AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varaha Roopam Song: ‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’; ಕೇರಳ ಕೋರ್ಟ್​ನಿಂದ ಹೊಸ ಆದೇಶ

Kantara: ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ‘ಕೋಯಿಕ್ಕೋಡ್​ ನ್ಯಾಯಾಲಯ..’ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಒಪ್ಪಿಗೆ ಇಲ್ಲದೆ ಹಾಡನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿತ್ತು.

Varaha Roopam Song: ‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’; ಕೇರಳ ಕೋರ್ಟ್​ನಿಂದ ಹೊಸ ಆದೇಶ
ವರಾಹ ರೂಪಂ-ನವರಸಂ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 25, 2022 | 5:32 PM

Share

‘ಕಾಂತಾರ’ ಚಿತ್ರದ (Kantara Movie) ‘ವರಾಹ ರೂಪಂ..’ ಹಾಡು ಸದ್ಯ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್ ಅನ್ನು ‘ವರಾಹ ರೂಪಂ..’ನಲ್ಲಿ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ‘ತೈಕ್ಕುಡಂ ಬ್ರಿಡ್ಜ್​’ನವರು ಕೇರಳದ ಕೋಯಿಕ್ಕೋಡ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​ ‘ವರಾಹ ರೂಪಂ..’ (Varaha Roopam..) ಹಾಡನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ಆದೇಶ ಹೊರಡಿಸಿತ್ತು. ಈ ಸಂಬಂಧ ‘ಹೊಂಬಾಳೆ ಫಿಲ್ಮ್ಸ್’ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಈ ವೇಳೆ ಕೋರ್ಟ್ ತೀರ್ಪು ಕಾಂತಾರದ ಕಡೆಯಾಗಿದೆ.

‘ನವರಸಂ..’ ಹಾಡಿನಲ್ಲಿರುವ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಅಭಿಪ್ರಾಯವನ್ನು ಪ್ರೇಕ್ಷಕರು ನೀಡಿದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ದಾಖಲು ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ‘ಕೋಯಿಕ್ಕೋಡ್​ ನ್ಯಾಯಾಲಯ..’ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಒಪ್ಪಿಗೆ ಇಲ್ಲದೆ ಹಾಡನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿತ್ತು. ಈಗ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ. ಇದರಿಂದ ಚಿತ್ರತಂಡಕ್ಕೆ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: ‘ಕಾಂತಾರ’ ಚಿತ್ರತಂಡಕ್ಕೆ ಅರ್ಧ ಸಿಹಿ.. ಅರ್ಧ ಕಹಿ..: ಕೋರ್ಟ್​ ತೀರ್ಪಿನ ಬಗ್ಗೆ ವಕೀಲ ಶಶಿರಾಜ್ ಕಾವೂರು ಹೇಳಿದ್ದಿಷ್ಟು

ಇದನ್ನೂ ಓದಿ
Image
‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್​
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ

‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು ಕೇಳಿ ಎಲ್ಲರೂ ಥ್ರಿಲ್ ಆಗಿದ್ದರು. ಕೋರ್ಟ್​ನಿಂದ ಹಾಡಿಗೆ ತಡೆ ಬಿದ್ದಿದ್ದ ಕಾರಣ ಪ್ರೈಮ್​​ನಲ್ಲಿ ಪ್ರಸಾರಕಂಡ ವರ್ಷನ್​​ನಲ್ಲಿ ಹಾಡಿನ ಟೋನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡಿನ ಟೋನ್​ನಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಇದನ್ನು ಕೇಳಿ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಈ ಹಾಡನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ಹೊಸ ಹಾಡಿನ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕೋರ್ಟ್​ನಲ್ಲಿ ನಡೆಯುತ್ತಿರುವ ಕೇಸ್ ವಿಚಾರದಲ್ಲಿ ಹೊಂಬಾಳೆ ಫಿಲ್ಮ್ಸ್​ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 3:24 pm, Fri, 25 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ