AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಮಂಜು ನಟನೆಯ ‘ದಿಲ್ ದಾರ್’ ಚಿತ್ರಕ್ಕೆ ಶರಣ್ ಸೊಸೆ ಕೀರ್ತಿ ಕೃಷ್ಣ ನಾಯಕಿ

ಯುಗಾದಿ ಹಬ್ಬದ ಆಸುಪಾಸಲ್ಲಿ ‘ದಿಲ್ ದಾರ್’ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಶ್ರೇಯಸ್ ಮಂಜು, ಕೀರ್ತಿ ಕೃಷ್ಣ ಜೊತೆ ಸಾಧು ಕೋಕಿಲ, ಕಾರ್ತಿಕ್, ಚಂದ್ರಪ್ರಭ, ಚಿಲ್ಲರ್ ಮಂಜು, ಭಜರಂಗಿ ಲೋಕಿ, ಅರ್ಪಿತ್ ಮುಂತಾದವರು ನಟಿಸಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿಕೊಂಡ ‘ದಿಲ್​ ದಾರ್​’ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಶ್ರೇಯಸ್ ಮಂಜು ನಟನೆಯ ‘ದಿಲ್ ದಾರ್’ ಚಿತ್ರಕ್ಕೆ ಶರಣ್ ಸೊಸೆ ಕೀರ್ತಿ ಕೃಷ್ಣ ನಾಯಕಿ
Keerthy Krishna, Shreyas Manju
ಮದನ್​ ಕುಮಾರ್​
|

Updated on: Jan 13, 2025 | 6:44 PM

Share

ಯುವ ನಟ ಶ್ರೇಯಸ್ ಮಂಜು ಅವರ ‘ದಿಲ್ ದಾರ್’ ಸಿನಿಮಾದ ಬಗ್ಗೆ ಒಂದಷ್ಟು ಅಪ್​ಡೇಟ್ಸ್​ ಸಿಕ್ಕಿವೆ. ಸದ್ದು ಗದ್ದಲ ಇಲ್ಲದೇ ಈ ಸಿನಿಮಾಗೆ ಬಹುಪಾಲು ಶೂಟಿಂಗ್​ ಪೂರ್ಣಗೊಳಿಸಲಾಗಿದೆ. ಮಧು ಗೌಡ ಗಂಗೂರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿ ಉಳಿದುಕೊಂಡಿದೆ. ಬಹುತೇಕ ಚಿತ್ರೀಕರಣ ಮುಕ್ತಾಯ ಆಗಿದ್ದರೂ ಕೂಡ ಈ ಚಿತ್ರಕ್ಕೆ ನಾಯಕಿ ಯಾರು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ. ಈಗ ಆ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ‘ದಿಲ್ ದಾರ್’ ಸಿನಿಮಾಗೆ ಖ್ಯಾತ ನಟ ಶರಣ್ ಅವರ ಸೊಸೆ ಕೀರ್ತಿ ಕೃಷ್ಣ ಅವರು ನಾಯಕಿ ಆಗಿದಾರೆ.

ಚಿತ್ರರಂಗದಲ್ಲಿ ಕೀರ್ತಿ ಕೃಷ್ಣ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ನಟ ಶರಣ್ ಅವರ ತಂಗಿ ಉಷಾ ಕೃಷ್ಣ ಅವರ ಮಗಳಾದ ಕೀರ್ತಿ ಕೃಷ್ಣ ಈಗಾಗಾಲೇ ಸಿಂಪಲ್ ಸುನಿ ನಿರ್ದೇಶನ ಮುಂಬರುವ ಸಿನಿಮಾಗೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗ ‘ದಿಲ್ ದಾರ್’ ಸಿನಿಮಾದಲ್ಲೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಶ್ರೇಯಸ್​ ಮಂಜು ಹಾಗೂ ಕೀರ್ತಿ ಕೃಷ್ಣ ಅವರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶಕ ಮಧು ಗೌಡ ಅವರು ಚಿತ್ರರಂಗದಲ್ಲಿ ಅನುಭವ ಇದೆ. ಸಿದ್ಧಸೂತ್ರಗಳ ಚೌಕಟ್ಟನ್ನು ಮೀರಿ ಬೇರೆ ರೀತಿಯ ಲವ್ ಸ್ಟೋರಿಯನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರೆ ಎಂದು ಚಿತ್ರತಂಡ ಹೇಳಿದೆ. ಕಥೆ ಡಿಫರೆಂಟ್​ ಆಗಿರುವ ಕಾರಣ ಶ್ರೇಯಸ್ ಮಂಜು ಅವರು ಬಹಳ ಖುಷಿಯಿಂದಲೇ ಈ ಸಿನಿಮಾವನ್ನು ಒಪ್ಪಿಕೊಂಡರು. ವೇಗವಾಗಿ ಶೂಟಿಂಗ್​ ಪೂರ್ಣಗೊಳಿಸಿಕೊಂಡ ಚಿತ್ರತಂಡ ಈಗ ಒಂದು ಹಾಡಿನ ಶೂಟಿಂಗ್ ಮಾಡುವುದು ಬಾಕಿ ಇದೆ.

ಇದನ್ನೂ ಓದಿ: Choo Mantar Review: ‘ಛೂ ಮಂತರ್’ ವಿಮರ್ಶೆ; ತಿರುವುಗಳ ಹಾದಿಯಲ್ಲಿ ಅಮಾನುಷ ಶಕ್ತಿಗಳ ಕಾಟ

ಬಹಳ ಅದ್ದೂರಿಯಾಗಿ ಮತ್ತು ವಿಶೇಷವಾಗಿ ಈ ಹಾಡನ್ನು ಚಿತ್ರಿಸಲು ‘ದಿಲ್​ ದಾರ್’ ತಂಡ ಸಿದ್ಧತೆ ಮಾಡಿಕೊಂಡಿದೆ. ಅರ್ಜುನ್ ಜನ್ಯ ಅವರು ಹಾಡಿಗೆ ಸಂಗೀತ ನೀಡಿದ್ದಾರೆ. ಈ ಹಾಡಿನಲ್ಲಿ ಡ್ಯಾನ್ಸ್ ಕೂಡ ಸ್ಪೆಷಲ್​ ಆಗಿರಲಿದೆ ಎಂದು ‘ದಿಲ್ ದಾರ್​’ ತಂಡ ಹೇಳಿದೆ. ಈ ಹಾಡಿಗಾಗಿ ಶ್ರೇಯಸ್ ಮಂಜು ಅವರು ಸಾಕಷ್ಟು ರಿಹರ್ಸಲ್​ ಮಾಡುತ್ತಿದ್ದಾರೆ. ಹಾಡಿನ ಚಿತ್ರೀಕರಣದ ಬಳಿಕ ಸಿನಿಮಾ ಬಿಡುಗಡೆ ಬಗ್ಗೆ ಮಾಹಿತಿ ಹೊರಬೀಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ