AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಂಡ’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಹೊಸ ವಿಡಿಯೋ ಬಿಡುಗಡೆ; ಇಲ್ಲಿದೆ ಝಲಕ್​

‘ಕೆಂಡ’ ಸಿನಿಮಾದಲ್ಲಿನ ಪಾತ್ರಗಳು ಗಮನ ಸೆಳೆಯುತ್ತಿವೆ. ಭಿನ್ನ-ವಿಭಿನ್ನವಾದ ಪಾತ್ರಗಳ ಪರಿಚಯಕ್ಕಾಗಿ ಪೋಸ್ಟರ್​ ಮತ್ತು ಹೊಸ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಇರುವ ಕಲಾವಿದರು ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

‘ಕೆಂಡ’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಹೊಸ ವಿಡಿಯೋ ಬಿಡುಗಡೆ; ಇಲ್ಲಿದೆ ಝಲಕ್​
‘ಕೆಂಡ’ ಸಿನಿಮಾದ ಪಾತ್ರಗಳು
ಮದನ್​ ಕುಮಾರ್​
|

Updated on: Oct 31, 2023 | 3:29 PM

Share

‘ಕೆಂಡ’ ಸಿನಿಮಾ (Kenda Kannada Movie) ಮೋಷನ್ ಪೋಸ್ಟರ್ ಮೂಲಕ ಗಮನ ಸೆಳೆದಿದೆ. ಈ ಮೊದಲು ‘ಗಂಟುಮೂಟೆ’ ಚಿತ್ರ ಮಾಡಿದ ತಂಡವೇ ‘ಕೆಂಡ’ ಸಿನಿಮಾಗೆ ಒಂದಾಗಿದೆ. ‘ಗಂಟುಮೂಟೆ’ ಚಿತ್ರದ ನಿರ್ದೇಶಕಿ ರೂಪಾ ರಾವ್ (Roopa Rao) ಹಾಗೂ ಛಾಯಾಗ್ರಾಹಕ, ಸಹ ನಿರ್ಮಾಪಕ ಸಹದೇವ್ ಕೆಲವಡಿ ಅವರು ಜೊತೆಯಾಗಿ ‘ಕೆಂಡ’ ಚಿತ್ರವನ್ನು ಈಗ ರೂಪಿಸಿದ್ದಾರೆ. ಈ ಸಿನಿಮಾದ ಮೂಲಕ ಸಹದೇವ್ ಅವರು ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ಸಿನಿಮಾದಲ್ಲಿ ಭಿನ್ನ-ವಿಭಿನ್ನವಾದ ಪಾತ್ರಗಳು ಇವೆ. ಆ ಪಾತ್ರಗಳ ಪರಿಚಯಕ್ಕಾಗಿ ಪೋಸ್ಟರ್​ ಮತ್ತು ಹೊಸ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.

ಸಚ್ಚಾ ಅವರು ಲೋಕೇಶ್ ಎಂಬ ಪಾತ್ರ ಮಾಡಿದ್ದಾರೆ. ಜಯರಾಮ್ ಆಗಿ ಶರತ್ ಗೌಡ ನಟಿಸಿದ್ದಾರೆ. ಪ್ರಣವ್ ಶ್ರೀಧರ್ ಅವರು ವಿನಾಯಕ ಎಂಬ ಪಾತ್ರವನ್ನು ಮಾಡಿದ್ದಾರೆ. ಕೇಶವ ಎಂಬ ಪಾತ್ರಕ್ಕೆ ಬಿ.ವಿ. ಭರತ್ ಬಣ್ಣ ಹಚ್ಚಿದ್ದಾರೆ. ಈ ಎಲ್ಲ ಪಾತ್ರಗಳ ಗೆಟಪ್​ ಮತ್ತು ಲುಕ್​ ಗಮನ ಸೆಳೆಯುತ್ತಿದೆ. ಸಿನಿಮಾಗಳಲ್ಲಿನ ಪಾತ್ರಗಳು ಚೆನ್ನಾಗಿದ್ದರೆ ಅವು ವಿಶೇಷವಾದ ಕ್ರೇಜ್​ ಸೃಷ್ಟಿಸುತ್ತವೆ. ಅದೇ ರೀತಿ ‘ಕೆಂಡ’ ಸಿನಿಮಾದಲ್ಲಿನ ಪಾತ್ರಗಳು ಟ್ರೆಂಡ್​ ಆಗುವ ಲಕ್ಷಣ ಗೋಚರಿಸಿದೆ.

ಇದನ್ನೂ ಓದಿ: ‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್

‘ಅಮೇಯುಕ್ತಿ ಸ್ಟುಡಿಯೋಸ್’ ಮೂಲಕ ‘ಕೆಂಡ’ ಚಿತ್ರ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿನ ಕಥೆಯ ಶೈಲಿ ತುಂಬ ರಗಡ್​ ಆಗಿರಲಿದೆ. ಶೀರ್ಷಿಕೆ ಕೂಡ ಅದೇ ರೀತಿಯಲ್ಲಿದೆ. ಈಗ ಪಾತ್ರಗಳ ಪರಿಚಯದಿಂದ ಪ್ರೇಕ್ಷಕರ ವಲಯದಲ್ಲಿ ಭರವಸೆ ಹೆಚ್ಚಾಗಿದೆ.

ಈ ಸಿನಿಮಾದಲ್ಲಿ ಬಹುತೇಕ ಹೊಸಬರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆ ಇರುವ ಕಲಾವಿದರು ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಪ್ರಣವ್ ಶ್ರೀಧರ್, ಬಿ.ವಿ. ಭರತ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಬಾಲಿವುಡ್​ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಕನ್ನಡದ ‘ಡ್ಯಾಡ್​’ ಸಿನಿಮಾ ಟೀಸರ್​

ಈ ಸಿನಿಮಾದ ತಾಂತ್ರಿಕ ಬಳಗ ಕೂಡ ಗಮನ ಸೆಳೆಯುತ್ತಿದೆ. ಜನಪ್ರಿಯ ಸಾಹಿತಿ ಜಯಂತ್ ಕಾಯ್ಕಿಣಿ ಅವರು ‘ಕೆಂಡ’ ಸಿನಿಮಾದ ಎರಡು ಗೀತೆಗಳಿಗೆ ಸಾಹಿತ್ಯ ರಚಿಸಿದ್ದಾರೆ. ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿರುವುದು ವಿಶೇಷ. ಆಸ್ಕರ್ ಪ್ರಶಸ್ತಿ ಪುರಸ್ಕೃತ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ತಂಡದಲ್ಲಿ​ ಕೆಲಸ ಮಾಡಿದ್ದ ಶ್ರೇಯಾಂಕ್ ನಂಜಪ್ಪ ಅವರು ‘ಕೆಂಡ’ ಸಿನಿಮಾಗೆ ಸೌಂಡ್​ ಡಿಸೈನ್​ ಮಾಡಿದ್ದಾರೆ. ಸದ್ಯಕ್ಕೆ ಈ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಚಾಲ್ತಿಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ