AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಚಿತ್ರದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ತೀವ್ರ ವಿವಾದಕ್ಕೆ ಗುರಿಯಾಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ನಟಿಸಿದ್ದ ಈ ಹಾಡಿನ ಅಶ್ಲೀಲ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸೆಲೆಬ್ರಿಟಿಗಳ ಟೀಕೆಯ ಬೆನ್ನಲ್ಲೇ, ಆನಂದ್ ಆಡಿಯೋ ಈ ಹಾಡನ್ನು ಯೂಟ್ಯೂಬ್‌ನಿಂದ ತೆಗೆದುಹಾಕಿದೆ.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?
ಸರ್ಸೆ ಹಾಡು
ರಾಜೇಶ್ ದುಗ್ಗುಮನೆ
|

Updated on:Mar 17, 2026 | 10:28 AM

Share

ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ.

ಪ್ರೇಮ್ ಅವರು ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಹಾಡಿಗೆ ರಾಜ್ಯದ ಜನತೆ ಮಾತ್ರವಲ್ಲ ಬಾಲಿವುಡ್ ಮಂದಿಯೂ ಕ್ಯಾತೆ ತೆಗೆದಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಚಿತ್ರದ ಹಾಡಿಗೆ ಪ್ರೇಮ್ ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಕನ್ನಡದಲ್ಲಿ ಹಾಡಿದ್ದಾರೆ. ಹಿಂದಿಯಲ್ಲಿ ರಖೀಬ್ ಆಲಂ ಅವರು ಸಾಹಿತ್ಯ ಬರೆದಿದ್ದು, ಮಂಗ್ಲಿ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

‘ಸರ್ಸೆ..’ ಹಾಡಿನಲ್ಲಿ ನೋರಾ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಾಕಷ್ಟು ಅಶ್ಲೀಲ ಸಾಹಿತ್ಯ ಇದೆ. ಈ ಹಾಡನ್ನು ಕೇಳಿದ್ದ ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್, ‘ಗೀತರಚನಕಾರರು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದನ್ನು ನೋಡಲು ಬೇಸರ ಆಗುತ್ತದೆ’ ಎಂದಿದ್ದರು. ಈ ವಿರೋಧದ  ಬೆನ್ನಲ್ಲೇ ಹಾಡು ಕೆಲ ಹೊತ್ತು ಯೂಟ್ಯೂಬ್​ನಿಂದ ಮಾಯ ಆಗಿತ್ತು . ಈಗ ಹಾಡು ಮತ್ತೆ ಮರಳಿದೆ. ಇದು ಚಿತ್ರಕ್ಕೆ ಸಾಕಷ್ಟು ಹಿನ್ನಡೆಯನ್ನು ಉಂಟು ಮಾಡಿದೆ. ರಿಲೀಸ್​​ಗೆ ಕೆಲವೇ ವಾರಗಳು ಇರುವಾಗ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.

ಪ್ರೇಮ್ ಅವರು ಈ ಮೊದಲು ಈ ರೀತಿಯ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದರು. ಅವರ ನಟನೆಯ ‘ಪ್ರೇಮ್ ಅಡ್ಡ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಮೇಲುಕೋಟೆ ಹುಡುಗಿ ಒಬ್ಬಳು’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅದರಲ್ಲಿರೋ ಲಿರಿಕ್​ಸ್​​​ಗೆ ಮೇಲುಕೋಟೆಯ ಜನರು ವಿರೋಧ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Tue, 17 March 26

Follow Us
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್