AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಯಶ್​ ಮುಂದಿನ ಸಿನಿಮಾ ಇದೇ ನಿರ್ದೇಶಕನ ಜೊತೆ ಎನ್ನಲಾಗುತ್ತಿದೆ.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ
ಪುರಿ ಜಗನ್ನಾಥ್​-ಯಶ್
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 7:30 PM

Share

‘ಕೆಜಿಎಫ್’​ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬಂದ ಮೇಲೆ ರಾಕಿಂಗ್​ ಸ್ಟಾರ್​ ಯಶ್​ ಇಡೀ ರಾಷ್ಟ್ರಕ್ಕೆ ಪರಿಚಯವಾಗಿದ್ದಾರೆ. ಈಗಾಗಲೇ ಯಶ್​ ‘ಕೆಜಿಎಫ್-2’​ ಶೂಟಿಂಗ್​ ಪೂರ್ಣಗೊಳಿಸಿದ್ದು, ಸಿನಿಮಾ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ತೆಲುಗಿನ ಸ್ಟಾರ್​ ನಿರ್ದೇಶಕರೊಬ್ಬರು ರೆಡಿ ಆಗಿದ್ದಾರಂತೆ!

ಅವರು ಬೇರಾರು ಅಲ್ಲ, ಪುರಿ ಜಗನ್ನಾಥ್​. ಹೌದು, ಯಶ್​ ನಟನೆಯ ಕೆಜಿಎಫ್​ ಸಿನಿಮಾ ನೋಡಿರುವ ಪುರಿ ಜಗನ್ನಾಥ್​ ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಹೀಗಾಗಿ, ಯಶ್​ಗೋಸ್ಕರ ವಿಶೇಷ ಕಥೆ ಕೂಡ ಸಿದ್ಧಮಾಡಿಕೊಂಡಿದ್ದಾರೆ. ಯಶ್​ ಜೊತೆ ಈಗಾಗಲೇ ಪುರಿ ಜಗನ್ನಾಥ್ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪುರಿ ಹೇಳಿರುವ ಕಥೆಯ ಒಂದೆಳೆ ಯಶ್​ಗೂ ಇಷ್ಟವಾಗಿದೆ. ಹೀಗಾಗಿ ಪ್ರಿಪ್ರೊಡಕ್ಷನ್​ ಕೆಲಸ ನಡೆಸಲು ಯಶ್​ ಒಕೆ ಎಂದಿದ್ದಾರಂತೆ.

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಪುರಿ ಸದ್ಯ ವಿಜಯ್​ ದೇವರಕೊಂಡ ನಟನೆಯ ‘ಫೈಟರ್’​ ಚಿತ್ರದ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಮುಂಬೈನಲ್ಲಿ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಈ ಸಿನಿಕಮಾದ ಕೆಲಸಗಳು ಪೂರ್ಣಗೊಂಡ ನಂತರ ಯಶ್​ ಜೊತೆ ಕೈಜೋಡಿಸುವ ವಿಚಾರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋನೆಯನ್ನು ಪುರಿ ಇಟ್ಟುಕೊಂಡಿದ್ದಾರೆ.

ಯಶ್​ ಸದ್ಯ, ‘ಕೆಜಿಎಫ್​-2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಜನ್ಮದಿನದ ಅಂಗವಾಗಿ ಜ.8ರಂದು ಚಿತ್ರದ ಟೀಸರ್​ ಕೂಡ ರಿಲೀಸ್​ ಆಗುತ್ತಿದೆ. ದಿನ ಕಳೆದಂತೆ ಚಿತ್ರದ ಮೇಲಿನ ಕುತೂಹಲ ಹೆಚ್ಚುತ್ತಲೇ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​-2’ನಲ್ಲಿ ಬಾಲಿವುಡ್​ನ ಸಂಜಯ್​ ದತ್​ ಹಾಗೂ ರವೀನಾ ಟಂಡನ್​ ಕೂಡ ಬಣ್ಣ ಹಚ್ಚುತ್ತಿದ್ದಾರೆ.

ಕೆಜಿಎಫ್ 2 ಕ್ಲೈಮ್ಯಾಕ್ಸ್ ಶೂಟಿಂಗ್: ಪ್ರಶಾಂತ್ ನೀಲ್ ಬೇಡಿಕೆಗೆ ನೋ ಎಂದ ಸಂಜಯ್ ದತ್

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ