AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

ಕೆಡಿ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತನಗೆ ಅರಿವಿಲ್ಲ ಎಂದು ನೋರಾ ಫತೇಹಿ ಹೇಳಿದ್ದರೆ, ಪ್ರೇಮ್ ಇದನ್ನು ತಳ್ಳಿಹಾಕಿದ್ದಾರೆ. ‘ವಿವಾದದಿಂದ ತಪ್ಪಿಸಿಕೊಳ್ಳಲು ನೋರಾ ಹೀಗೆ ಹೇಳಿರಬಹುದು’ ಎಂದು ಪ್ರೇಮ್ ತಿರುಗೇಟು ನೀಡಿದ್ದಾರೆ. ಸದ್ಯ ಹಾಡನ್ನು ಯೂಟ್ಯೂಬ್‌ನಿಂದ ತೆಗೆಯಲಾಗಿದ್ದು, ಹೊಸ ಸಾಹಿತ್ಯದೊಂದಿಗೆ ಮತ್ತೆ ಬಿಡುಗಡೆ ಮಾಡಲಾಗುವುದು ಎಂದು ಪ್ರೇಮ್ ತಿಳಿಸಿದ್ದಾರೆ.

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್
ನೋರಾ-ಪ್ರೇಮ್
ರಾಜೇಶ್ ದುಗ್ಗುಮನೆ
|

Updated on: Mar 19, 2026 | 9:00 AM

Share

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ ಕಾರಣ ಆಗಿದೆ.

ವಿವಾದ ಭುಗಿಲೇಳುತ್ತಿದ್ದಂತೆ ನೋರಾ ಫತೇಹಿ ಅವರು ವಿವಾದದಿಂದ ದೂರ ಆಗಲು ಪ್ರಯತ್ನಿಸಿದ್ದರು. ‘ಮೂರು ವರ್ಷಗಳ ಹಿಂದೆಯೇ ಈ ಹಾಡು ಚಿತ್ರೀಕರಿಸಲಾಗಿತ್ತು. ಸಂಜಯ್ ದತ್ ಇರೋದ್ರಿಂದ ನಾನು ಸಿನಿಮಾ ಒಪ್ಪಿಕೊಂಡೆ. ಕನ್ನಡ ಭಾಷೆ ನನಗೆ ತಿಳಿಯಲ್ಲ. ಹೀಗಾಗಿ, ಹಾಡಿನ ಅರ್ಥವನ್ನು ತಂಡದವರ ಬಳಿ ಕೇಳಿ ತಿಳಿದುಕೊಂಡೆ’ ಎಂದು ನೋರಾ ಹೇಳಿದ್ದರು. ಹಿಂದಿ ಭಾಷೆಗೆ ಹೇಗೆ ತರ್ಜಮ್ಯ ಮಾಡಲಾಗಿದೆ ಎಂಬುದರ ಐಡಿಯಾ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ಹಾಡು ಬಿಡುಗಡೆಗೆ ನನ್ನನ್ನು ಕರೆದಾಗ ನನ್ನ ಫೋಟೋಗಳನ್ನು ಬಳಸಿದ ರೀತಿ ಕಂಡು ನನಗೆ ಬೇಸರ ಆಯಿತು ಎಂದು ಅವರು ಹೇಳಿದ್ದಾರೆ.

View this post on Instagram

A post shared by Nora Fatehi (@norafatehi)

ನೋರಾ ಹೇಳಿಕೆಗೆ ಪ್ರೇಮ್ ಉತ್ತರ ನೀಡಿದ್ದಾರೆ. ‘ನೋರಾ ಮಾತನಾಡಿದ್ದು ತಪ್ಪು. ಸಾಹಿತ್ಯ ಗೊತ್ತಿಲ್ಲದೆ ಭಾವನೆ ಬರಲ್ಲ. ಏಕೆ ಹಾಗೆ ಮಾತಾಡಿದ್ರೋ ಗೊತ್ತಿಲ್ಲ. ವಿವಾದಿಂದ ತಪ್ಪಿಸಿಕೊಳ್ಳಬೇಕು ಎಂದು ಹೀಗೆ ಹೇಳಿರಬಹುದು. ಪ್ರೇಮ್ ಜೊತೆ ಕೆಲಸ ಮಾಡಿದ್ದು ಖುಷಿ ಆಯ್ತು ಎಂದು ಸಾಂಗ್ ರಿಲೀಸ್ ಆದಾಗ ಹೇಳಿದ್ದರು. ನೊಂದ ಜೀವ ಚೆನ್ನಾಗಿರಲಿ’ ಎಂದು ಪ್ರೇಮ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು ಸದ್ಯ ‘ಸರ್ಸೆ..’ ಹಾಡನ್ನು ಯೂಟ್ಯೂಬ್​​ನಿಂದ ತೆಗೆಯಲಾಗಿದೆ. ಹೊಸ ಹಾಡನ್ನು ಬರೆದು ಅಪ್​​ಲೋಡ್ ಮಾಡುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ