AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್

Puneeth Rajkumar: ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ಪಡೆಯುತ್ತಿರುವ ಕುರಿತಂತೆ ಫಿಲ್ಮ್ ಚೇಂಬರ್ ಸದಸ್ಯರು ಆರೋಪ ಮಾಡಿದ್ದಾರೆ. ಇದಕ್ಕೆ ಮಂಡಳಿ ಅಧ್ಯಕ್ಷ ಜೈರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 07, 2021 | 9:45 AM

Share

ಬೆಂಗಳೂರು: ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ ಎದುರಾಗಿದೆ. ನವೆಂಬರ್ 16ರಂದು ಫಿಲ್ಮ್ ಚೇಂಬರ್ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿರುವ ಆರೋಪ ಎದುರಾಗಿದೆ. ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ಜೆ.ಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಕೆಲವು ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ‘‘ಫಿಲ್ಮ್ ಚೇಂಬರ್‌ನ ಖಾತೆಗೆ ಹಣವನ್ನು ಹಾಕಿಸಿಕೊಳ್ಳುತ್ತಿಲ್ಲ. ತಮ್ಮ ಹೆಸರಿನಲ್ಲಿ ಚೆಕ್ ಪಡೆದು, ತಮ್ಮ ವೈಯಕ್ತಿಕ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಅದರ ಲೆಕ್ಕ ಹೇಗೆ ಸಿಗುತ್ತದೆ? ಒಬ್ಬ ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ಲದಿದ್ದರೆ ನಾವು ಸದಸ್ಯರೇ ಸೇರಿ ಹಣ ಕೊಡುತ್ತೇವೆ’’ ಎಂದು ಕೆಲ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಪ್ರತಿಕ್ರಿಯಿಸಿದ್ದು, ಆರೋಪವನ್ನು ತಳ್ಳಿ ಹಾಕಿದ್ದಾರೆ. 

ಆರೋಪದ ಕುರಿತಂತೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಹೇಳಿದ್ದೇನು? ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪಕ್ಕೆ ಸಂಬಂಧಪಟ್ಟಂತೆ, ಫಿಲ್ಮ್ ಚೇಂಬರ್ ವಿರುದ್ಧದ ಆರೋಪಕ್ಕೆ ಅಧ್ಯಕ್ಷ ಜೈರಾಜ್ ಸ್ಪಷ್ಟನೆ ನೀಡಿದ್ದಾರೆ. ಟಿವಿ9ನೊಂದಿಗೆ ಮಾತನಾಡಿರುವ ಅವರು, ‘‘ಚೇಂಬರ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರಿಸಬಾರದು. ಕಾರ್ಯಕ್ರಮ ನಡೆಸಲು ವಾಣಿಜ್ಯ ಮಂಡಳಿಯಲ್ಲಿ ಹಣ ಇದೆ. ನಮಗೆ ಯಾರ ಹಣವೂ ಬೇಕಾಗಿಲ್ಲ’’ ಎಂದು ನುಡಿದಿದ್ದಾರೆ. ಈ ಮೂಲಕ ಫಿಲ್ಮ್ ಚೇಂಬರ್ ಸದಸ್ಯ, ನಿರ್ಮಾಪಕ ಜೆ.ಜೆ ಶ್ರೀನಿವಾಸ್ ಆರೋಪವನ್ನು ಜೈರಾಜ್ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ:

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ