ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’, ‘ವೆಂಕ್ಯಾ’ ಸಿನಿಮಾ

ಗೋವಾ ಸಿನಿಮೋತ್ಸವದ ‘ಇಂಡಿಯನ್ ಪನೋರಮಾ’ ವಿಭಾಗದಲ್ಲಿ ಕನ್ನಡದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಸಿನಿಮಾಗಳು ಪ್ರದರ್ಶನ ಕಾಣಲಿವೆ. ನವೆಂಬರ್​ 20ರಿಂದ ನ.28ರವರೆಗೆ ಈ ಚಿತ್ರೋತ್ಸವ ನಡೆಯುತ್ತಿದ್ದು, ಆರಂಭಿಕ ಚಿತ್ರವಾಗಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಪ್ರದರ್ಶನ ಆಗಲಿದೆ. ಈ ಸಿನಿಮೋತ್ಸವಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಇದೆ.

ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’, ‘ವೆಂಕ್ಯಾ’ ಸಿನಿಮಾ
ಕೆರೆಬೇಟೆ, ವೆಂಕ್ಯಾ
Follow us
|

Updated on: Oct 24, 2024 | 9:49 PM

ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ‘ಕೆರೆಬೇಟೆ’ ಹಾಗೂ ‘ವೆಂಕ್ಯಾ’ ಸಿನಿಮಾಗಳು ಆಯ್ಕೆಯಾಗಿದೆ. ಗೋವಾ ಫಿಲ್ಮ್​ ಫೆಸ್ಟಿವಲ್​ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿ ಆಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ಕನ್ನಡ ಸಿನಿಮಾಗಳಾದ ‘ಕೆರೆಬೇಟೆ’ ಹಾಗೂ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

ಗೋವಾ ಫಿಲ್ಮ್​ ಫೆಸ್ಟಿವಲ್​ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್​ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ.

ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಸಿನಿಮಾ ಇದೆ. ಈ ಸಿನಿಮಾಗೆ ಸಾಗರ್​ ಪುರಾಣಿಕ್ ಅವರು ನಿರ್ದೇಶನ ಮಾಡಿದ್ದಾರೆ. ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

‘ಕೆರೆಬೇಟೆ’ ಸಿನಿಮಾಗೆ ರಾಜ್​ಗುರು ಅವರು ನಿರ್ದೇಶನ ಮಾಡಿದ್ದಾರೆ. ಮಲೆನಾಡಿನ ಹಿನ್ನೆಲೆಯ ಕಥೆ ಇರುವ ಈ ಸಿನಿಮಾದಲ್ಲಿ ಗೌರಿ ಶಂಕರ್​ ಅವರು ಹೀರೋ ಆಗಿ ನಟಿಸಿದ್ದಾರೆ. ಅವರೇ ನಿರ್ಮಾಣ ಕೂಡ ಮಾಡಿದ್ದಾರೆ. ಅವರ ಜೊತೆ ಬಿಂದು ಗೌಡ ಅವರು ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಕುಮಾರ್, ಹರಿಣಿ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Kerebete Review: ಕುತೂಹಲಭರಿತ ಕೆರೆಬೇಟೆಯಲ್ಲಿ ಊಹಿಸಲಾಗದ ಟ್ವಿಸ್ಟ್​

‘ಕಲ್ಕಿ 2898 ಎಡಿ’, ‘ಮಂಜುಮೇಲ್ ಬಾಯ್ಸ್​’, ‘12th ಫೇಲ್​’ ಮುಂತಾದ ಸಿನಿಮಾಗಳು ಕೂಡ ಆಯ್ಕೆ ಆಗಿದೆ. ನ್ಯಾಷನಲ್ ಫಿಲ್ಮ್​ ಡೆವೆಲಪ್​ಮೆಂಟ್​ ಕಾರ್ಪೊರೇಷನ್, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಗೋವಾ ಸರ್ಕಾರದ ಸಹಯೋಗದಲ್ಲಿ ‘ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವ’ ನಡೆಯಲಿದೆ. ನ.20ರಿಂದ ನ.28ರವರೆಗೆ ಹಲವು ಸಿನಿಮಾಗಳು ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?