AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​

Prashanth Neel | Kichcha Sudeep: ‘ವಿಕ್ರಾಂತ್ ರೋಣ’ ಸಿನಿಮಾಗೆ ದೊಡ್ಡ ಯಶಸ್ಸು ಸಿಗಲಿ ಎಂದು ಎಲ್ಲರೂ ಮನಸಾರೆ ಹರಸಿದ್ದಾರೆ. ಪ್ರಶಾಂತ್​ ನೀಲ್, ರಮ್ಯಾ, ಗಣೇಶ್​​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ವಿಶ್​ ಮಾಡಿದ್ದಾರೆ.

Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
ಕಿಚ್ಚ ಸುದೀಪ್, ಪ್ರಶಾಂತ್ ನೀಲ್
TV9 Web
| Edited By: |

Updated on: Jul 28, 2022 | 1:24 PM

Share

ಕನ್ನಡದ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಒಂದು ಕಾಲದಲ್ಲಿ ಸ್ಯಾಂಡಲ್​ವುಡ್​ ಮಾರುಕಟ್ಟೆ ಚಿಕ್ಕದು ಎಂದು ಹೇಳಲಾಗುತ್ತಿತ್ತು. ಆದರೆ ಈಗ ಹಲವು ಸಿನಿಮಾಗಳು ಆ ಮಾತನ್ನು ಸುಳ್ಳು ಮಾಡಿವೆ. ‘ಕೆಜಿಎಫ್​: ಚಾಪ್ಟರ್​ 2’, ‘777 ಚಾರ್ಲಿ’ ಸಿನಿಮಾಗಳು ದೇಶಾದ್ಯಂತ ಸದ್ದು ಮಾಡಿವೆ. ಈಗ ಅಂಥದ್ದೇ ಭರವಸೆಯೊಂದಿಗೆ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಕೂಡ ಶುಭ ಹಾರೈಸಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಮತ್ತು ಇಡೀ ‘ವಿಕ್ರಾಂತ್​ ರೋಣ’ ತಂಡಕ್ಕೆ ಶುಭವಾಗಲಿ ಎಂದು ಪ್ರಶಾಂ​ತ್​ ನೀಲ್​ (Prashanth Neel) ವಿಶ್​ ಮಾಡಿದ್ದಾರೆ.

ನಿರ್ದೇಶಕ ಅನೂಪ್​ ಭಂಡಾರಿ, ನಿರ್ಮಾಪಕ ಜಾಕ್​ ಮಂಜು, ನಟ ಸುದೀಪ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಸಿನಿಮಾ ಇಂದು (ಜುಲೈ 28) ಭರ್ಜರಿಯಾಗಿ ರಿಲೀಸ್​ ಆಗಿದೆ. ಟ್ರೇಲರ್​ ಮೂಲಕ ಗಮನ ಸೆಳೆದ ಈ ಚಿತ್ರದ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಇಂದು ಫಸ್ಟ್​ ಡೇ ಫಸ್ಟ್​ ಶೋ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ‘ರಾ ರಾ ರಕ್ಕಮ್ಮ..’ ಹಾಡಿಗೆ ಕುಣಿಯುತ್ತಾ ಸಿನಿಪ್ರಿಯರು ಎಂಜಾಯ್ ಮಾಡಿದ್ದಾರೆ. ರಾಜಮೌಳಿ, ಪ್ರಶಾಂತ್​ ನೀಲ್​, ಕಾರ್ತಿ ಮುಂತಾದ ದೊಡ್ಡ ಸೆಲೆಬ್ರಿಟಿಗಳು ಈ ಚಿತ್ರಕ್ಕೆ ಶುಭ ಕೋರಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ
Image
Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
Image
‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?

‘ದೃಶ್ಯ ವೈಭವದಂತಿರುವ ವಿಕ್ರಾಂತ್​ ರೋಣ ಚಿತ್ರದಿಂದ ಕಿಚ್ಚ ಸುದೀಪ್​ ಸರ್​ ಹಾಗೂ ನಿರ್ದೇಶಕ ಅನೂಪ್​ ಭಂಡಾರಿ ಅವರಿಗೆ ಎಲ್ಲ ಯಶಸ್ಸು ಸಿಗಲಿ. ಇಡೀ ತಂಡಕ್ಕೆ ಶುಭವಾಗಲಿ’ ಎಂದು ಪ್ರಶಾಂತ್​ ನೀಲ್​ ಅವರು ಟ್ವೀಟ್​ ಮಾಡಿದ್ದಾರೆ. ಅನೇಕ ಸಂದರ್ಭಗಳಲ್ಲಿ ಸುದೀಪ್​ ಅವರು ‘ಕೆಜಿಎಫ್​ 2’ ಚಿತ್ರದ ಸಾಧನೆಯನ್ನು ಹೊಗಳಿದ್ದುಂಟು. ಈಗ ಅವರಿಗೆ ಆ ಚಿತ್ರದ ನಿರ್ದೇಶಕರಿಂದ ಶುಭ ಹಾರೈಕೆ ಸಿಕ್ಕಿದೆ.

ರಕ್ಷಿತ್​ ಶೆಟ್ಟಿ, ರಿತೇಶ್​ ದೇಶಮುಖ್​, ಜೆನಿಲಿಯಾ ಡಿಸೋಜಾ, ಶರಣ್​, ಸಂತೋಷ್​ ಆನಂದ್​ರಾಮ್​, ಅರ್ಜುನ್​ ಜನ್ಯ, ‘ಪೈಲ್ವಾನ್​’ ನಿರ್ದೇಶಕ ಕೃಷ್ಣ, ಗೋಲ್ಡನ್​ ಸ್ಟಾರ್​ ಗಣೇಶ್​, ತರುಣ್​ ಸುಧೀರ್​, ರಮ್ಯಾ, ಸುನೀಲ್ ಶೆಟ್ಟಿ, ಆರ್​. ಚಂದ್ರು, ಕಬೀರ್​ ದುಹಾನ್​ ಸಿಂಗ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ವಿಶ್ ಮಾಡಿದ್ದಾರೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು