Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​.

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು
Follow us
|

Updated on: Apr 14, 2021 | 4:11 PM

ಕೆಜಿಎಫ್​ ಮೊದಲನೇ ಚಾಪ್ಟರ್​ನಲ್ಲಿ ಯಶ್​ ಸಂಪೂರ್ಣ ಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಅವರ ಸ್ಟೈಲ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಕೆಜಿಎಫ್​-2ನಲ್ಲೂ ಇದೇ ಲುಕ್​ ಮುಂದುವರಿಯಲಿದೆ. ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ಸಿನಿಮಾ ತಂಡ ತೊಡಗಿಕೊಂಡಿದೆ. ಹೀಗಿರುವಾಗಲೇ ಯಶ್​ ಲುಕ್​ ಬದಲಾಗಿ ಹೋಗಿದೆ. ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಅವರ ಸಲೂನ್​ಗೆ ಯಶ್​ ತೆರಳಿದ್ದಾರೆ. ಈ ವೇಳೆ ಯಶ್​ ಅವರ ಗಡ್ಡ ಹಾಗೂ ಕೂದಲಿಗೆ ಸಖತ್​ ಮೇಕೋವರ್​ ಮಾಡಿದ್ದಾರೆ ಆಲಿಮ್​. ಕಪ್ಪು ಟಿ-ಶರ್ಟ್​ ಹಾಕಿ ಕಾಣಿಸಿಕೊಂಡಿರುವ ಯಶ್​ ಗಡ್ಡಕ್ಕೆ ಸಣ್ಣ ಪ್ರಮಾಣದಲ್ಲಿ ಕತ್ತರಿ ಬಿದ್ದಿದೆ. ಅಲ್ಲದೆ, ಅವರ ಉದ್ದನೆಯ ಕೂದಲಿಗೂ ಬೇರೆಯದೇ ರೀತಿಯ ಲುಕ್​ ನೀಡಿದ್ದಾರೆ.

ಯಶ್​ ಜತೆಗೆ ಇರುವ ಫೋಟೋವನ್ನು ಆಲಿಮ್​ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳಿಂದ ಯಶ್​ ನನಗೆ ಪರಿಚಯ. ಅಂದಿನಿಂದ ಇಂದಿನವರೆಗೂ ಯಶ್​ ಬಳಿ ಇರುವ ವಿನಮ್ರತೆ ಕಡಿಮೆ ಆಗಿಲ್ಲ. ಇಂದಿನ ದಿನಗಳಲ್ಲಿ ಈ ರೀತಿಯ ವ್ಯಕ್ತಿ ಕಾಣೋದು ಅಪರೂಪ. ಅವರು ನಿಜಕ್ಕೂ ಸೂಪರ್​​ಸ್ಟಾರ್​ ಎಂದು ಆಲಿಮ್​ ಹೊಗಳಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಕಷ್ಟು ಜನರು ಯಶ್​ ಲುಕ್​ ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಫ್ಯಾನ್​ ಪೇಜ್​ಗಳಲ್ಲೂ ಯಶ್​ ಅವರ ಹೊಸ ಲುಕ್​ ಫೋಟೊ ವೈರಲ್​ ಆಗಿದೆ.

View this post on Instagram

A post shared by Aalim Hakim (@aalimhakim)

ಇನ್ನು, ಕೆಜಿಎಫ್​-2 ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ. ಯಶ್​ಗೆ ಶ್ರೀನಿಧಿ ಶೆಟ್ಟಿ ನಾಯಕಿ. ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಸಿನಿಮಾದಲ್ಲಿ ಮುಖ್ಯ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ ಸಿನಿಮಾಗಿದೆ.

ಇದನ್ನೂ ಓದಿ: Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ