AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ

Nano Narayanappa: ಹತ್ತು ತಲೆಯ ರಾವಣನ ರೀತಿಯಲ್ಲಿ ಈ ಸಿನಿಮಾದ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ನ್ಯಾನೋ ಕಾರು ಕೂಡ ಗಮನ ಸೆಳೆಯುತ್ತಿದೆ.

10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ
ಕೃಷ್ಣ ಜಿ. ರಾವ್
TV9 Web
| Edited By: |

Updated on: Jun 28, 2022 | 7:15 AM

Share

ಬಣ್ಣದ ಲೋಕದಲ್ಲಿ ಯಾರಿಗೆ ಯಾವಾಗ ಬೇಕಾದರೂ ಅದೃಷ್ಟ ಖುಲಾಯಿಸಬಹುದು. ಒಂದೇ ಒಂದು ಪಾತ್ರ ಹಿಟ್​ ಆದರೆ ಸಾಕು, ಅದರಿಂದ ಇನ್ನಷ್ಟು ಅವಕಾಶಗಳು ಹರಿದುಬರುತ್ತವೆ. ಯಾವ ವಯಸ್ಸಿನಲ್ಲಿ ಬೇಕಾದರೂ ಮಿಂಚುವ ಚಾನ್ಸ್​ ಸಿಗುತ್ತದೆ. ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದಲ್ಲಿ ನಟಿಸಿದ ಕೃಷ್ಣ ಜಿ. ರಾವ್​ ಅವರಿಗೆ ಈಗ ಅಂಥದ್ದೇ ಆಫರ್​ ಸಿಕ್ಕಿದೆ. ಕೃಷ್ಣ ಜಿ. ರಾವ್ (Krishna G Rao) ಅಂದರೆ ತಕ್ಷಣಕ್ಕೆ ಗೊತ್ತಾಗದೇ ಇರಬಹುದು. ‘ನಿಮಗೆ ಒಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋಕೆ ಹೋಗ್ಬೇಡಿ ಸಾರ್​..’ ಎಂಬ ಡೈಲಾಗ್​ ಹೊಡೆದ ತಾತ ಎಂದರೆ ತಕ್ಷಣಕ್ಕೆ ಆ ಪಾತ್ರ ಕಣ್ಣ ಮುಂದೆ ಬರುತ್ತದೆ. ಹೌದು, ಆ ಪಾತ್ರ ಮಾಡಿ ಫೇಮಸ್​ ಆದವರೇ ಕೃಷ್ಣ ಜಿ. ರಾವ್​. ಅವರು ಈಗ ‘ನ್ಯಾನೋ ನಾರಾಯಣಪ್ಪ’ (Nano Narayanappa) ಚಿತ್ರದಲ್ಲಿ ಹೀರೋ ಆಗಿದ್ದಾರೆ. ಆ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ.

ಹತ್ತು ತಲೆಯ ರಾವಣನ ರೀತಿಯಲ್ಲಿ ಈ ಸಿನಿಮಾದ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ನ್ಯಾನೋ ಕಾರು ಕೂಡ ಗಮನ ಸೆಳೆಯುತ್ತಿದೆ. ಆ ಮೂಲಕ ‘ನ್ಯಾನೋ ನಾರಾಯಣಪ್ಪ’ ಚಿತ್ರದ ಕಥೆ ಏನು ಎಂಬ ಕೌತುಕ ಮೂಡಿದೆ. ‘ಕೆಮಿಸ್ಟ್ರೀ ಆಫ್​ ಕರಿಯಪ್ಪ’, ‘ಕ್ರಿಟಿಕಲ್​ ಕೀರ್ತನೆಗಳು’ ಸಿನಿಮಾ ಮಾಡಿ ಸೈ ಎನಿಸಿಕೊಂಡ ನಿರ್ದೇಶಕ ಕುಮಾರ್​ ಅವರು ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಆಕ್ಷನ್​-ಕಟ್​ ಹೇಳಿದ್ದಾರೆ.

ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಕುಮಾರ್​ ಅವರೇ ನಿಭಾಯಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ ಶೂಟಿಂಗ್​ ಮುಗಿದಿದೆ. ‘ಇದೊಂದು ಕಾಮಿಡಿ ಕಥಾಹಂದರದ ಎಮೋಷನಲ್ ಡ್ರಾಮಾ. ಈ ಸಿನಿಮಾದಲ್ಲಿ ತುಂಬ ಕಾಡುವಂತಹ ಕಥೆ ಇದೆ. ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಇದು’ ಎಂದಿದ್ದಾರೆ ಕುಮಾರ್​.

ಇದನ್ನೂ ಓದಿ
Image
ಮುಂಬೈನಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದೆ ‘ಕೆಜಿಎಫ್ 2’; ಯಶ್ ಸಿನಿಮಾದ ಒಟ್ಟೂ ಗಳಿಕೆ ಎಷ್ಟು?
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
ಶ್ವೇತವರ್ಣದ ಉಡುಗೆ ಧರಿಸಿ ಅಭಿಮಾನಿಗಳನ್ನು ಸೆಳೆದುಕೊಂಡ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಆಗಸ್ಟ್​ನಲ್ಲಿ ‘ನ್ಯಾನೋ ನಾರಾಯಣಪ್ಪ’ ಚಿತ್ರವನ್ನು ಬಿಡುಗಡೆ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ. ರಾಜ ಶಿವಶಂಕರ್​ ಅವರು ಛಾಯಾಗ್ರಾಹಣ ಮಾಡಿದ್ದಾರೆ. ಆಕಾಶ್ ಪರ್ವ ಸಂಗೀತ ನಿರ್ದೇಶನ ಹಾಗೂ ಸಿದ್ದು ಅವರ ಸಂಕಲನದೊಂದಿಗೆ ಈ ಸಿನಿಮಾ ಮೂಡಿಬರುತ್ತಿದೆ.

ಇದನ್ನೂ ಓದಿ: ‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು