AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಯೋಧ್ಯೆ ರಾಮ ಮಂದಿರಕ್ಕೆ ಯಶ್​ 50 ಕೋಟಿ ರೂ. ಕೊಟ್ರು ಅಂತ ಹಬ್ಬಿದೆ ಸುಳ್ಳು ಸುದ್ದಿ; ಫೋಟೋ ಹಿಂದಿನ ಸತ್ಯವೇನು?

Yash | Ayodhya Ram Mandir: ‘ರಾಮ ಮಂದಿರ ನಿರ್ಮಾಣಕ್ಕೆ​ ಯಶ್ 50 ಕೋಟಿ ರೂ. ದೇಣಿಗೆ ನೀಡಿದ್ದಾರೆ’ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದರ ಜತೆಗೆ ಒಂದು ಫೋಟೋ ಹಂಚಿಕೊಳ್ಳಲಾಗಿದೆ.

Yash: ಅಯೋಧ್ಯೆ ರಾಮ ಮಂದಿರಕ್ಕೆ ಯಶ್​ 50 ಕೋಟಿ ರೂ. ಕೊಟ್ರು ಅಂತ ಹಬ್ಬಿದೆ ಸುಳ್ಳು ಸುದ್ದಿ; ಫೋಟೋ ಹಿಂದಿನ ಸತ್ಯವೇನು?
ಯಶ್​ ವೈರಲ್​ ಫೋಟೋ
TV9 Web
| Edited By: |

Updated on: Sep 01, 2022 | 11:08 AM

Share

ನಟ ಯಶ್ (Yash) ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಆಗುತ್ತಲೇ ಇರುತ್ತದೆ. ಆದರೆ ಕೆಲವರು ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುತ್ತಾರೆ. ಈಗ ಯಶ್​ ಅವರ ಉದಾರತೆ ಕುರಿತು ಒಂದು ಫೇಕ್​ ನ್ಯೂಸ್​ ಹರಿದಾಡುತ್ತಿದೆ. ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ. ಅದಕ್ಕಾಗಿ ದೇಶದ ಕೋಟ್ಯಂತರ ಮಂದಿ ದೇಣಿಗೆ ನೀಡುತ್ತಿದ್ದಾರೆ. ರಾಮ ಮಂದಿರ (Ram Mandir) ನಿರ್ಮಾಣಕ್ಕೆ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಬರೋಬ್ಬರಿ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಕುರಿತು ಕೆಲವರು ಫೋಟೋ ಸಮೇತ ಪೋಸ್ಟ್​ ಮಾಡಿದ್ದಾರೆ. ಆದರೆ ಆ ಫೋಟೋದ ಅಸಲಿಯತ್ತು ಬೇರೆ ಇದೆ.

ಈಗಾಗಲೇ ಯಶ್​ ಅವರು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಕರ್ನಾಟಕದ ಕೆರೆಗಳ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗಾಗಿ ಅವರು ಕೋಟ್ಯಂತರ ರೂಪಾಯಿ ಕರ್ಚು ಮಾಡಿದ್ದಾರೆ. ಯಶ್​ ಅವರ ‘ಯಶೋಮಾರ್ಗ’ ಸಂಸ್ಥೆಯಿಂದ ಅನೇಕರಿಗೆ ಸಹಾಯ ಆಗಿದೆ. ಆದರೆ ಸದ್ಯಕ್ಕೆ ರಾಮ ಮಂದಿರದ ದೇಣಿಗೆ ಕುರಿತು ಹರಿದಾಡಿರುವುದು ಮಾತ್ರ ಶುದ್ಧ ಸುಳ್ಳು.

‘ದಕ್ಷಿಣದ ಸ್ಟಾರ್​ ನಟ ಯಶ್​ ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದರು. ಈ ವೇಳೆ ರಾಮ ಮಂದಿರ ನಿರ್ಮಾಣಕ್ಕಾಗಿ​ 50 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ತಿಳಿಸಿದರು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಪೋಸ್ಟ್​ ಮಾಡಿದ್ದಾರೆ. ಅದರ ಜೊತೆಗೆ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ಅಂದಹಾಗೆ, ಆ ಫೋಟೋದ ಅಸಲಿಯತ್ತು ಬೇರೆ ಇದೆ. ಅದು ಅಯೋಧ್ಯಗೆ ಭೇಟಿ ನೀಡಿದ ಸಂದರ್ಭದ ಫೋಟೋ ಅಲ್ಲ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಿಡುಗಡೆಗೂ ಮುನ್ನ ಅವರು ತಿರುಪತಿಗೆ ಭೇಟಿ ನೀಡಿದ್ದರು. ಆ ಸಂದರ್ಭದ ಫೋಟೋವನ್ನೇ ಬಳಸಿಕೊಂಡು ಈಗ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

(ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಫೇಕ್​​ ಪೋಸ್ಟ್​)

ಸ್ಟಾರ್​ ನಟರ ಕುರಿತು ಈ ರೀತಿ ಅನೇಕ ಫೇಕ್​ ನ್ಯೂಸ್​ಗಳು ಹರಿದಾಡುತ್ತವೆ. ಹಾಗಾಗಿ ಅವುಗಳಿಗೆಲ್ಲ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಆದರೆ ಅಂಥ ಸುಳ್ಳು ಸುದ್ದಿಗಳು ಜನರ ಭಾವನೆಗೆ ಸಂಬಂಧಿಸಿದ್ದಾದರೆ ಖಂಡಿತವಾಗಿಯೂ ಸ್ಪಷ್ಟನೆ ನೀಡಬೇಕಾಗುತ್ತದೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದಿದ್ದಾರೆ. ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರಲ್ಲಿ ಅವರು ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಿವುಡ್​ನ ಸ್ಟಾರ್ ಹೀರೋಗಳನ್ನೂ ಮೀರಿಸಿದೆ ಅವರ ಸಕ್ಸಸ್​. ಅವರ ಮುಂದಿನ ಚಿತ್ರದ ಘೋಷಣೆಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ