AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ 2: ಯಶ್ ಮತ್ತೊಂದು ಲುಕ್ ರಿವೀಲ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮೋಸ್ಟ್ ಎಕ್ಸ್​ಪೆಕ್ಟೆಡ್ ಸಿನಿಮಾ ಕೆಜಿಎಫ್ 2 ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗ್ಲೇ ಚಿತ್ರತಂಡ ಕೂಡ ಅಕ್ಟೋಬರ್ 23 ರಂದು ಕೆಜಿಎಫ್ 2 ರಿಲೀಸ್ ಮಾಡೋದಾಗಿ ಹೇಳಿಕೊಂಡಿದೆ. ಆದ್ರೆ, ಕೊರೊನಾ ಕೆಜಿಎಫ್ 2 ಚಿತ್ರತಂಡ ನಿಗದಿಪಡಿಸಿದ ದಿನದಂದೇ ಸಿನಿಮಾ ಬಿಡುಗಡೆ ಮಾಡೋಕೆ ಬಿಡುತ್ತಾ? ಅನ್ನೋ ಪ್ರಶ್ನೆನೂ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇದೇ ಗ್ಯಾಪ್​ನಲ್ಲಿ ಹಿಂದೆಂದೂ ನೋಡಿರದ ಕೆಜಿಎಫ್ 2 ಚಿತ್ರದ ಹೊಚ್ಚ ಹೊಸ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಕೊರೊನಾ ಮಹಾಮಾರಿಯಿಂದ ಇಡೀ ಸ್ಯಾಂಡಲ್​ವುಡ್ […]

ಕೆಜಿಎಫ್ 2: ಯಶ್ ಮತ್ತೊಂದು ಲುಕ್ ರಿವೀಲ್
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 7:54 PM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮೋಸ್ಟ್ ಎಕ್ಸ್​ಪೆಕ್ಟೆಡ್ ಸಿನಿಮಾ ಕೆಜಿಎಫ್ 2 ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗ್ಲೇ ಚಿತ್ರತಂಡ ಕೂಡ ಅಕ್ಟೋಬರ್ 23 ರಂದು ಕೆಜಿಎಫ್ 2 ರಿಲೀಸ್ ಮಾಡೋದಾಗಿ ಹೇಳಿಕೊಂಡಿದೆ. ಆದ್ರೆ, ಕೊರೊನಾ ಕೆಜಿಎಫ್ 2 ಚಿತ್ರತಂಡ ನಿಗದಿಪಡಿಸಿದ ದಿನದಂದೇ ಸಿನಿಮಾ ಬಿಡುಗಡೆ ಮಾಡೋಕೆ ಬಿಡುತ್ತಾ? ಅನ್ನೋ ಪ್ರಶ್ನೆನೂ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇದೇ ಗ್ಯಾಪ್​ನಲ್ಲಿ ಹಿಂದೆಂದೂ ನೋಡಿರದ ಕೆಜಿಎಫ್ 2 ಚಿತ್ರದ ಹೊಚ್ಚ ಹೊಸ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ಕೊರೊನಾ ಮಹಾಮಾರಿಯಿಂದ ಇಡೀ ಸ್ಯಾಂಡಲ್​ವುಡ್ ಸೈಲೆಂಟ್ ಆಗಿದೆ. ಒಂದೆರಡು ಚಿತ್ರತಂಡ ಬಿಟ್ರೆ, ಮತ್ಯಾರೂ ಚಿತ್ರೀಕರಣ ಶುರುಮಾಡಿಲ್ಲ. ಈ ಗ್ಯಾಪ್​ನಲ್ಲೇ ಕೆಜಿಎಫ್ 2 ಸಿನಿಮಾ ಸ್ಟೀಲ್ ಹೊರಬಿದ್ದಿರೋದು ಸಿನಿಮಾ ಪ್ರೇಮಿಗಳಲ್ಲಿ ಹೊಸ ಹುರುಪು ಮೂಡಿದೆ. ಕೆಜಿಎಫ್ 2 ಬಿಡುಗಡೆಗೆ ಕಾದುಕೂತಿರೋ ಯಶ್ ಫ್ಯಾನ್ಸ್​ಗೆ ಸಿನಿಮಾ ಬಿಡುಗಡೆಯ ಮುನ್ಸೂಚನೆ ಸಿಕ್ಕಂತಾಗಿದೆ.

ಅದೇ ಗಡ್ಡ ಬಿಟ್ಟು.. 80 ದಶಕದ ಕಾಸ್ಟ್ಯೂಮ್​ನಲ್ಲಿ ಯಶ್ ಯಾರೊಂದಿಗೋ ಚರ್ಚಿಸುತ್ತಿರೋ ಫೋಟೋ ಇದು. ಕಳೆದ ಕೆಲವು ದಿನಗಳಿಂದ ಕೆಜಿಎಫ್ 2 ಬಗ್ಗೆ ಮಾಹಿತಿನೇ ಇರದೆ ಹೆಣಗಾಡಿದ್ದ ಅಭಿಮಾನಿಗಳು ಈ ಪೋಟೋದಿಂದ ಕೊಂಚ ಸಮಾಧಾನಗೊಂಡಿದ್ದಾರೆ.

ಇನ್ನು ಕೆಜಿಎಫ್ 1ಗಿಂತ ಎರಡನೇ ಚಾಪ್ಟರ್ ಐದು ಪಟ್ಟು ಅದ್ಧೂರಿಯಾಗಿರುತ್ತೆ. ಐದು ಪಟ್ಟು ಆ್ಯಕ್ಷನ್ ಇರುತ್ತೆ ಅಂತ ಚಿತ್ರತಂಡನೇ ಹೇಳಿದೆ. ಇದ್ರೊಂದಿಗೆ ಬಾಲಿವುಡ್ ದಿಗ್ಗಜರಾದ ಸಂಜಯ್ ದತ್ ಹಾಗೂ ರವೀನಾ ಟಂಡನ್ ಕೂಡ ನಟಿಸಿದ್ದಾರೆ. ಹೀಗಾಗಿ ಕೆಜಿಎಫ್ 2 ಬಿಡುಗಡೆಗೆ ಕೇವಲ ಕನ್ನಡದಲ್ಲಷ್ಟೇ ಅಲ್ಲ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಪ್ರೇಕ್ಷಕರೂ ಕಾತುರದಿಂದ ಕಾಯ್ತಿದ್ದಾರೆ.

Published On - 5:29 pm, Tue, 21 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು