾಮ್ ಖಾತೆಯನ್ನು ಡಿ ಆ್ಯಕ್ಟಿವೇಟ್ ಮಾಡಲು ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿಲ್ಲ. ಈಗ ಹಾಡಿನ ವಿವಾದ ಸಂದರ್ಭದಲ್ಲೇ ಅವರು ಡಿ ಆ್ಯಕ್ಟಿವೇಟ್ ಮಾಡಿರುವುದರಿಂದ ಸಾಕಷ್ಟು ಚರ್ಚೆ ಆಗಿದೆ. ಇದು ಕಾಕತಾಳೀಯ ಕೂಡ ಇರಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

‘ಸರ್ಸೆ ನಿನ್ನ ಸೆರಗ ಸರ್ಸೆ’ ಸಾಂಗ್​​​ನ ಲಿರಿಕ್ಸ್​​ನ ಸಂಪೂರ್ಣವಾಗಿ ಬದಲಿಸಿ ಹೊಸ ಹಾಡಿನ ಮೂಲಕ ಬರೋದಾಗಿ ಜೋಗಿ ಪ್ರೇಮ್ ಹೇಳಿದ್ದಾರೆ. ಸಿನಿಮಾ ರಿಲೀಸ್​​ಗೆ ಕೆಲವೇ ವಾರಗಳು ಬಾಕಿ ಇರುವಾಗ ವಿವಾದ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ