Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಯೋಧ್ಯೆ ರಾಮ ಮಂದಿರಕ್ಕೆ ಯಶ್​ 50 ಕೋಟಿ ರೂ. ಕೊಟ್ರು ಅಂತ ಹಬ್ಬಿದೆ ಸುಳ್ಳು ಸುದ್ದಿ; ಫೋಟೋ ಹಿಂದಿನ ಸತ್ಯವೇನು?

Yash | Ayodhya Ram Mandir: ‘ರಾಮ ಮಂದಿರ ನಿರ್ಮಾಣಕ್ಕೆ​ ಯಶ್ 50 ಕೋಟಿ ರೂ. ದೇಣಿಗೆ ನೀಡಿದ್ದಾರೆ’ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದರ ಜತೆಗೆ ಒಂದು ಫೋಟೋ ಹಂಚಿಕೊಳ್ಳಲಾಗಿದೆ.

Yash: ಅಯೋಧ್ಯೆ ರಾಮ ಮಂದಿರಕ್ಕೆ ಯಶ್​ 50 ಕೋಟಿ ರೂ. ಕೊಟ್ರು ಅಂತ ಹಬ್ಬಿದೆ ಸುಳ್ಳು ಸುದ್ದಿ; ಫೋಟೋ ಹಿಂದಿನ ಸತ್ಯವೇನು?
ಯಶ್​ ವೈರಲ್​ ಫೋಟೋ
Follow us
TV9 Web
| Updated By: ಮದನ್​ ಕುಮಾರ್​

Updated on: Sep 01, 2022 | 11:08 AM

ನಟ ಯಶ್ (Yash) ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಆಗುತ್ತಲೇ ಇರುತ್ತದೆ. ಆದರೆ ಕೆಲವರು ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುತ್ತಾರೆ. ಈಗ ಯಶ್​ ಅವರ ಉದಾರತೆ ಕುರಿತು ಒಂದು ಫೇಕ್​ ನ್ಯೂಸ್​ ಹರಿದಾಡುತ್ತಿದೆ. ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ. ಅದಕ್ಕಾಗಿ ದೇಶದ ಕೋಟ್ಯಂತರ ಮಂದಿ ದೇಣಿಗೆ ನೀಡುತ್ತಿದ್ದಾರೆ. ರಾಮ ಮಂದಿರ (Ram Mandir) ನಿರ್ಮಾಣಕ್ಕೆ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಬರೋಬ್ಬರಿ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಕುರಿತು ಕೆಲವರು ಫೋಟೋ ಸಮೇತ ಪೋಸ್ಟ್​ ಮಾಡಿದ್ದಾರೆ. ಆದರೆ ಆ ಫೋಟೋದ ಅಸಲಿಯತ್ತು ಬೇರೆ ಇದೆ.

ಈಗಾಗಲೇ ಯಶ್​ ಅವರು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಕರ್ನಾಟಕದ ಕೆರೆಗಳ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗಾಗಿ ಅವರು ಕೋಟ್ಯಂತರ ರೂಪಾಯಿ ಕರ್ಚು ಮಾಡಿದ್ದಾರೆ. ಯಶ್​ ಅವರ ‘ಯಶೋಮಾರ್ಗ’ ಸಂಸ್ಥೆಯಿಂದ ಅನೇಕರಿಗೆ ಸಹಾಯ ಆಗಿದೆ. ಆದರೆ ಸದ್ಯಕ್ಕೆ ರಾಮ ಮಂದಿರದ ದೇಣಿಗೆ ಕುರಿತು ಹರಿದಾಡಿರುವುದು ಮಾತ್ರ ಶುದ್ಧ ಸುಳ್ಳು.

‘ದಕ್ಷಿಣದ ಸ್ಟಾರ್​ ನಟ ಯಶ್​ ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದರು. ಈ ವೇಳೆ ರಾಮ ಮಂದಿರ ನಿರ್ಮಾಣಕ್ಕಾಗಿ​ 50 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ತಿಳಿಸಿದರು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಪೋಸ್ಟ್​ ಮಾಡಿದ್ದಾರೆ. ಅದರ ಜೊತೆಗೆ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ಅಂದಹಾಗೆ, ಆ ಫೋಟೋದ ಅಸಲಿಯತ್ತು ಬೇರೆ ಇದೆ. ಅದು ಅಯೋಧ್ಯಗೆ ಭೇಟಿ ನೀಡಿದ ಸಂದರ್ಭದ ಫೋಟೋ ಅಲ್ಲ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಿಡುಗಡೆಗೂ ಮುನ್ನ ಅವರು ತಿರುಪತಿಗೆ ಭೇಟಿ ನೀಡಿದ್ದರು. ಆ ಸಂದರ್ಭದ ಫೋಟೋವನ್ನೇ ಬಳಸಿಕೊಂಡು ಈಗ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

(ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಫೇಕ್​​ ಪೋಸ್ಟ್​)

ಸ್ಟಾರ್​ ನಟರ ಕುರಿತು ಈ ರೀತಿ ಅನೇಕ ಫೇಕ್​ ನ್ಯೂಸ್​ಗಳು ಹರಿದಾಡುತ್ತವೆ. ಹಾಗಾಗಿ ಅವುಗಳಿಗೆಲ್ಲ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಆದರೆ ಅಂಥ ಸುಳ್ಳು ಸುದ್ದಿಗಳು ಜನರ ಭಾವನೆಗೆ ಸಂಬಂಧಿಸಿದ್ದಾದರೆ ಖಂಡಿತವಾಗಿಯೂ ಸ್ಪಷ್ಟನೆ ನೀಡಬೇಕಾಗುತ್ತದೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದಿದ್ದಾರೆ. ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರಲ್ಲಿ ಅವರು ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಿವುಡ್​ನ ಸ್ಟಾರ್ ಹೀರೋಗಳನ್ನೂ ಮೀರಿಸಿದೆ ಅವರ ಸಕ್ಸಸ್​. ಅವರ ಮುಂದಿನ ಚಿತ್ರದ ಘೋಷಣೆಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ