AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಚಿತ್ರದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ತೀವ್ರ ವಿವಾದಕ್ಕೆ ಗುರಿಯಾಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ನಟಿಸಿದ್ದ ಈ ಹಾಡಿನ ಅಶ್ಲೀಲ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸೆಲೆಬ್ರಿಟಿಗಳ ಟೀಕೆಯ ಬೆನ್ನಲ್ಲೇ, ಆನಂದ್ ಆಡಿಯೋ ಈ ಹಾಡನ್ನು ಯೂಟ್ಯೂಬ್‌ನಿಂದ ತೆಗೆದುಹಾಕಿದೆ.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?
ಸರ್ಸೆ ಹಾಡು
ರಾಜೇಶ್ ದುಗ್ಗುಮನೆ
|

Updated on:Mar 17, 2026 | 10:28 AM

Share

ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ.

ಪ್ರೇಮ್ ಅವರು ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಹಾಡಿಗೆ ರಾಜ್ಯದ ಜನತೆ ಮಾತ್ರವಲ್ಲ ಬಾಲಿವುಡ್ ಮಂದಿಯೂ ಕ್ಯಾತೆ ತೆಗೆದಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಚಿತ್ರದ ಹಾಡಿಗೆ ಪ್ರೇಮ್ ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಕನ್ನಡದಲ್ಲಿ ಹಾಡಿದ್ದಾರೆ. ಹಿಂದಿಯಲ್ಲಿ ರಖೀಬ್ ಆಲಂ ಅವರು ಸಾಹಿತ್ಯ ಬರೆದಿದ್ದು, ಮಂಗ್ಲಿ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

‘ಸರ್ಸೆ..’ ಹಾಡಿನಲ್ಲಿ ನೋರಾ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಾಕಷ್ಟು ಅಶ್ಲೀಲ ಸಾಹಿತ್ಯ ಇದೆ. ಈ ಹಾಡನ್ನು ಕೇಳಿದ್ದ ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್, ‘ಗೀತರಚನಕಾರರು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದನ್ನು ನೋಡಲು ಬೇಸರ ಆಗುತ್ತದೆ’ ಎಂದಿದ್ದರು. ಈ ವಿರೋಧದ  ಬೆನ್ನಲ್ಲೇ ಹಾಡು ಕೆಲ ಹೊತ್ತು ಯೂಟ್ಯೂಬ್​ನಿಂದ ಮಾಯ ಆಗಿತ್ತು . ಈಗ ಹಾಡು ಮತ್ತೆ ಮರಳಿದೆ. ಇದು ಚಿತ್ರಕ್ಕೆ ಸಾಕಷ್ಟು ಹಿನ್ನಡೆಯನ್ನು ಉಂಟು ಮಾಡಿದೆ. ರಿಲೀಸ್​​ಗೆ ಕೆಲವೇ ವಾರಗಳು ಇರುವಾಗ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.

ಪ್ರೇಮ್ ಅವರು ಈ ಮೊದಲು ಈ ರೀತಿಯ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದರು. ಅವರ ನಟನೆಯ ‘ಪ್ರೇಮ್ ಅಡ್ಡ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಮೇಲುಕೋಟೆ ಹುಡುಗಿ ಒಬ್ಬಳು’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅದರಲ್ಲಿರೋ ಲಿರಿಕ್​ಸ್​​​ಗೆ ಮೇಲುಕೋಟೆಯ ಜನರು ವಿರೋಧ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Tue, 17 March 26

Follow Us
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ