Sign In

By signing in or creating an account, you agree with Associated Broadcasting Company's Terms & Conditions and Privacy Policy.

Harish Roy: ಕ್ಯಾನ್ಸರ್​ನಿಂದ ಕಣ್ಣೀರು ಹಾಕಿದ ‘ಕೆಜಿಎಫ್​ 2’ ನಟ ಹರೀಶ್​ ರಾಯ್; ಬೇಕಿದೆ ಎಲ್ಲರ ಸಹಾಯ

KGF 2 actor Harish Rai | Cancer: ‘ಕೆಜಿಎಫ್​ 2 ಸಿನಿಮಾ ಶೂಟಿಂಗ್​ ಸಂದರ್ಭದಲ್ಲೂ ನನ್ನ ಗಂಟಲಲ್ಲಿ ಗಡ್ಡೆ ಇತ್ತು. ಆದರೂ ನಾನು ಶೂಟಿಂಗ್​ ಮಾಡಿದೆ.’ ಎಂದು ಹರೀಶ್​ ರಾಯ್ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ.

Harish Roy: ಕ್ಯಾನ್ಸರ್​ನಿಂದ ಕಣ್ಣೀರು ಹಾಕಿದ ‘ಕೆಜಿಎಫ್​ 2’ ನಟ ಹರೀಶ್​ ರಾಯ್; ಬೇಕಿದೆ ಎಲ್ಲರ ಸಹಾಯ
ಹರೀಶ್ ರೈ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 26, 2022 | 7:45 PM

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್​ ರಾಯ್ (Harish Roy) ಅವರು ಕಷ್ಟದಲ್ಲಿದ್ದಾರೆ. ಮೂರು ವರ್ಷದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ ‘ಕೆಜಿಎಫ್​ 2’ (KGF Chapter 2) ಚಿತ್ರದ ಶೂಟಿಂಗ್​ ಇದೆ ​ಎಂಬ ಕಾರಣದಿಂದ ಅವರು ಚಿಕಿತ್ಸೆ ಪಡೆಯಲು ತಡ ಮಾಡಿದರು. ಹಣದ ಕೊರತೆ ಕೂಡ ಇದ್ದಿದ್ದರಿಂದ ಅವರು ಕಷ್ಟ ಅನುಭವಿಸಿದರು. ನಂತರ ವೈದ್ಯರನ್ನು ಭೇಟಿ ಮಾಡಿದಾಗ ಆತಂಕ ಕಾದಿತ್ತು. ಹರೀಶ್​ ರಾಯ್ ಅವರಿಗೆ ಕ್ಯಾನ್ಸರ್(Harish Rai Cancer) ಇರುವುದು ತಿಳಿದುಬಂತು. ಕೂಡಲೇ ಆಪರೇಷನ್​ ಮಾಡಿಸಲಾಯಿತು. ಆಪರೇಷನ್​ ನಂತರ ಕೂಡ ಕೆಲವು ಸಮಸ್ಯೆಗಳು ಎದುರಾದವು. ಆ ಎಲ್ಲ ಘಟನೆಗಳ ಬಗ್ಗೆ ಹರೀಶ್​ ರಾಯ್ ಈಗ ಮಾತನಾಡಿದ್ದಾರೆ. ‘ಗೋಪಿ ಗೌಡ್ರು’ ಯೂ​ಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಕಷ್ಟವನ್ನು ಅವರು ಮೊದಲ ಬಾರಿ ತೋಡಿಕೊಂಡಿದ್ದಾರೆ.

‘ವೈದ್ಯರು ನಾಲ್ಕನೇ ಸ್ಟೇಜ್​ ಎಂದರು. ಇನ್ನು ನನಗೆ ಎಷ್ಟು ಟೈಮ್​ ಉಳಿದಿದೆ ಅಂತ ಕೇಳಿದೆ. ಮೂರು ವರ್ಷ ಹೆದರಬೇಡಿ ಅಂತ ಡಾಕ್ಟರ್​ ಹೇಳಿದ್ರು. ರೇಡಿಯೋ ಥೆರಪಿ ವರ್ಕ್​ ಆಗದ ಕಾರಣ ಬೇರೆ ಮಾತ್ರೆ ನೀಡುತ್ತಿದ್ದಾರೆ. ಆ ಮಾತ್ರೆಗಳಿಗೆ ಖರ್ಚು ಜಾಸ್ತಿ. ತಿಂಗಳಿಗೆ 3.5 ಲಕ್ಷ ಖರ್ಚಾಗಬಹುದು. 8-10 ತಿಂಗಳು ಮಾತ್ರೆ ತೆಗೆದುಕೊಳ್ಳಬೇಕು ಅಂತ ವೈದ್ಯರು ಹೇಳಿದ್ದಾರೆ’ ಎಂದು ಹರೀಶ್​ ರಾಯ್ ಮಾತನಾಡಿದ್ದಾರೆ.

ಹರೀಶ್​ ರಾಯ್ ಅವರ ಚಿಕಿತ್ಸೆಗೆ ಹಣದ ಅನಿವಾರ್ಯತೆ ಇದೆ. ‘ಫ್ಯಾಮಿಲಿ ಅನ್ನೋರು ಯಾರೂ ಬರಲ್ಲ. ಕಷ್ಟದಲ್ಲಿ ಅವರು ಸಹಾಯ ಮಾಡಲ್ಲ. ಜನರು ಬರುತ್ತಾರೆ’ ಎಂದು ಅವರು ನಂಬಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ‘ಕೆಜಿಎಫ್​ 2 ಸಿನಿಮಾ ಶೂಟಿಂಗ್​ ಸಂದರ್ಭದಲ್ಲೂ ನನಗೆ ಗಂಟಲಲ್ಲಿ ಗಡ್ಡೆ ಇತ್ತು. ಆದರೂ ಕೂಡ ನಾನು ಶೂಟಿಂಗ್​ ಮಾಡಿದೆ. ಫೈಟಿಂಗ್​ ಸೀನ್​ ಸಹ ಮಾಡಿದೆ. ಗಡ್ಡೆ ಯಾರಿಗೂ ಕಾಣಿಸುತ್ತಿರಲಿಲ್ಲ. ನಾನು ಯಾರಿಗೂ ಹೇಳಲಿಲ್ಲ. ನಾನೇ ಮುಚ್ಚುಮರೆ ಮಾಡಿದೆ’ ಎಂದು ಹರೀಶ್​ ರಾಯ್ ಹೇಳಿದ್ದಾರೆ.

ಇದನ್ನೂ ಓದಿ
Image
Breast Cancer: ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್;​ ಎಮೋಷನಲ್​ ವಿಡಿಯೋ ಹಂಚಿಕೊಂಡ ಅನುಪಮ್​ ಖೇರ್​
Image
33ನೇ ವಯಸ್ಸಿಗೆ ಕ್ಯಾನ್ಸರ್​ನಿಂದ ಖ್ಯಾತ ಸಿಂಗರ್​ ನಿಧನ; ಸಂತಾಪ ಸೂಚಿಸಿದ ಯುವರಾಜ್​ ಸಿಂಗ್
Image
‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು
Image
ಹೆಂಡತಿಗೆ ಬ್ರೈನ್ ಟ್ಯೂಮರ್​, ತಂದೆಗೆ ಕ್ಯಾನ್ಸರ್​, ಖರ್ಚಿಗಿರಲಿಲ್ಲ ಹಣ; ಇದು ಸೂಪರ್​ಸ್ಟಾರ್​ ಆದ ನಟನ ಹಿಂದಿನ ಕಥೆ

‘ಎಲ್ಲರಿಗೂ ಈ ಸಮಸ್ಯೆ ಬಗ್ಗೆ ಗೊತ್ತಾದರೆ ಆಫರ್​ ಬರುವುದಿಲ್ಲ ಅಂತ ಭಯ ಆಯ್ತು. ಹಾಗಾಗಿ ಕೆಜಿಎಫ್​ 2 ಚಿತ್ರ ರಿಲೀಸ್​ ಆದ ಬಳಿಕ ಕೆಲವರಿಗೆ ನಾನು ಸಂದರ್ಶನ ಕೊಟ್ಟಿಲ್ಲ. ಅವರೆಲ್ಲ ತಪ್ಪು ತಿಳಿದುಕೊಂಡಿದ್ದಾರೇನೋ ಗೊತ್ತಿಲ್ಲ’ ಎಂದು ಹರೀಶ್​ ರಾಯ್ ಹೇಳಿದ್ದಾರೆ.

ಈಗ ಕನ್ನಡ ಚಿತ್ರರಂಗದ ಕೆಲವು ಸ್ಟಾರ್​ ಕಲಾವಿದರು ಅವರ ಸಹಾಯಕ್ಕೆ ಧಾವಿಸಿದ್ದಾರೆ. ಹೆಸರು ಹೇಳಲು ಇಚ್ಛಿಸಿದೇ, ಚಿಕಿತ್ಸೆಗೆ ಬೇಕಾಗುವ ಹಣವನ್ನು ನೀಡಲು ಕನ್ನಡದ ಹೀರೋ ಒಬ್ಬರು ಮುಂದೆ ಬಂದಿದ್ದಾರೆ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹರೀಶ್​ ರಾಯ್ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:41 am, Fri, 26 August 22

ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು