AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ತಾತಾನ ಕೊನೆಯ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

Krishoji Rao: ಕೆಜಿಎಫ್ ತಾತ ಕೃಷ್ಣೋಜಿ ರಾವ್ ನಟಿಸಿರುವ ಕೊನೆಯ ಸಿನಿಮಾ ನ್ಯಾಯೋ ನಾರಾಯಣಪ್ಪ ಬಿಡುಗಡೆ ದಿನಾಂಕ ನಿಗದಿಯಾಗಿದೆ.

'ಕೆಜಿಎಫ್' ತಾತಾನ ಕೊನೆಯ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ನ್ಯಾನೋ ನಾರಾಯಣಪ್ಪ
ಮಂಜುನಾಥ ಸಿ.
|

Updated on: Jun 28, 2023 | 10:33 PM

Share

ಕೆಜಿಎಫ್ (KGF) ಸಿನಿಮಾ ಕನ್ನಡ ಚಿತ್ರರಂಗದ (Sandalwood) ಶಕ್ತಿಯನ್ನು ಜಗತ್ತಿಗೆ ಪರಿಚಯ ಮಾಡಿಕೊಟ್ಟಿತು ಮಾತ್ರವಲ್ಲ ಹಲವು ನಟರಿಗೆ, ತಂತ್ರಜ್ಞರಿಗೆ ದೊಡ್ಡ ಚಿಮ್ಮುಹಲಗೆಯಾಯಿತು. ಆ ಸಿನಿಮಾಕ್ಕೆ ಕೆಲಸ ಮಾಡಿದ ಹಲವು ನಟ, ತಂತ್ರಜ್ಞರನ್ನು ಕೆಜಿಎಫ್ ಮೂಲಕವೇ ಗುರುತಿಸುವಂತಾಯಿತು, ಸಿನಿಮಾದಲ್ಲಿ ಸಣ್ಣ ಆದರೆ ಪರಿಣಾಮಕಾರಿ ಪಾತ್ರ ಮಾಡಿದ್ದ ವೃದ್ಧ ಕೃಷ್ಣೋಜಿ ರಾವ್ (Krishnoji Rao) ಅವರಿಗೂ ಸ್ಟಾರ್​ಡಂ ದೊರಕಿಬಿಟ್ಟಿತು. ಕೆಲ ತಿಂಗಳ ಹಿಂದಷ್ಟೆ ಕೃಷ್ಣೋಜಿ ರಾವ್ ನಿಧನ ಹೊಂದಿದ್ದಾರೆ. ಆದರೆ ಅವರು ನಟಿಸಿದ್ದ ಕೊನೆಯ ಸಿನಿಮಾ ಈಗ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ.

‘ಕೆಮಿಸ್ಟ್ರೀ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲೊಂದು ಹೊಸ ಭರವಸೆ ಮೂಡಿಸಿದವರು ನಿರ್ದೇಶಕ ಕುಮಾರ್. ಇವರ ಸಾರಥ್ಯದ ಮಗದೊಂದು ಪ್ರಯತ್ನ ನ್ಯಾನೋ ನಾರಾಯಣಪ್ಪ. ಕೆಜಿಎಫ್ ತಾತಾ ಖ್ಯಾತಿಯ ನಟ ದಿವಂಗತ ಕೃಷ್ಣೋಜಿ ರಾವ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಜುಲೈ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಹಾಸ್ಯದ ಜೊತೆಗೆ ಭಾವಾನತ್ಮಕ ಅಂಶವನ್ನು ಹದವಾಗಿ ಬೆರೆಸಿ ಕುಮಾರ್ ನ್ಯಾನೋ ನಾರಾಯಣಪ್ಪ ಕಥೆ ಹೆಣೆದಿದ್ದಾರೆ.

ಬಿಡುಗಡೆ ಹೊಸ್ತಿಲಿನಲ್ಲಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮನಿ ಹಂಟರ್ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಕುಮಾರ್ ಸಾಹಿತ್ಯದ ಸಿಂಗಿಂಗ್ ಗೆ ಅಂಕಿತಾ ಕುಂಡು ಧ್ವನಿಯಾಗಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. ಹಾಟ್ ಅಂಡ್ ಸ್ಪೈ ನಂಬರ್ ಗೆ ಗಿರಿ ಶಿವಣ್ಣ, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ:Krishna G Rao: ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ ರಾವ್‌ ನಿಧನ

ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ನಡಿ ಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಮಿಡಿ, ಕಾಡುವ ಕಥೆ, ಮನೆ ಮಂದಿಯೆಲ್ಲಾ ಕುಳಿತು ಕಣ್ತುಂಬಿಕೊಳ್ಳುವ ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ಥಿಯೇಟರ್ ಪ್ರವೇಶಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?