AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್

Puneeth Rajkumar: ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ಪಡೆಯುತ್ತಿರುವ ಕುರಿತಂತೆ ಫಿಲ್ಮ್ ಚೇಂಬರ್ ಸದಸ್ಯರು ಆರೋಪ ಮಾಡಿದ್ದಾರೆ. ಇದಕ್ಕೆ ಮಂಡಳಿ ಅಧ್ಯಕ್ಷ ಜೈರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 07, 2021 | 9:45 AM

Share

ಬೆಂಗಳೂರು: ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ ಎದುರಾಗಿದೆ. ನವೆಂಬರ್ 16ರಂದು ಫಿಲ್ಮ್ ಚೇಂಬರ್ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿರುವ ಆರೋಪ ಎದುರಾಗಿದೆ. ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ಜೆ.ಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಕೆಲವು ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ‘‘ಫಿಲ್ಮ್ ಚೇಂಬರ್‌ನ ಖಾತೆಗೆ ಹಣವನ್ನು ಹಾಕಿಸಿಕೊಳ್ಳುತ್ತಿಲ್ಲ. ತಮ್ಮ ಹೆಸರಿನಲ್ಲಿ ಚೆಕ್ ಪಡೆದು, ತಮ್ಮ ವೈಯಕ್ತಿಕ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಅದರ ಲೆಕ್ಕ ಹೇಗೆ ಸಿಗುತ್ತದೆ? ಒಬ್ಬ ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ಲದಿದ್ದರೆ ನಾವು ಸದಸ್ಯರೇ ಸೇರಿ ಹಣ ಕೊಡುತ್ತೇವೆ’’ ಎಂದು ಕೆಲ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಪ್ರತಿಕ್ರಿಯಿಸಿದ್ದು, ಆರೋಪವನ್ನು ತಳ್ಳಿ ಹಾಕಿದ್ದಾರೆ. 

ಆರೋಪದ ಕುರಿತಂತೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಹೇಳಿದ್ದೇನು? ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪಕ್ಕೆ ಸಂಬಂಧಪಟ್ಟಂತೆ, ಫಿಲ್ಮ್ ಚೇಂಬರ್ ವಿರುದ್ಧದ ಆರೋಪಕ್ಕೆ ಅಧ್ಯಕ್ಷ ಜೈರಾಜ್ ಸ್ಪಷ್ಟನೆ ನೀಡಿದ್ದಾರೆ. ಟಿವಿ9ನೊಂದಿಗೆ ಮಾತನಾಡಿರುವ ಅವರು, ‘‘ಚೇಂಬರ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರಿಸಬಾರದು. ಕಾರ್ಯಕ್ರಮ ನಡೆಸಲು ವಾಣಿಜ್ಯ ಮಂಡಳಿಯಲ್ಲಿ ಹಣ ಇದೆ. ನಮಗೆ ಯಾರ ಹಣವೂ ಬೇಕಾಗಿಲ್ಲ’’ ಎಂದು ನುಡಿದಿದ್ದಾರೆ. ಈ ಮೂಲಕ ಫಿಲ್ಮ್ ಚೇಂಬರ್ ಸದಸ್ಯ, ನಿರ್ಮಾಪಕ ಜೆ.ಜೆ ಶ್ರೀನಿವಾಸ್ ಆರೋಪವನ್ನು ಜೈರಾಜ್ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ:

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!