AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಯಶ್​ ಮುಂದಿನ ಸಿನಿಮಾ ಇದೇ ನಿರ್ದೇಶಕನ ಜೊತೆ ಎನ್ನಲಾಗುತ್ತಿದೆ.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ
ಪುರಿ ಜಗನ್ನಾಥ್​-ಯಶ್
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 7:30 PM

Share

‘ಕೆಜಿಎಫ್’​ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬಂದ ಮೇಲೆ ರಾಕಿಂಗ್​ ಸ್ಟಾರ್​ ಯಶ್​ ಇಡೀ ರಾಷ್ಟ್ರಕ್ಕೆ ಪರಿಚಯವಾಗಿದ್ದಾರೆ. ಈಗಾಗಲೇ ಯಶ್​ ‘ಕೆಜಿಎಫ್-2’​ ಶೂಟಿಂಗ್​ ಪೂರ್ಣಗೊಳಿಸಿದ್ದು, ಸಿನಿಮಾ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ತೆಲುಗಿನ ಸ್ಟಾರ್​ ನಿರ್ದೇಶಕರೊಬ್ಬರು ರೆಡಿ ಆಗಿದ್ದಾರಂತೆ!

ಅವರು ಬೇರಾರು ಅಲ್ಲ, ಪುರಿ ಜಗನ್ನಾಥ್​. ಹೌದು, ಯಶ್​ ನಟನೆಯ ಕೆಜಿಎಫ್​ ಸಿನಿಮಾ ನೋಡಿರುವ ಪುರಿ ಜಗನ್ನಾಥ್​ ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಹೀಗಾಗಿ, ಯಶ್​ಗೋಸ್ಕರ ವಿಶೇಷ ಕಥೆ ಕೂಡ ಸಿದ್ಧಮಾಡಿಕೊಂಡಿದ್ದಾರೆ. ಯಶ್​ ಜೊತೆ ಈಗಾಗಲೇ ಪುರಿ ಜಗನ್ನಾಥ್ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪುರಿ ಹೇಳಿರುವ ಕಥೆಯ ಒಂದೆಳೆ ಯಶ್​ಗೂ ಇಷ್ಟವಾಗಿದೆ. ಹೀಗಾಗಿ ಪ್ರಿಪ್ರೊಡಕ್ಷನ್​ ಕೆಲಸ ನಡೆಸಲು ಯಶ್​ ಒಕೆ ಎಂದಿದ್ದಾರಂತೆ.

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಪುರಿ ಸದ್ಯ ವಿಜಯ್​ ದೇವರಕೊಂಡ ನಟನೆಯ ‘ಫೈಟರ್’​ ಚಿತ್ರದ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಮುಂಬೈನಲ್ಲಿ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಈ ಸಿನಿಕಮಾದ ಕೆಲಸಗಳು ಪೂರ್ಣಗೊಂಡ ನಂತರ ಯಶ್​ ಜೊತೆ ಕೈಜೋಡಿಸುವ ವಿಚಾರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋನೆಯನ್ನು ಪುರಿ ಇಟ್ಟುಕೊಂಡಿದ್ದಾರೆ.

ಯಶ್​ ಸದ್ಯ, ‘ಕೆಜಿಎಫ್​-2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಜನ್ಮದಿನದ ಅಂಗವಾಗಿ ಜ.8ರಂದು ಚಿತ್ರದ ಟೀಸರ್​ ಕೂಡ ರಿಲೀಸ್​ ಆಗುತ್ತಿದೆ. ದಿನ ಕಳೆದಂತೆ ಚಿತ್ರದ ಮೇಲಿನ ಕುತೂಹಲ ಹೆಚ್ಚುತ್ತಲೇ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​-2’ನಲ್ಲಿ ಬಾಲಿವುಡ್​ನ ಸಂಜಯ್​ ದತ್​ ಹಾಗೂ ರವೀನಾ ಟಂಡನ್​ ಕೂಡ ಬಣ್ಣ ಹಚ್ಚುತ್ತಿದ್ದಾರೆ.

ಕೆಜಿಎಫ್ 2 ಕ್ಲೈಮ್ಯಾಕ್ಸ್ ಶೂಟಿಂಗ್: ಪ್ರಶಾಂತ್ ನೀಲ್ ಬೇಡಿಕೆಗೆ ನೋ ಎಂದ ಸಂಜಯ್ ದತ್

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!