AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ರೀತಿಯ ಸಿನಿಮಾ ಮಾಡೋಕೆ ಬಂಡವಾಳ ಹೂಡುವುದು ಮುಖ್ಯವಾಗುತ್ತದೆ ಅನ್ನೋದು ಕೃಷ್ಣ ಅವರ ಮಾತು.

‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
TV9 Web
| Edited By: |

Updated on:May 28, 2022 | 7:16 PM

Share

ಕೆಲವೊಮ್ಮೆ ಸಿನಿಮಾ ಹಿಟ್ ಆಗುತ್ತದೆಯೋ ಇಲ್ಲವೋ, ಅಲ್ಲಿ ಬರುವ ಪಾತ್ರ ಸೂಪರ್ ಹಿಟ್ ಆಗಿ ಬಿಡುತ್ತದೆ. ಮಾಡಿದ ಪಾತ್ರ ಚಿಕ್ಕದಿದ್ದರೂ ಲಕ್ ಬದಲಾಗಿ ಬಿಡುತ್ತದೆ. ಸಿನಿಮಾ ಕೂಡ ದೊಡ್ಡ ಯಶಸ್ಸು ಪಡೆಯಿತು ಎಂದರೆ ಕೇಳುವ ಮಾತೇ ಇಲ್ಲ. ‘ಕೆಜಿಎಫ್​’ ಚಿತ್ರದಲ್ಲಿ ಅಂಧ ಮುದುಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಕೃಷ್ಣ ಜಿ. ರಾವ್​. ಅವರ ಪಾತ್ರ ಇಡೀ ಚಿತ್ರಕ್ಕೆ ಟರ್ನಿಂಗ್ ಪಾಯಿಂಟ್​ ಆಗಿತ್ತು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅದೃಷ್ಟ ಬದಲಾಗಿದೆ. 2018ರಲ್ಲಿ ಬಂದ ‘ಕೆಜಿಎಫ್’ ಬಳಿಕ (KGF) ಅವರು ಬರೋಬ್ಬರಿ 30 ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಕೆಜಿಎಫ್ 2’  (KGF Chapter 2) ಬಳಿಕ 15 ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡದ ಜತೆಗೆ ಅವರು ಮಾತನಾಡಿದ್ದಾರೆ.

‘ಕೆಜಿಎಫ್ ಆದ್ಮೇಲೆ 30 ಸಿನಿಮಾಗಳಲ್ಲಿ ನಟಿಸಿದ್ದೇನೆ. ‘ಮುದುಕನ ಲವ್​​ಸ್ಟೋರಿ’ ಚಿತ್ರಕ್ಕೆ ನಾನೇ ಹೀರೋ. ಸಿನಿಮಾ ಶೂಟಿಂಗ್ ಮುಗಿದು, ಪೋಸ್ಟ್ ಪ್ರೊಡಕ್ಷನ್​ ಆಗಿ, ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿದೆ’ ಎಂದಿದ್ದಾರೆ ಅವರು. ಈ ಮೂಲಕ ತಮ್ಮ ಜನಪ್ರಿಯತೆ ಎಷ್ಟು ಹೆಚ್ಚಿದೆ ಎಂಬುದನ್ನು ಹೇಳಿಕೊಂಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ರೀತಿಯ ಸಿನಿಮಾ ಮಾಡೋಕೆ ಬಂಡವಾಳ ಹೂಡುವುದು ಮುಖ್ಯವಾಗುತ್ತದೆ ಅನ್ನೋದು ಕೃಷ್ಣ ಅವರ ಮಾತು. ‘ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಈ ರೀತಿಯ ಚಿತ್ರಗಳನ್ನು ನಿರ್ಮಿಸೋಕು ಧಮ್ ಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
Hrithik Roshan: ಹೊಸ ಗೆಳತಿ ಸಿಕ್ಕಿದ್ಮೇಲೆ ಗಡ್ಡಕ್ಕೆ ಬೈ ಬೈ ಹೇಳಲು ಪ್ಲಾನ್ ಮಾಡಿದ್ರಾ ಹೃತಿಕ್? ಇಲ್ಲಿದೆ ಅಸಲಿ ಸಮಾಚಾರ
Image
ಹೃತಿಕ್​ ರೋಷನ್​ಗೂ ಅಚ್ಚರಿ ಮೂಡಿಸಿತು 67 ವರ್ಷದ ನಟ ಅನುಪಮ್​ ಖೇರ್​ ಫಿಟ್ನೆಸ್​; ಇಲ್ಲಿದೆ ಫೋಟೋ
Image
‘ಹೃತಿಕ್​ ರೋಷನ್​ ಜತೆ ನೀವು ಡೇಟಿಂಗ್​ ಮಾಡ್ತಾ ಇದ್ದೀರಾ?’; ನೇರ ಪ್ರಶ್ನೆಗೆ ಸಬಾ ಉತ್ತರ ಏನಿತ್ತು?
Image
ಒಂದೇ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​, ಹೃತಿಕ್​; ‘ಅವೆಂಜರ್ಸ್​ ಎಂಡ್​ಗೇಮ್​’ ರೀತಿ ಬಾಲಿವುಡ್​ ಪ್ಲ್ಯಾನ್​

ಇದನ್ನೂ ಓದಿ:  ‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​

‘ಕೆಜಿಎಫ್’ ಚಿತ್ರಕ್ಕೆ ಆಯ್ಕೆ ಆದ ಬಗ್ಗೆ ಹೇಳಿಕೊಂಡಿರುವ ಅವರು, ‘ಸಹಾಯಕ ನಿರ್ದೇಶಕನಾಗಿ ನಾನು 40 ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರ್ ಎಂಬುವವರು ಸಿಕ್ಕಿದ್ದರು. ಅವರು ಪ್ರಶಾಂತ್​ ನೀಲ್​ಗೆ ಫೋಟೋ ಕಳಿಸಿ ಎಂದು ಹೇಳ್ತಾ ಇದ್ರು. ಒಂದು ದಿನ ಅವರೇ ಫೋಟೋ ಕಳುಹಿಸಿದರು. ಒಂದು ದಿನ ಆಡಿಷನ್​ಗೆ ಕರೆದರು. ಡೈಲಾಗ್ ಕೊಟ್ರು. ಡೈಲಾಗ್ ಹೊಡೆದೆ. ಮರುದಿನ ನನ್ನನ್ನು ಕರೆದರು. 15 ದಿನ ಶೂಟಿಂಗ್​ನಲ್ಲಿ ಪಾಲ್ಗೊಂಡೆ’ ಎಂದಿದ್ದಾರೆ ಕೃಷ್ಣ.

‘ಯಶ್ ಅವರು ತುಂಬಾನೇ ಒಳ್ಳೆಯ ಮನುಷ್ಯ. ಸೆಟ್​ ಅಲ್ಲಿ ಜಾಲಿ ಆಗಿ ಇರುತ್ತಿದ್ದರು. ಕೊವಿಡ್ ಟೈಮ್​ನಲ್ಲಿ ಸಮಸ್ಯೆ ಆಯ್ತು. ಆಗ ನನಗೆ ಯಶ್ ಹಾಗೂ ಹೊಂಬಾಳೆ ಫಿಲ್ಮ್ಸ್​​ನವರು ದುಡ್ಡು ಕಳುಹಿಸಿದರು’ ಎಂದು ಸಹಾಯವನ್ನು ನೆನಪು ಮಾಡಿಕೊಂಡಿದ್ದಾರೆ ಅವರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:15 pm, Sat, 28 May 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!