AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀ-ರಿಲೀಸ್​ ಆಗ್ತಿದೆ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ; ಈ ಆಫರ್​ ಸಿಗೋದು ಕೆಲವೇ ದಿನಗಳು ಮಾತ್ರ

KGF Chapter 1: ಏ.8ರಿಂದ ಏ.13ರವರೆಗೆ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಪ್ರದರ್ಶನ ಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ರೀ-ರಿಲೀಸ್​ ಆಗ್ತಿದೆ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ; ಈ ಆಫರ್​ ಸಿಗೋದು ಕೆಲವೇ ದಿನಗಳು ಮಾತ್ರ
ಯಶ್​
TV9 Web
| Edited By: |

Updated on: Mar 31, 2022 | 1:33 PM

Share

ಸಿನಿಪ್ರಿಯರ ವಲಯದಲ್ಲಿ ಈಗ ಎಲ್ಲೆಲ್ಲೂ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಚರ್ಚೆಯೇ ನಡೆಯುತ್ತಿದೆ. ನರಾಚಿಯಲ್ಲಿ ಗರುಡನ ಹತ್ಯೆ ಮಾಡಿದ ಬಳಿಕ ರಾಕಿ ಭಾಯ್​ ಮಾಡಿದ್ದೇನು? ಕಥೆಯಲ್ಲಿ ಮುಂದೇನು ನಡೆಯಿತು ಎಂಬುದನ್ನು ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಏ.14ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ‘ಕೆಜಿಎಫ್​ 2’ (KGF 2) ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್​ ಬಿಡುಗಡೆಯಾಗಿ ಸಖತ್​ ಸದ್ದು ಮಾಡುತ್ತಿದೆ. ಯಶ್​ ನಟನೆ, ಡೈಲಾಗ್​ ಡೆಲಿವರಿ, ರೋಚಕವಾದ ಫೈಟಿಂಗ್​ ದೃಶ್ಯಗಳು, ಬೃಹತ್​ ಸೆಟ್​ಗಳು ಈ ಸಿನಿಮಾದಲ್ಲಿ ಹೇಗಿದೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಶೀಘ್ರದಲ್ಲೇ ‘ಕೆಜಿಎಫ್​ 2’ ಟಿಕೆಟ್​ಗಳ ಬುಕಿಂಗ್​ ಕೂಡ ಓಪನ್​ ಆಗಲಿದೆ. ಆದರೆ ಅದಕ್ಕೂ ಮುನ್ನ ‘ಕೆಜಿಎಫ್​: ಚಾಪ್ಟರ್​ 1’ (KGF Chapter 1) ಸಿನಿಮಾ ಮರು ಬಿಡುಗಡೆ ಆಗಲಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ದೇಶಾದ್ಯಂತ ವಿನಾಯಿತಿ ದರದಲ್ಲಿ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರವನ್ನು ಪ್ರದರ್ಶನ ಮಾಡಲು ತೀರ್ಮಾನಿಸಲಾಗಿದೆ.

‘ಕೆಜಿಎಫ್​: ಚಾಪ್ಟರ್​ 1’ ತೆರೆಕಂಡಿದ್ದು 2018ರ ಡಿಸೆಂಬರ್​ನಲ್ಲಿ. ಅದಾಗಿ ಮೂರೂವರೆ ವರ್ಷವೇ ಕಳೆದಿದೆ. ಹಾಗಾಗಿ ಅನೇಕರಿಗೆ ಈ ಸಿನಿಮಾದ ಕಥೆಯ ವಿವರಗಳು ಮರೆತು ಹೋಗಿರಬಹುದು. ಕೆಲವರು ಚಿತ್ರಮಂದಿರದಲ್ಲಿ ಈ ಚಿತ್ರವನ್ನು ನೋಡಿಲ್ಲದೇ ಇರಬಹುದು. ಹಾಗಾಗಿ ಇನ್ನೊಮ್ಮೆ ಬಿಡುಗಡೆ ಮಾಡುವುದು ಸೂಕ್ತ ಎಂದು ತಂಡ ನಿರ್ಧರಿಸಿದೆ. ಆದ್ದರಿಂದ ಕೆಲವು ಆಯ್ದ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಮರು ಬಿಡುಗಡೆ ಆಗಲಿದೆ.

ಏ.8ರಿಂದ ಏ.13ರವರೆಗೆ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಟ್ವೀಟ್​ ಮಾಡಿದ್ದಾರೆ. ಒಂದು ಕಥೆಯನ್ನು ಎರಡು ಪಾರ್ಟ್​ಗಳಲ್ಲಿ ಹೇಳುವುದು ಈಗ ಟ್ರೆಂಡ್​ ಆಗಿದೆ. ‘ಬಾಹುಬಲಿ’ ಸಿನಿಮಾ ಬಿಡುಗಡೆ ಆದ ಬಳಿಕ ಈ ಟ್ರೆಂಡ್​ ಚಾಲ್ತಿಗೆ ಬಂತು. ‘ಬಾಹುಬಲಿ 2’ ಸಿನಿಮಾ ತೆರೆ ಕಾಣುವುದಕ್ಕಿಂತ ಕೆಲವೇ ದಿನಗಳ ಮುನ್ನ ‘ಬಾಹುಬಲಿ 1’ ಚಿತ್ರವನ್ನು ರೀ-ರಿಲೀಸ್​ ಮಾಡಲಾಗಿತ್ತು. ಈಗ ಅದೇ ಮಾದರಿಯಲ್ಲಿ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಮರು ಬಿಡುಗಡೆ ಆಗುತ್ತಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ನಟಿಸಿರುವುದರಿಂದ ಉತ್ತರ ಭಾರತದ ಪ್ರೇಕ್ಷಕರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಇವರಿಬ್ಬರ ಪಾತ್ರಗಳು ಅಬ್ಬರಿಸಿವೆ. ರಮಿಕಾ ಸೇನ್​ ಎಂಬ ಪಾತ್ರದಲ್ಲಿ ರವೀನಾ ಟಂಡನ್​ ಕಾಣಿಸಿಕೊಂಡಿದ್ದರೆ, ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ.

‘ಕೆಜಿಎಫ್​ 2’ ರೀತಿಯೇ ತಮಿಳಿನ ‘ಬೀಸ್ಟ್​’ ಕೂಡ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣುತ್ತಿದೆ. ಆ ಚಿತ್ರ ‘ಕೆಜಿಎಫ್​ 2’ಗಿಂತ ಒಂದು ದಿನ ಮುಂಚೆ, ಅಂದರೆ ಏ.13ರಂದು ರಿಲೀಸ್​ ಆಗಲಿದೆ. ಆ ಕ್ಲ್ಯಾಶ್​ ಬಗ್ಗೆ ಇತ್ತೀಚೆಗೆ ಯಶ್​ ಪ್ರತಿಕ್ರಿಯೆ ನೀಡಿದರು. ‘ನಾವು ತುಂಬ ಮುಂಚೆಯೇ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದ್ವಿ. ಯಾವ ಸಿನಿಮಾ ರಿಲೀಸ್​ ಆಗುತ್ತದೆ ಅನ್ನೋದು ನಮಗೆ ಗೊತ್ತಿರಲಿಲ್ಲ. ಈಗ ವಿಜಯ್​ ಅವರ ಬೀಸ್ಟ್​ ಚಿತ್ರ ಬರುತ್ತಿದೆ. ಬೀಸ್ಟ್​ ವರ್ಸಸ್​ ಕೆಜಿಎಫ್​ ಅಂತ ಹೇಳಬಾರದು. ಬೀಸ್ಟ್​ ಮತ್ತು ಕೆಜಿಎಫ್​ ಎನ್ನಬೇಕು. ಎರಡೂ ಕೂಡ ಇಂಡಿಯನ್​ ಸಿನಿಮಾ. ಇದು ಎಲೆಕ್ಷನ್​ ಅಲ್ಲ, ಸಿನಿಮಾ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬ ಮಾತು ಇದರಲ್ಲಿ ಬರಲ್ಲ. ಎರಡೂ ಸಿನಿಮಾವನ್ನೂ ನೋಡೋಣ. ವಿಜಯ್ ಸರ್​ ನನಗಿಂತ ಸೀನಿಯರ್​. ನಾವು ಅವರಿಗೆ ಗೌರವ ಕೊಡಬೇಕು. ವಿಜಯ್​ ಅವರ ಅಭಿಮಾನಿಗಳಿಗೂ ‘ಕೆಜಿಎಫ್​ 2’ ಸಿನಿಮಾ ಇಷ್ಟ ಆಗಲಿದೆ’ ಎಂದು ಯಶ್​ ಹೇಳಿದ್ದಾರೆ.

ಇದನ್ನೂ ಓದಿ:

ಯಶ್​ ಅವರಿಗೆ ಹಗ್​ ನೀಡಿದ ಸಂಜಯ್​ ದತ್​; ಇಲ್ಲಿದೆ ಫೋಟೋ ಗ್ಯಾಲರಿ

 ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ಗೆ ಕೋಟಿಕೋಟಿ ವೀಕ್ಷಣೆ; ಯಶ್ ಅವರನ್ನು ತಡೆಯುವವರೇ ಇಲ್ಲ

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ