AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ

‘ಕೆಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಧ್ರುವ ಸರ್ಜಾ ಅವರ ರಗಡ್ ಅವತಾರ ಗಮನ ಸೆಳೆದಿದೆ. ಟ್ರೇಲರ್‌ನಲ್ಲಿ ಧ್ರುವ ಹೇಳುವ ಒಂದು ಸಂಭಾಷಣೆ, ಪುನೀತ್ ರಾಜ್‌ಕುಮಾರ್ ಅವರ ‘ರಾಜ್ ದಿ ಶೋ ಮ್ಯಾನ್’ ಚಿತ್ರದ ಡೈಲಾಗ್ ಅನ್ನು ಹೋಲುತ್ತದೆ. ಎರಡೂ ಚಿತ್ರಗಳನ್ನು ನಿರ್ದೇಶಿಸಿರುವ ಪ್ರೇಮ್, ಈ ಮೂಲಕ ಅಪ್ಪುಗೆ ಗೌರವ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಏಪ್ರಿಲ್ 30ರಂದು 'ಕೆಡಿ' ವಿಶ್ವದಾದ್ಯಂತ ತೆರೆಗೆ ಬರಲಿದೆ.

‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ
ಧ್ರುವ-ಪುನೀತ್
ರಾಜೇಶ್ ದುಗ್ಗುಮನೆ
|

Updated on:Apr 23, 2026 | 11:29 AM

Share

‘ಕೆಡಿ’ಸಿನಿಮಾ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲು ರೆಡಿ ಇದೆ. ಹೀಗಿರುವಾಗಲೇ ಚಿತ್ರದ ಟ್ರೇಲರ್ ಏಪ್ರಿಲ್ 22ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಳಿ ಪಾತ್ರದಲ್ಲಿ ಧ್ರುವ ಸರ್ಜ ಮಿಂಚಿದ್ದಾರೆ. ಮತ್ತೊಮ್ಮೆ ರಗಡ್ ಪಾತ್ರದ ಮೂಲಕ ಅವರು ಬಂದಿದ್ದಾರೆ. ಪ್ರೇಮ್ ಅವರು ರಾ ಆಗಿ ಸಿನಿಮಾ ಮಾಡಿದ್ದಾರೆ. ಈಗ ‘ಕೆಡಿ’ ಸಿನಿಮಾದ ಟ್ರೇಲರ್ ಅಲ್ಲಿ ಬರುವ ಡೈಲಾಗ್ ಗಮನ ಸೆಳೆದಿದೆ. ಪುನೀತ್ ಅವರ ಸಿನಿಮಾ ಒಂದರ ಡೈಲಾಗ್ ಕೂಡ ಸೇಮ್ ಟು ಸೇಮ್ ಇತ್ತು ಎಂಬುದನ್ನು ಫ್ಯಾನ್ಸ್ ನೆನಪಿಸಿಕೊಂಡಿದ್ದಾರೆ.

ಪ್ರೇಮ್ ಸಿನಿಮಾ ಎಂದರೆ ಅಲ್ಲಿ ಒಮ್ಮೆಯಾದರೂ ಮಚ್ಚು ಝಳಪಲೇಬೇಕು. ‘ಜೋಗಿ’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಕೈಗೆ ಮಚ್ಚು ಕೊಟ್ಟು ಚಿತ್ರ ಹಿಟ್ ಆಗುವಂತೆ ಮಾಡಿದರು. ಆ ಬಳಿಕ ಅವರ ಹಲವು ಸಿನಿಮಾಗಳಲ್ಲಿ ಮಚ್ಚಿನ ಬಳಕೆ ಆಗಿದೆ. ಈಗ ‘ಕೆಡಿ’ ಸಿನಿಮಾದಲ್ಲಿ ಮಚ್ಚಿನ ಬಳಕೆ ಸಾಕಷ್ಟಾಗಿದೆ. ಟ್ರೇಲರ್ ನೋಡಿದರೆ ಇದು ಗೊತ್ತಾಗುತ್ತದೆ. ಟ್ರೇಲರ್ ಉದ್ದಕ್ಕೂ ರಕ್ತ ಹರಿಯುತ್ತದೆ.

ಟ್ರೇಲರ್ ಕ್ಲೈಮ್ಯಾಕ್ಸ್​ ಅಲ್ಲಿ ಧ್ರುವ ಸರ್ಜ ಮಚ್ಚನ್ನು ಹಿಡಿದಿರುತ್ತಾರೆ. ಅವರ ಹೆಗಲೇಮೆಲ ಓರ್ವ ವ್ಯಕ್ತಿಯನ್ನು ಮಲಗಿಸಿಕೊಂಡಿರುತ್ತಾರೆ. ಸುತ್ತಲೂ ಇರೋ ವಿಲನ್​​ಗಳಿಗೆ ಧ್ರುವ ಡೈಲಾಗ್ ಒಂದನ್ನು ಹೇಳುತ್ತಾರೆ. ‘ಮೊದಲನೆಬಾರಿ ಮಚ್ಚು ಹಿಡಿದಿದ್ದೇನೆ.ಅಪ್ಪಿತಪ್ಪಿ ಕೈಕಾಲು ಉಳಿದುಕೊಂಡರೆ ನಿಮ್ಮ ಹೆತ್ತ ತಾಯಿಗೆ ತಪ್ಪಾಯ್ತು ಎಂದು ಹೇಳಿಬಿಡಿ ಅಣ್ಣ’ ಎಂದು ಧ್ರುವ ಸರ್ಜಾ ಉತ್ತರ ಕರ್ನಾಟಕ ಸ್ಟೈಲ್​​ನಲ್ಲಿ ಹೇಳುತ್ತಾರೆ. ಈ ಡೈಲಾಗ್ ಪುನೀತ್ ಸಿನಿಮಾದಲ್ಲೂ ಇತ್ತು.

ಇದನ್ನೂ ಓದಿ:  ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ ಪುನೀತ್ ರಾಜ್​​ಕುಮಾರ್ ನಟನೆಯ ‘ರಾಜ್ ದಿ ಶೋ ಮ್ಯಾನ್’ ಸಿನಿಮಾದಲ್ಲೂ ಇದೇ ರೀತಿಯ ಸಂಭಾಷಣೆ ಬರುತ್ತದೆ. ‘ಅಣ್ಣ ಲೈಫ್ ಅಲ್ಲಿ ಇದೇ ಮೊದಲ ಬಾರಿ ಮಚ್ಚು ಹಿಡಿದಿದ್ದೇನೆ. ಅಪ್ಪಿ ತಪ್ಪಿ ಉಲ್ಟಾ ಬಿದ್ರೆ ಬೇಜಾರ್ ಮಾಡ್ಕಬೇಡಿ ಅಣ್ಣ’ ಎಂದು ಹೇಳುತ್ತಾರೆ ಪುನೀತ್. ‘ರಾಜ್ ದಿ ಶೋ ಮ್ಯಾನ್’ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೋಗಿ ಪ್ರೇಮ್. ಈ ಕಾರಣದಿಂದಲೇ ಅವರು ‘ಕೆಡಿ’ ಸಿನಿಮಾದಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳಲು ಈ ಡೈಲಾಗ್ ಇಟ್ಟಿರಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Thu, 23 April 26

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್