AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆ ಫಿಲ್ಮ್ಸ್​ ಮುಂದಿನ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ?

ಕೀರ್ತಿ ಸುರೇಶ್ ಅವರು ವಿಜಯ್ ಕಿರಗಂದೂರು ಒಡೆತನದ ‘ಹೊಂಬಾಳೆ ಫಿಲ್ಮ್ಸ್​’ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿಚಾರದ ಬಗ್ಗೆ ಕಾಲಿವುಡ್​ ಅಂಗಳದಲ್ಲಿ ಗುಸುಗುಸು ಹರಿದಾಡುತ್ತಿದೆ.

ಹೊಂಬಾಳೆ ಫಿಲ್ಮ್ಸ್​ ಮುಂದಿನ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ?
ಕೀರ್ತಿ ಸುರೇಶ್
TV9 Web
| Edited By: |

Updated on: Aug 13, 2022 | 6:30 AM

Share

ಕೀರ್ತಿ ಸುರೇಶ್ (Keerthy Suresh) ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತೆ ಎಂಬ ಖ್ಯಾತಿಯೂ ಅವರಿಗೆ ಇದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಅವರಿಗೆ ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಚಿತ್ರದಿಂದ ಗೆಲುವು ಸಿಕ್ಕಿದೆ. ಈಗ ಅವರು ಹೊಸ ಪ್ರಾಜೆಕ್ಟ್ ಒಪ್ಪಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದಾರೆ. ಈಗ ದೊಡ್ಡ ನಿರ್ಮಾಣ ಸಂಸ್ಥೆ ಜತೆಗೆ ಕೀರ್ತಿ ಸುರೇಶ್ ಅವರು ಕೈ ಜೋಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೌದು, ಕೀರ್ತಿ ಸುರೇಶ್ ಅವರು ವಿಜಯ್ ಕಿರಗಂದೂರು ಒಡೆತನದ ‘ಹೊಂಬಾಳೆ ಫಿಲ್ಮ್ಸ್​’ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿಚಾರದ ಬಗ್ಗೆ ಕಾಲಿವುಡ್​ ಅಂಗಳದಲ್ಲಿ ಗುಸುಗುಸು ಹರಿದಾಡುತ್ತಿದೆ. ಈ ವಿಚಾರ ಕೇಳಿ ಕೀರ್ತಿ ಸುರೇಶ್ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಈ ವಿಚಾರ ನಿಜವಾಗಲಿ ಎಂದು ಕೋರಿಕೊಳ್ಳುತ್ತಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಕನ್ನಡದ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಿಂದ ಪರಭಾಷೆಗಳಲ್ಲೂ ಚಿತ್ರಗಳು ನಿರ್ಮಾಣ ಆಗುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಭಾಷೆಯ ಸಿನಿಮಾಗಳಿಗೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಆ ಪೈಕಿ ತಮಿಳಿನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಸುಧಾ ಕೊಂಗರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
Keerthy Suresh: ಸಾಂಪ್ರದಾಯಿಕ ಗೆಟಪ್​ನಲ್ಲಿ ಅಭಿಮಾನಿಗಳ ಮನಗೆದ್ದ ಕೀರ್ತಿ ಸುರೇಶ್​
Image
ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ
Image
‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್​ ಖದರ್​; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್​
Image
ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​

ಸುಧಾ ಕೊಂಗರ ಅವರು ಈ ಮೊದಲು ‘ಸೂರರೈ ಪೋಟ್ರು’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಚಿತ್ರದ ನಟನೆಗೆ ಸೂರ್ಯ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಮೊದಲು ಕೀರ್ತಿ ಸುರೇಶ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಈಗ ಸುಧಾ ಹಾಗೂ ಕೀರ್ತಿ ಒಂದೇ ಚಿತ್ರದಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಸಾಕಷ್ಟು ಕುತೂಹಲ ಮೂಡಿದೆ. ಈ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

​ ಇತ್ತೀಚೆಗೆ ಹೊಂಬಾಳೆ ಫಿಲ್ಮ್ಸ್ ಮೂಲಕ ಫಹಾದ್ ಫಾಸಿಲ್​ಗೆ ಬರ್ತ್​ಡೇ ವಿಶ್ ಮಾಡಲಾಗಿತ್ತು. ಈ ಮೂಲಕ ಅವರ ಜತೆ ಸಿನಿಮಾ ಮಾಡುವ ವಿಚಾರವನ್ನು ಹೊಂಬಾಳೆ ಸಂಸ್ಥೆ ಅಧಿಕೃತ ಮಾಡಿತ್ತು. ಈ ಚಿತ್ರಕ್ಕೆ ಪವನ್ ಕುಮಾರ್ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆಯೂ ಅಧಿಕೃತ ಅಪ್​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ