AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಯಶ್​ ಮುಂದಿನ ಸಿನಿಮಾ ಇದೇ ನಿರ್ದೇಶಕನ ಜೊತೆ ಎನ್ನಲಾಗುತ್ತಿದೆ.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ
ಪುರಿ ಜಗನ್ನಾಥ್​-ಯಶ್
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 7:30 PM

Share

‘ಕೆಜಿಎಫ್’​ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬಂದ ಮೇಲೆ ರಾಕಿಂಗ್​ ಸ್ಟಾರ್​ ಯಶ್​ ಇಡೀ ರಾಷ್ಟ್ರಕ್ಕೆ ಪರಿಚಯವಾಗಿದ್ದಾರೆ. ಈಗಾಗಲೇ ಯಶ್​ ‘ಕೆಜಿಎಫ್-2’​ ಶೂಟಿಂಗ್​ ಪೂರ್ಣಗೊಳಿಸಿದ್ದು, ಸಿನಿಮಾ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ತೆಲುಗಿನ ಸ್ಟಾರ್​ ನಿರ್ದೇಶಕರೊಬ್ಬರು ರೆಡಿ ಆಗಿದ್ದಾರಂತೆ!

ಅವರು ಬೇರಾರು ಅಲ್ಲ, ಪುರಿ ಜಗನ್ನಾಥ್​. ಹೌದು, ಯಶ್​ ನಟನೆಯ ಕೆಜಿಎಫ್​ ಸಿನಿಮಾ ನೋಡಿರುವ ಪುರಿ ಜಗನ್ನಾಥ್​ ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಹೀಗಾಗಿ, ಯಶ್​ಗೋಸ್ಕರ ವಿಶೇಷ ಕಥೆ ಕೂಡ ಸಿದ್ಧಮಾಡಿಕೊಂಡಿದ್ದಾರೆ. ಯಶ್​ ಜೊತೆ ಈಗಾಗಲೇ ಪುರಿ ಜಗನ್ನಾಥ್ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪುರಿ ಹೇಳಿರುವ ಕಥೆಯ ಒಂದೆಳೆ ಯಶ್​ಗೂ ಇಷ್ಟವಾಗಿದೆ. ಹೀಗಾಗಿ ಪ್ರಿಪ್ರೊಡಕ್ಷನ್​ ಕೆಲಸ ನಡೆಸಲು ಯಶ್​ ಒಕೆ ಎಂದಿದ್ದಾರಂತೆ.

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಪುರಿ ಸದ್ಯ ವಿಜಯ್​ ದೇವರಕೊಂಡ ನಟನೆಯ ‘ಫೈಟರ್’​ ಚಿತ್ರದ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಮುಂಬೈನಲ್ಲಿ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಈ ಸಿನಿಕಮಾದ ಕೆಲಸಗಳು ಪೂರ್ಣಗೊಂಡ ನಂತರ ಯಶ್​ ಜೊತೆ ಕೈಜೋಡಿಸುವ ವಿಚಾರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋನೆಯನ್ನು ಪುರಿ ಇಟ್ಟುಕೊಂಡಿದ್ದಾರೆ.

ಯಶ್​ ಸದ್ಯ, ‘ಕೆಜಿಎಫ್​-2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಜನ್ಮದಿನದ ಅಂಗವಾಗಿ ಜ.8ರಂದು ಚಿತ್ರದ ಟೀಸರ್​ ಕೂಡ ರಿಲೀಸ್​ ಆಗುತ್ತಿದೆ. ದಿನ ಕಳೆದಂತೆ ಚಿತ್ರದ ಮೇಲಿನ ಕುತೂಹಲ ಹೆಚ್ಚುತ್ತಲೇ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​-2’ನಲ್ಲಿ ಬಾಲಿವುಡ್​ನ ಸಂಜಯ್​ ದತ್​ ಹಾಗೂ ರವೀನಾ ಟಂಡನ್​ ಕೂಡ ಬಣ್ಣ ಹಚ್ಚುತ್ತಿದ್ದಾರೆ.

ಕೆಜಿಎಫ್ 2 ಕ್ಲೈಮ್ಯಾಕ್ಸ್ ಶೂಟಿಂಗ್: ಪ್ರಶಾಂತ್ ನೀಲ್ ಬೇಡಿಕೆಗೆ ನೋ ಎಂದ ಸಂಜಯ್ ದತ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ