AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​

ಸಿನಿಮಾದ ಟೀಸರ್ ಹಾಗೂ ಟ್ರೇಲರ್ ನೋಡಿ ಪ್ರೇಕ್ಷಕರು ಥ್ರಿಲ್ ಆದರು. ಅನಂತ್ ನಾಗ್ ಧ್ವನಿಯಲ್ಲಿ ಮೂಡಿ ಬಂದ ನಿರೂಪಣೆ ಸಿನಿಮಾದ ತೂಕವನ್ನು ಮತ್ತಷ್ಟು ಹೆಚ್ಚಿಸಿತ್ತು. ಈ ಸಿನಿಮಾ ಎಲ್ಲರಿಂದ ಸೈ ಎನಿಸಿಕೊಂಡಿತು.

KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​
ಯಶ್
TV9 Web
| Edited By: |

Updated on: Dec 21, 2022 | 3:18 PM

Share

ಅದು 2018ರ ಡಿಸೆಂಬರ್ 21. ಸಿನಿಪ್ರಿಯರು ಆ ದಿನಕ್ಕಾಗಿ ಕಾದು ಕೂತಿದ್ದರು. ಅದು ಪ್ರಶಾಂತ್ ನೀಲ್ ನಿರ್ದೇಶನದ, ಯಶ್ (Yash) ನಟನೆಯ ‘ಕೆಜಿಎಫ್: ಚಾಪ್ಟರ್ 1’ (KGF: Chapter 1) ಸಿನಿಮಾ ರಿಲೀಸ್ ದಿನಾಂಕ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆದ ಈ ಸಿನಿಮಾ ಕೇವಲ ಕನ್ನಡ ಮಾತ್ರವಲ್ಲದೆ, ಇತರ ಭಾಷೆಯಲ್ಲೂ ಸುನಾಮಿ ಎಬ್ಬಿಸಿತು. ಈ ಚಿತ್ರಕ್ಕೆ ಈಗ ನಾಲ್ಕು ವರ್ಷ ತುಂಬಿದೆ. ಹಲವು ಮೊದಲುಗಳಿಗೆ ಸಾಕ್ಷಿಯಾದ ಈ ವಿಶೇಷ ದಿನವನ್ನು ಹೊಂಬಾಳೆ ಫಿಲ್ಮ್ಸ್​ ನೆನಪಿಸಿಕೊಂಡಿದೆ.

‘ಉಗ್ರಂ’ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಹೆಚ್ಚು ಸದ್ದು ಮಾಡಿತು. ಪ್ರಶಾಂತ್ ನೀಲ್ ಅವರ ಕಸುಬುದಾರಿಕೆ ಏನು ಎಂಬುದು ಜನರಿಗೆ ಗೊತ್ತಾಯಿತು. ಹೀಗಿರುವಾಗಲೇ ‘ಕೆಜಿಎಫ್​’ ಸಿನಿಮಾ ಘೋಷಣೆ ಮಾಡಿದರು ಪ್ರಶಾಂತ್ ನೀಲ್. ಈ ಚಿತ್ರಕ್ಕಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು ಅವರು.

ಸಿನಿಮಾದ ಟೀಸರ್ ಹಾಗೂ ಟ್ರೇಲರ್ ನೋಡಿ ಪ್ರೇಕ್ಷಕರು ಥ್ರಿಲ್ ಆದರು. ಅನಂತ್ ನಾಗ್ ಧ್ವನಿಯಲ್ಲಿ ಮೂಡಿ ಬಂದ ನಿರೂಪಣೆ ಸಿನಿಮಾದ ತೂಕವನ್ನು ಮತ್ತಷ್ಟು ಹೆಚ್ಚಿಸಿತ್ತು. ಈ ಸಿನಿಮಾ ಎಲ್ಲರಿಂದ ಸೈ ಎನಿಸಿಕೊಂಡಿತು. ಕನ್ನಡ ಚಿತ್ರರಂಗದಲ್ಲೇ ಈ ಸಿನಿಮಾ ನೂರಾರು ಕೋಟಿ ಬಿಸ್ನೆಸ್ ಮಾಡಿತು. ಬಾಲಿವುಡ್​ನಲ್ಲೂ ಈ ಸಿನಿಮಾ ರಿಲೀಸ್ ಮಾಡಲಾಯಿತು. ಹಿಂದಿಯಲ್ಲಿ ಈ ಚಿತ್ರ 44 ಕೋಟಿ ರೂಪಾಯಿ ಬಾಚಿತ್ತು. ಕನ್ನಡದ ಸಿನಿಮಾವೊಂದು ಬಾಲಿವುಡ್​ನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಅದೇ ಮೊದಲು! ಹೀಗೆ ಈ ಚಿತ್ರದಿಂದ ದೊಡ್ಡ ಇತಿಹಾಸವೇ ಸೃಷ್ಟಿ ಆಯಿತು.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

‘ಕೆಜಿಎಫ್’ ಚಿತ್ರದಲ್ಲಿ ಯಶ್​ ಪಾತ್ರ ಸಖತ್ ಹೈಲೈಟ್ ಆಯಿತು. ರಾಕಿ ಆಗಿ ಅವರು ಮಿಂಚಿದರು. ಶ್ರೀನಿಧಿ ಶೆಟ್ಟಿ ಅವರು ಚೊಚ್ಚಲ ಚಿತ್ರದಲ್ಲೇ ಗಮನ ಸೆಳೆದರು. ಈ ಸಿನಿಮಾ ಮಾಡಿದ ಮೋಡಿ ನೋಡಿ ಎರಡನೇ ಚಾಪ್ಟರ್​ನಲ್ಲಿ ನಟಿಸಲು ಬಾಲಿವುಡ್​ನ ಖ್ಯಾತ ಕಲಾವಿದರಾದ ಸಂಜಯ್ ದತ್, ರವೀನಾ ಟಂಡನ್ ಒಪ್ಪಿಕೊಂಡರು.

ಇದನ್ನೂ ಓದಿ: Yash: ‘ಬಾಹುಬಲಿ 2’ ದಾಖಲೆಯನ್ನು ಮುರಿದ ‘ಕೆಜಿಎಫ್ 2’; ಇದು ಯಶ್ ಸಿನಿಮಾ ಸಾಧನೆ  

ಈ ವಿಶೇಷ ದಿನಕ್ಕೆ ಈಗ ನಾಲ್ಕು ವರ್ಷ ತುಂಬಿದೆ. ಈ ವಿಶೇಷ ದಿನವನ್ನು ನೆನಪಿಸಿಕೊಳ್ಳಲು ಹೊಂಬಾಳೆ ಫಿಲ್ಮ್ಸ್ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದೆ. ಈ ವಿಡಿಯೋಗೆ ಫ್ಯಾನ್ಸ್ ಪ್ರೀತಿ ತೋರುತ್ತಿದ್ದಾರೆ. ಈ ವಿಡಿಯೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್