AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು
ರಾಜೇಶ್ ದುಗ್ಗುಮನೆ
|

Updated on: Apr 14, 2021 | 4:11 PM

Share

ಕೆಜಿಎಫ್​ ಮೊದಲನೇ ಚಾಪ್ಟರ್​ನಲ್ಲಿ ಯಶ್​ ಸಂಪೂರ್ಣ ಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಅವರ ಸ್ಟೈಲ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಕೆಜಿಎಫ್​-2ನಲ್ಲೂ ಇದೇ ಲುಕ್​ ಮುಂದುವರಿಯಲಿದೆ. ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ಸಿನಿಮಾ ತಂಡ ತೊಡಗಿಕೊಂಡಿದೆ. ಹೀಗಿರುವಾಗಲೇ ಯಶ್​ ಲುಕ್​ ಬದಲಾಗಿ ಹೋಗಿದೆ. ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​. ಕಪ್ಪು ಟಿ-ಶರ್ಟ್​ ಹಾಕಿ ಕಾಣಿಸಿಕೊಂಡಿರುವ ಯಶ್​ ಗಡ್ಡಕ್ಕೆ ಸಣ್ಣ ಪ್ರಮಾಣದಲ್ಲಿ ಕತ್ತರಿ ಬಿದ್ದಿದೆ. ಅಲ್ಲದೆ, ಅವರ ಉದ್ದನೆಯ ಕೂದಲಿಗೂ ಬೇರೆಯದೇ ರೀತಿಯ ಲುಕ್​ ನೀಡಿದ್ದಾರೆ.

ಯಶ್​ ಜತೆಗೆ ಇರುವ ಫೋಟೋವನ್ನು ಆಲಿಮ್​ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳಿಂದ ಯಶ್​ ನನಗೆ ಪರಿಚಯ. ಅಂದಿನಿಂದ ಇಂದಿನವರೆಗೂ ಯಶ್​ ಬಳಿ ಇರುವ ವಿನಮ್ರತೆ ಕಡಿಮೆ ಆಗಿಲ್ಲ. ಇಂದಿನ ದಿನಗಳಲ್ಲಿ ಈ ರೀತಿಯ ವ್ಯಕ್ತಿ ಕಾಣೋದು ಅಪರೂಪ. ಅವರು ನಿಜಕ್ಕೂ ಸೂಪರ್​​ಸ್ಟಾರ್​ ಎಂದು ಆಲಿಮ್​ ಹೊಗಳಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಕಷ್ಟು ಜನರು ಯಶ್​ ಲುಕ್​ ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಫ್ಯಾನ್​ ಪೇಜ್​ಗಳಲ್ಲೂ ಯಶ್​ ಅವರ ಹೊಸ ಲುಕ್​ ಫೋಟೊ ವೈರಲ್​ ಆಗಿದೆ.

View this post on Instagram

A post shared by Aalim Hakim (@aalimhakim)

ಇನ್ನು, ಕೆಜಿಎಫ್​-2 ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ. ಯಶ್​ಗೆ ಶ್ರೀನಿಧಿ ಶೆಟ್ಟಿ ನಾಯಕಿ. ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಸಿನಿಮಾದಲ್ಲಿ ಮುಖ್ಯ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ ಸಿನಿಮಾಗಿದೆ.

ಇದನ್ನೂ ಓದಿ: Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ