AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು
ರಾಜೇಶ್ ದುಗ್ಗುಮನೆ
|

Updated on: Apr 14, 2021 | 4:11 PM

Share

ಕೆಜಿಎಫ್​ ಮೊದಲನೇ ಚಾಪ್ಟರ್​ನಲ್ಲಿ ಯಶ್​ ಸಂಪೂರ್ಣ ಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಅವರ ಸ್ಟೈಲ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಕೆಜಿಎಫ್​-2ನಲ್ಲೂ ಇದೇ ಲುಕ್​ ಮುಂದುವರಿಯಲಿದೆ. ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ಸಿನಿಮಾ ತಂಡ ತೊಡಗಿಕೊಂಡಿದೆ. ಹೀಗಿರುವಾಗಲೇ ಯಶ್​ ಲುಕ್​ ಬದಲಾಗಿ ಹೋಗಿದೆ. ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​. ಕಪ್ಪು ಟಿ-ಶರ್ಟ್​ ಹಾಕಿ ಕಾಣಿಸಿಕೊಂಡಿರುವ ಯಶ್​ ಗಡ್ಡಕ್ಕೆ ಸಣ್ಣ ಪ್ರಮಾಣದಲ್ಲಿ ಕತ್ತರಿ ಬಿದ್ದಿದೆ. ಅಲ್ಲದೆ, ಅವರ ಉದ್ದನೆಯ ಕೂದಲಿಗೂ ಬೇರೆಯದೇ ರೀತಿಯ ಲುಕ್​ ನೀಡಿದ್ದಾರೆ.

ಯಶ್​ ಜತೆಗೆ ಇರುವ ಫೋಟೋವನ್ನು ಆಲಿಮ್​ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳಿಂದ ಯಶ್​ ನನಗೆ ಪರಿಚಯ. ಅಂದಿನಿಂದ ಇಂದಿನವರೆಗೂ ಯಶ್​ ಬಳಿ ಇರುವ ವಿನಮ್ರತೆ ಕಡಿಮೆ ಆಗಿಲ್ಲ. ಇಂದಿನ ದಿನಗಳಲ್ಲಿ ಈ ರೀತಿಯ ವ್ಯಕ್ತಿ ಕಾಣೋದು ಅಪರೂಪ. ಅವರು ನಿಜಕ್ಕೂ ಸೂಪರ್​​ಸ್ಟಾರ್​ ಎಂದು ಆಲಿಮ್​ ಹೊಗಳಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಕಷ್ಟು ಜನರು ಯಶ್​ ಲುಕ್​ ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಫ್ಯಾನ್​ ಪೇಜ್​ಗಳಲ್ಲೂ ಯಶ್​ ಅವರ ಹೊಸ ಲುಕ್​ ಫೋಟೊ ವೈರಲ್​ ಆಗಿದೆ.

View this post on Instagram

A post shared by Aalim Hakim (@aalimhakim)

ಇನ್ನು, ಕೆಜಿಎಫ್​-2 ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ. ಯಶ್​ಗೆ ಶ್ರೀನಿಧಿ ಶೆಟ್ಟಿ ನಾಯಕಿ. ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಸಿನಿಮಾದಲ್ಲಿ ಮುಖ್ಯ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ ಸಿನಿಮಾಗಿದೆ.

ಇದನ್ನೂ ಓದಿ: Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ