ಗೌರಿಶಂಕರ್ ಅಭಿನಯದ ‘ಕೆರೆಬೇಟೆ’ ಸಿನಿಮಾಗೆ 50 ದಿನದ ಸಂಭ್ರಮ; ಆದರೆ..

ಮಲೆನಾಡಿನ ಕಥೆಯನ್ನು ಹೊಂದಿದ ‘ಕೆರೆಬೇಟೆ’ ಸಿನಿಮಾ ಬಿಡುಗಡೆಯಾಗಿ 50 ದಿನಗಳನ್ನು ಪೂರೈಸಿದೆ. ‘ಜನಮನ ಸಿನಿಮಾ’ ಬ್ಯಾನರ್​ ಮೂಲಕ ನಿರ್ಮಾಣ ಆದ ಈ ಚಿತ್ರದಲ್ಲಿ ಗೌರಿಶಂಕರ್​ ಮತ್ತು ಬಿಂದು ಶಿವರಾಮ್​ ಜೋಡಿಯಾಗಿ ನಟಿಸಿದ್ದಾರೆ. ರಾಜ್​ ಗುರು ನಿರ್ದೇಶನ ಮಾಡಿದ್ದಾರೆ. 50 ಡೇಸ್​ ಪ್ರಯುಕ್ತ ಚಿತ್ರತಂಡದವರು ಮಾಧ್ಯಮಗಳ ಎದುರು ಬಂದಿದ್ದಾರೆ.

ಗೌರಿಶಂಕರ್ ಅಭಿನಯದ ‘ಕೆರೆಬೇಟೆ’ ಸಿನಿಮಾಗೆ 50 ದಿನದ ಸಂಭ್ರಮ; ಆದರೆ..
ಗೌರಿಶಂಕರ್​, ಬಿಂದು ಶಿವರಾಮ್​
Follow us
|

Updated on: May 27, 2024 | 9:41 PM

ಈ ವರ್ಷ ತೆರೆಕಂಡು ಸದ್ದು ಮಾಡಿದ ಕನ್ನಡದ ಕೆಲವೇ ಚಿತ್ರಗಳಲ್ಲಿ ‘ಕೆರೆಬೇಟೆ’ ಸಿನಿಮಾ (Kerebete Movie) ಕೂಡ ಇದೆ. ಈ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದೆ. ಗೌರಿಶಂಕರ್ ಮುಖ್ಯ ಭೂಮಿಕೆ ನಿಭಾಯಿಸಿದ ಈ ಚಿತ್ರಕ್ಕೆ ರಾಜ್​ಗುರು ಅವರ ನಿರ್ದೇಶನವಿದೆ. 50 ದಿನ ಪೂರೈಸಿದ ಖುಷಿಯಲ್ಲಿ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಜನರಿಂದ, ವಿಮರ್ಶಕರಿಂದ ‘ಕೆರೆಬೇಟೆ’ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿದೆ. ಆದರೆ ಕಮರ್ಷಿಯಲ್​ ದೃಷ್ಟಿಯಲ್ಲಿ ನಿರೀಕ್ಷಿತ ಯಶಸ್ಸು ಸಿಗಲಿಲ್ಲ ಎಂಬ ಬೇಸರ ಈ ಚಿತ್ರತಂಡಕ್ಕೆ ಇದೆ. ಈ ಬಗ್ಗೆ ಗೌರಿಶಂಕರ್​ (Gowri Shankar) ಅವರು ಮಾತನಾಡಿದರು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಶಶಾಂಕ್, ದಯಾಳ್ ಪದ್ಮನಾಭ್​, ನಿರ್ಮಾಪಕ ಉದಯ್​ ಮೆಹ್ತಾ, ನಟ ಪ್ರಥಮ್ ಕೂಡ ಈ ಸುದ್ದಿಗೋಷ್ಠಿಯಲ್ಲಿ ಭಾಗಿಯಾದರು.

50 ದಿನಗಳ ಸಂಭ್ರಮದ ಬಗ್ಗೆ ಗೌರಿಶಂಕರ್​ ಮಾತನಾಡಿದ್ದಾರೆ. ‘ನಮ್ಮ ಸಿನಿಮಾ ಕಮರ್ಷಿಯಲಿ ದೊಡ್ಡ ಮಟ್ಟಕ್ಕೆ ಹಿಟ್​ ಆಗಿಲ್ಲ. ಆದರೆ ಜನರು ಉತ್ತಮವಾಗಿ ವಿಮರ್ಶೆ ನೀಡಿದ್ದಾರೆ. ನಾನು ಎಲ್ಲಿಯೇ ಹೋದರೂ ಕೂಡ ‘ಕೆರೆಬೇಟೆ’ ಸಿನಿಮಾದ ಹೀರೋ ಅಂತ ಜನರು ಗುರುತಿಸುತ್ತಿದ್ದಾರೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳು ಪ್ರದರ್ಶನ ಆಗಿದೆ. ಕೆಲವು ಚಿತ್ರಮಂದಿರಗಳಲ್ಲಿ ಇನ್ನೂ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ನನಗೆ ದೊಡ್ಡ ಕನಸಾಗಿತ್ತು. ಕಮರ್ಷಿಯಲ್​ ಸಕ್ಸಸ್ ಆಗಲಿಲ್ಲ ಎಂಬ ಬೇಸರವಿದೆ. ಇನ್ಮುಂದೆ ಒಳ್ಳೆಯ ಕಥೆ ಬಂದರೆ ಅಭಿನಯಿಸುತ್ತೇನೆ. ಸದ್ಯಕ್ಕಂತೂ ನಿರ್ಮಾಣ ಮಾಡಲ್ಲ’ ಎಂದು ಗೌರಿಶಂಕರ್​ ಹೇಳಿದರು.

ಈ ಸಿನಿಮಾದಿಂದ ನಿರ್ದೇಶಕ ರಾಜ್​ ಗುರು ಅವರಿಗೆ ಹೆಸರು ಬಂದಿದೆ. ‘ನನ್ನ ಕನಸನ್ನು ನನಸು ಮಾಡಿದ ‘ಜನಮನ ಸಿನಿಮಾ’ ಸಂಸ್ಥೆಗೆ ಧನ್ಯವಾದ. ಈ ಚಿತ್ರಕ್ಕೆ ದೊಡ್ಡ ದೊಡ್ಡ ನಿರ್ದೇಶಕರು, ಹೀರೋಗಳು, ನಾಯಕಿಯರು ಬೆಂಬಲ ನೀಡಿದರು. ಅವರೆಲ್ಲರಿಗೂ ಥ್ಯಾಂಕ್ಸ್​’ ಎಂದು ಅವರು ಹೇಳಿದ್ದಾರೆ. ಒಳ್ಳೆಯ ವಿಮರ್ಶೆ ಸಿಕ್ಕಿದ್ದಕ್ಕೆ ಖುಷಿ ಇದೆ ಎಂದು ನಟಿ ಬಿಂದು ಶಿವರಾಮ್​ ಹೇಳಿದರು. ನಟಿ ಹರಿಣಿ ಶ್ರೀಕಾಂತ್​ ಕೂಡ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Kerebete Review: ಕುತೂಹಲಭರಿತ ಕೆರೆಬೇಟೆಯಲ್ಲಿ ಊಹಿಸಲಾಗದ ಟ್ವಿಸ್ಟ್​

‘ಕೆರೆಬೇಟೆ’ ಸಿನಿಮಾದ 50ನೇ ದಿನದ ಈ ಕಾರ್ಯಕ್ರಮದಲ್ಲಿ ದಯಾಳ್ ಪದ್ಮನಾಭ್​, ಶಶಾಂಕ್, ಉದಯ್ ಮೆಹ್ತಾ ಅವರು ಚಿತ್ರರಂಗದಲ್ಲಿನ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಆ ಮೂಲಕ, ಸಿನಿಮಾ ಯಶಸ್ಸು ಕಂಡಿಲ್ಲ ಎಂಬ ಬೇಸರದಲ್ಲಿದ್ದ ನಟ, ನಿರ್ಮಾಪಕ ಗೌರಿಶಂಕರಿಗೆ ಸಮಾಧಾನ ಮಾಡಿದರು. ‘ಈ ಚಿತ್ರವನ್ನು ಜನರು ಒಪ್ಪಿಕೊಂಡಿದ್ದಾರೆ. ಉತ್ತಮ ವಿಮರ್ಶೆ ನೀಡಿದ್ದಾರೆ. ಇದಕ್ಕಿಂತ ಇನ್ನೇನು ಬೇಕು’ ಎಂದರು. ‘50 ದಿನದ ಸಂಭ್ರಮದಲ್ಲಿ ಬೇಸರದ ಮಾತುಗಳು ಬೇಡ’ ಎಂದರು ಪ್ರಥಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ