AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲದ ಕಿಡಿ ಹೊತ್ತಿಸಿದ ‘ಕೆಂಡ’ ಸಿನಿಮಾ ಟೀಸರ್; ಡಿಫರೆಂಟ್​ ಆಗಿದೆ ಈ ಪ್ರಯತ್ನ

ಟೀಸರ್​ನ ಜೊತೆ ಚಿತ್ರತಂಡವೇ ಕೆಲವೊಂದು ಮಾಹಿತಿಗಳನ್ನು ಬಿಟ್ಟುಕೊಟ್ಟಿದೆ. ‘ಕೆಂಡ’ ಸಿನಿಮಾದ ಫ್ಲೇವರ್​ ಹೇಗಿರಲಿದೆ ಎಂಬುದು ಇದರಿಂದ ಗೊತ್ತಾಗಿದೆ. ಹಾಗಂತ ಟೀಸರ್​ನಲ್ಲಿ ಪೂರ್ತಿ ಕಥೆ ಬಯಲಾಗಿಲ್ಲ. ಕುತೂಹಲ ಸೃಷ್ಟಿಸುವಲ್ಲಿ ಈ ಟೀಸರ್​ ಯಶಸ್ವಿಯಾಗಿದೆ. ಸಹದೇವ್ ಕೆಲವಡಿ ಅವರು ‘ಕೆಂಡ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಕುತೂಹಲದ ಕಿಡಿ ಹೊತ್ತಿಸಿದ ‘ಕೆಂಡ’ ಸಿನಿಮಾ ಟೀಸರ್; ಡಿಫರೆಂಟ್​ ಆಗಿದೆ ಈ ಪ್ರಯತ್ನ
ಗೋಪಾಲ ಕೃಷ್ಣ ದೇಶಪಾಂಡೆ
ಮದನ್​ ಕುಮಾರ್​
|

Updated on: Dec 04, 2023 | 7:28 PM

Share

ಒಂದಷ್ಟು ದಿನಗಳ ಹಿಂದೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಭಾರಿ ಕುತೂಹಲ ಮೂಡಿಸಿತ್ತು ‘ಕೆಂಡ’ ಸಿನಿಮಾ (Kenda Movie) ಟೀಮ್​. ಆ ಬಳಿಕ ಸಿನಿಪ್ರಿಯರ ವಲಯದಲ್ಲಿ ಇದರ ಬಗ್ಗೆ ಒಂದು ಪಾಸಿಟಿವ್ ಟಾಕ್ ಶುರುವಾಗಿತ್ತು. ಅದರ ಬೆನ್ನಲ್ಲೇ ಪಾತ್ರಗಳ ಪರಿಚಯ ಮಾಡಿಸುವಂತಹ ವಿಡಿಯೋ ಅನಾವರಣ ಮಾಡಿ ಗಮನ ಸೆಳೆಯಲಾಗಿತ್ತು. ಆ ಬಳಿಕ ಟೀಸರ್​ಗಾಗಿ ನಿರೀಕ್ಷೆ ಮೂಡಿತ್ತು. ನಿರೀಕ್ಷೆಯಂತೆಯೇ ‘ಕೆಂಡ’ ಸಿನಿಮಾ ಟೀಸರ್​ (Kenda Movie Teaser) ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಮಾಸ್ ಅಂಶಗಳು ಈ ಟೀಸರ್​ನಲ್ಲಿ ಇವೆ. ಅಷ್ಟೇ ಅಲ್ಲದೇ, ಡಿಫರೆಂಟ್​ ಆದಂತಹ ಕಥೆಯ ಎಳೆ ಏನು ಎಂಬುದರ ಸುಳಿವನ್ನು ಕೂಡ ಈ ಟೀಸರ್​ನಲ್ಲಿ ಬಿಟ್ಟುಕೊಡಲಾಗಿದೆ.

ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಒಂದೇ ಬಗೆಯ ಟ್ರೆಂಡ್​ ಫಾಲೋ ಮಾಡುತ್ತಿದ್ದಾರೆ. ಅವುಗಳ ನಡುವೆಯೂ ಭಿನ್ನ ಪ್ರಯೋಗಗಳು ಆಗುತ್ತಿವೆ. ಅದಕ್ಕೆ ಉತ್ತಮ ಉದಾಹರಣೆಯೇ ‘ಕೆಂಡ’ ಸಿನಿಮಾ ಎಂಬ ಅಭಿಪ್ರಾಯ ಸಿನಿಪ್ರಿಯರಲ್ಲಿ ಮೂಡುವ ಮಟ್ಟಕ್ಕೆ ಈ ಟೀಸರ್​ ಗಮನಾರ್ಹವಾಗಿದೆ. ಒಬ್ಬ ಸಾಮಾನ್ಯ ಹುಡುಗನು ವ್ಯವಸ್ಥೆಯ ಅಡಕತ್ತರಿಗೆ ಸಿಕ್ಕಿಕೊಂಡು ಅಸಾಮಾನ್ಯವಾಗಿ ಅಬ್ಬರಿಸುವ ಕಥೆಯೇ ‘ಕೆಂಡ’ ಸಿನಿಮಾದ ಜೀವಾಳ ಎಂದು ಚಿತ್ರತಂಡ ಹೇಳಿಕೊಂಡಿದೆ.

‘ಕೆಂಡ’ ಸಿನಿಮಾ ಟೀಸರ್​:

ಟೀಸರ್​ನ ಜೊತೆ ಚಿತ್ರತಂಡವೇ ಕೆಲವೊಂದು ಮಾಹಿತಿಗಳನ್ನು ಬಿಟ್ಟುಕೊಟ್ಟಿದೆ. ‘ಕೆಂಡ’ ಸಿನಿಮಾದ ಫ್ಲೇವರ್​ ಹೇಗಿರಲಿದೆ ಎಂಬುದು ಇದರಿಂದ ಗೊತ್ತಾಗಿದೆ. ಹಾಗಂತ ಟೀಸರ್​ನಲ್ಲಿ ಪೂರ್ತಿ ಕಥೆ ಬಯಲಾಗಿಲ್ಲ. ಕುತೂಹಲ ಸೃಷ್ಟಿಸುವಲ್ಲಿ ಈ ಟೀಸರ್​ ಯಶಸ್ವಿಯಾಗಿದೆ. ಈ ಮೊದಲು ‘ಗಂಟುಮೂಟೆ’ ಸಿನಿಮಾ ಮಾಡಿದ್ದ ತಂಡವೇ ಸೇರಿಕೊಂಡು ಈಗ ‘ಕೆಂಡ’ ಸಿನಿಮಾವನ್ನು ಜನರ ಮುಂದಿಡಲು ಬರುತ್ತಿದೆ. ಆ ಕಾರಣದಿಂದಲೂ ಈ ಸಿನಿಮಾ ವಿಶೇಷ ಎನಿಸಿಕೊಂಡಿದೆ. ‘ಗಂಟುಮೂಟೆ’ ಸಿನಿಮಾದ ನಿರ್ದೇಶಕಿ ರೂಪಾ ರಾವ್​ ಅವರು ‘ಕೆಂಡ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ‘ಕೆಂಡ’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಹೊಸ ವಿಡಿಯೋ ಬಿಡುಗಡೆ; ಇಲ್ಲಿದೆ ಝಲಕ್​

‘ಗಂಟುಮೂಟೆ’ ಚಿತ್ರದ ಛಾಯಾಗ್ರಾಹಕರಾಗಿ, ‘ಅಮೇಯುಕ್ತಿ ಸ್ಟುಡಿಯೋಸ್’ ಮೂಲಕ ನಿರ್ಮಾಣದಲ್ಲೂ ಭಾಗಿ ಆಗಿದ್ದ ಸಹದೇವ್ ಕೆಲವಡಿ ಅವರು ಈಗ ‘ಕೆಂಡ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಂಗಭೂಮಿ ಕಲಾವಿದರೇ ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಗೋಪಾಲ ದೇಶಪಾಂಡೆ, ಬಿ.ವಿ. ಭರತ್, ವಿನೋದ್ ರವೀಂದ್ರನ್, ಪ್ರಣವ್ ಶ್ರೀಧರ್ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್ ಕಾಯ್ಕಿಣಿ ಅವರು ‘ಕೆಂಡ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ ಎಂಬುದು ವಿಶೇಷ. 2 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಶ್ರೇಯಾಂಕ್ ನಂಜಪ್ಪ ಅವರು ಈ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?