AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sulthana lyrical video: ಅಬ್ಬರಿಸಲು ಬಂದ ‘ಸುಲ್ತಾನ’: ಹೊಸ ಹಾಡು​ ಬಿಡುಗಡೆ ಮಾಡಿದ ‘ಕೆಜಿಎಫ್​: ಚಾಪ್ಟರ್​ 2’ ತಂಡ

KGF Chapter 2 Songs: ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಈಗ ಮೂರನೇ ಗೀತೆಯ ಲಿರಿಕಲ್​ ವಿಡಿಯೋ ಹೊರಬಂದಿದೆ.

Sulthana lyrical video: ಅಬ್ಬರಿಸಲು ಬಂದ ‘ಸುಲ್ತಾನ’: ಹೊಸ ಹಾಡು​ ಬಿಡುಗಡೆ ಮಾಡಿದ ‘ಕೆಜಿಎಫ್​: ಚಾಪ್ಟರ್​ 2’ ತಂಡ
ಯಶ್
Follow us
TV9 Web
| Updated By: ಮದನ್​ ಕುಮಾರ್​

Updated on:Apr 13, 2022 | 11:52 AM

ಹಾಡುಗಳ ಮೂಲಕ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಗಮನ ಸೆಳೆಯುತ್ತಿದೆ. ಈ ಚಿತ್ರದ ‘ತೂಫಾನ್​..’ ಮತ್ತು ‘ಗಗನ ನೀ..’ ಗೀತೆಗಳು ಜನಮನ ಗೆದ್ದಿವೆ. ಈಗ ಈ ಸಿನಿಮಾದ ಮೂರನೇ ಹಾಡು ಬಿಡುಗಡೆ ಆಗಿದೆ. ರವಿ ಬಸ್ರೂರು ಸಂಗೀತ ನೀಡಿರುವ ‘ಸುಲ್ತಾನ..’ ಗೀತೆಯ ಲಿರಿಕಲ್​ ವಿಡಿಯೋ (Sulthana lyrical video) ಇಂದು (ಏ.13) ರಿಲೀಸ್​ ಆಗಿದ್ದು, ಯಶ್​ (Yash) ಅಭಿಮಾನಿಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಕಥಾನಾಯಕನ ಗುಣಗಾನ ಮಾಡುವ ಈ ಗೀತೆಗೆ ರವಿ ಬಸ್ರೂರು ಸಾಹಿತ್ಯ ಬರೆದಿದ್ದಾರೆ. ಸಂತೋಷ್​ ವೆಂಕಿ, ಮೋಹನ್​ ಕೃಷ್ಣ, ಸಚಿನ್​ ಬಸ್ರೂರು, ರವಿ ಬಸ್ರೂರು, ಪುನೀತ್​ ರುದ್ರನಾಗ್​, ಮನೀಶ್​ ದಿನಕರ್​, ವರ್ಷಾ ಆಚಾರ್ಯ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ. ‘ಲಹರಿ ಮ್ಯೂಸಿಕ್​’ ಮೂಲಕ ಈ ಹಾಡಿನ ಕನ್ನಡ, ಮಲಯಾಳಂ, ತೆಲುಗು ಹಾಗೂ ತಮಿಳು ವರ್ಷನ್​ ಬಿಡುಗಡೆ ಆಗಿದೆ. ‘ಎಮ್​ಆರ್​ಟಿ’​ ಮ್ಯೂಸಿಕ್​’​ ಮೂಲಕ ಹಿಂದಿ ಅವತರಣಿಕೆ ರಿಲೀಸ್​ ಆಗಿದೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ‘ಸುಲ್ತಾನ..’ ಲಿರಿಕಲ್​ ವಿಡಿಯೋವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದಲ್ಲಿ ಎಲ್ಲ ಹಾಡುಗಳು ಹಿಟ್​ ಆಗಿದ್ದವು. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಹಾಗಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹಾಡುಗಳ ಮೇಲೆ ನಿರೀಕ್ಷೆ ಜೋರಾಗಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ರವಿ ಬಸ್ರೂರು ಕೆಲಸ ಮಾಡಿದ್ದಾರೆ. ‘ಸುಲ್ತಾನ..’ ಹಾಡು ಕೇಳಿದ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಭೇಷ್​ ಎನ್ನುತ್ತಿದ್ದಾರೆ. ‘ಗಗನ ನೀ..’, ‘ತೂಫಾನ್​..’ ಹಾಗೂ ‘ಸುಲ್ತಾನ..’ ಹಾಡಿನ ಬಳಿಕ ಇನ್ನುಳಿದ ಗೀತೆಗಳನ್ನು ಕೇಳುವ ಕಾತರ ಹೆಚ್ಚಿದೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಗುರುವಾರ (ಏ.14) ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ಈಗಾಗಲೇ ಎಲ್ಲ ಚಿತ್ರಮಂದಿರಗಳ ಎದುರಿನಲ್ಲಿ ಯಶ್​ ಕಟೌಟ್​ಗಳು ರಾರಾಜಿಸುತ್ತಿವೆ. ಮೊದಲ ದಿನ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಮಧ್ಯರಾತ್ರಿಯೇ ಫ್ಯಾನ್ಸ್​ ಶೋ ಆಯೋಜನೆಗೊಂಡಿದೆ. ಒಟ್ಟಾರೆಯಾಗಿ ಭರ್ಜರಿ ಓಪನಿಂಗ್​ ಸಿಗುತ್ತಿದೆ. ಈ ಪರಿ ಕ್ರೇಜ್​ ನೋಡಿದರೆ ಫಸ್ಟ್​ ಡೇ ಕಲೆಕ್ಷನ್​ ಮೂಲಕ ‘ಕೆಜಿಎಫ್​ 2’ ಚಿತ್ರ ಹೊಸ ದಾಖಲೆ ಬರೆಯುವುದು ಗ್ಯಾರಂಟಿ. ಪರಭಾಷೆಯ ಅನೇಕ ಚಿತ್ರಗಳ ರೆಕಾರ್ಡ್​ ಅನ್ನು ಈ ಸಿನಿಮಾ ಬ್ರೇಕ್​ ಮಾಡುವ ನಿರೀಕ್ಷೆ ಇದೆ.

ಉತ್ತರ ಭಾರತದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕನ್ನಡದ ಟ್ರೇಲರ್​ಗಿಂತಲೂ ಹಿಂದಿ ಅವತರಣಿಕೆಯ ಟ್ರೇಲರ್​ ಹೆಚ್ಚು ವೀಕ್ಷಣೆ ಕಂಡಿರುವುದೇ ಇದಕ್ಕೆ ಸಾಕ್ಷಿ. ಬಾಲಿವುಡ್​ ಸ್ಟಾರ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ಪವರ್​ಫುಲ್​ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಹಿಂದಿ ಮಾರುಕಟ್ಟೆಯಲ್ಲಿ ಈ ಸಿನಿಮಾ ಅಬ್ಬರಿಸಲಿದೆ.

ಇದನ್ನೂ ಓದಿ:

ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

Published On - 11:19 am, Wed, 13 April 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?