AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು
ರಾಜೇಶ್ ದುಗ್ಗುಮನೆ
|

Updated on: Apr 14, 2021 | 4:11 PM

Share

ಕೆಜಿಎಫ್​ ಮೊದಲನೇ ಚಾಪ್ಟರ್​ನಲ್ಲಿ ಯಶ್​ ಸಂಪೂರ್ಣ ಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಅವರ ಸ್ಟೈಲ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಕೆಜಿಎಫ್​-2ನಲ್ಲೂ ಇದೇ ಲುಕ್​ ಮುಂದುವರಿಯಲಿದೆ. ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ಸಿನಿಮಾ ತಂಡ ತೊಡಗಿಕೊಂಡಿದೆ. ಹೀಗಿರುವಾಗಲೇ ಯಶ್​ ಲುಕ್​ ಬದಲಾಗಿ ಹೋಗಿದೆ. ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​. ಕಪ್ಪು ಟಿ-ಶರ್ಟ್​ ಹಾಕಿ ಕಾಣಿಸಿಕೊಂಡಿರುವ ಯಶ್​ ಗಡ್ಡಕ್ಕೆ ಸಣ್ಣ ಪ್ರಮಾಣದಲ್ಲಿ ಕತ್ತರಿ ಬಿದ್ದಿದೆ. ಅಲ್ಲದೆ, ಅವರ ಉದ್ದನೆಯ ಕೂದಲಿಗೂ ಬೇರೆಯದೇ ರೀತಿಯ ಲುಕ್​ ನೀಡಿದ್ದಾರೆ.

ಯಶ್​ ಜತೆಗೆ ಇರುವ ಫೋಟೋವನ್ನು ಆಲಿಮ್​ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳಿಂದ ಯಶ್​ ನನಗೆ ಪರಿಚಯ. ಅಂದಿನಿಂದ ಇಂದಿನವರೆಗೂ ಯಶ್​ ಬಳಿ ಇರುವ ವಿನಮ್ರತೆ ಕಡಿಮೆ ಆಗಿಲ್ಲ. ಇಂದಿನ ದಿನಗಳಲ್ಲಿ ಈ ರೀತಿಯ ವ್ಯಕ್ತಿ ಕಾಣೋದು ಅಪರೂಪ. ಅವರು ನಿಜಕ್ಕೂ ಸೂಪರ್​​ಸ್ಟಾರ್​ ಎಂದು ಆಲಿಮ್​ ಹೊಗಳಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಕಷ್ಟು ಜನರು ಯಶ್​ ಲುಕ್​ ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಫ್ಯಾನ್​ ಪೇಜ್​ಗಳಲ್ಲೂ ಯಶ್​ ಅವರ ಹೊಸ ಲುಕ್​ ಫೋಟೊ ವೈರಲ್​ ಆಗಿದೆ.

View this post on Instagram

A post shared by Aalim Hakim (@aalimhakim)

ಇನ್ನು, ಕೆಜಿಎಫ್​-2 ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ. ಯಶ್​ಗೆ ಶ್ರೀನಿಧಿ ಶೆಟ್ಟಿ ನಾಯಕಿ. ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಸಿನಿಮಾದಲ್ಲಿ ಮುಖ್ಯ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ ಸಿನಿಮಾಗಿದೆ.

ಇದನ್ನೂ ಓದಿ: Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್