AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ

Nano Narayanappa: ಹತ್ತು ತಲೆಯ ರಾವಣನ ರೀತಿಯಲ್ಲಿ ಈ ಸಿನಿಮಾದ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ನ್ಯಾನೋ ಕಾರು ಕೂಡ ಗಮನ ಸೆಳೆಯುತ್ತಿದೆ.

10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ
ಕೃಷ್ಣ ಜಿ. ರಾವ್
TV9 Web
| Edited By: |

Updated on: Jun 28, 2022 | 7:15 AM

Share

ಬಣ್ಣದ ಲೋಕದಲ್ಲಿ ಯಾರಿಗೆ ಯಾವಾಗ ಬೇಕಾದರೂ ಅದೃಷ್ಟ ಖುಲಾಯಿಸಬಹುದು. ಒಂದೇ ಒಂದು ಪಾತ್ರ ಹಿಟ್​ ಆದರೆ ಸಾಕು, ಅದರಿಂದ ಇನ್ನಷ್ಟು ಅವಕಾಶಗಳು ಹರಿದುಬರುತ್ತವೆ. ಯಾವ ವಯಸ್ಸಿನಲ್ಲಿ ಬೇಕಾದರೂ ಮಿಂಚುವ ಚಾನ್ಸ್​ ಸಿಗುತ್ತದೆ. ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದಲ್ಲಿ ನಟಿಸಿದ ಕೃಷ್ಣ ಜಿ. ರಾವ್​ ಅವರಿಗೆ ಈಗ ಅಂಥದ್ದೇ ಆಫರ್​ ಸಿಕ್ಕಿದೆ. ಕೃಷ್ಣ ಜಿ. ರಾವ್ (Krishna G Rao) ಅಂದರೆ ತಕ್ಷಣಕ್ಕೆ ಗೊತ್ತಾಗದೇ ಇರಬಹುದು. ‘ನಿಮಗೆ ಒಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋಕೆ ಹೋಗ್ಬೇಡಿ ಸಾರ್​..’ ಎಂಬ ಡೈಲಾಗ್​ ಹೊಡೆದ ತಾತ ಎಂದರೆ ತಕ್ಷಣಕ್ಕೆ ಆ ಪಾತ್ರ ಕಣ್ಣ ಮುಂದೆ ಬರುತ್ತದೆ. ಹೌದು, ಆ ಪಾತ್ರ ಮಾಡಿ ಫೇಮಸ್​ ಆದವರೇ ಕೃಷ್ಣ ಜಿ. ರಾವ್​. ಅವರು ಈಗ ‘ನ್ಯಾನೋ ನಾರಾಯಣಪ್ಪ’ (Nano Narayanappa) ಚಿತ್ರದಲ್ಲಿ ಹೀರೋ ಆಗಿದ್ದಾರೆ. ಆ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ.

ಹತ್ತು ತಲೆಯ ರಾವಣನ ರೀತಿಯಲ್ಲಿ ಈ ಸಿನಿಮಾದ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ನ್ಯಾನೋ ಕಾರು ಕೂಡ ಗಮನ ಸೆಳೆಯುತ್ತಿದೆ. ಆ ಮೂಲಕ ‘ನ್ಯಾನೋ ನಾರಾಯಣಪ್ಪ’ ಚಿತ್ರದ ಕಥೆ ಏನು ಎಂಬ ಕೌತುಕ ಮೂಡಿದೆ. ‘ಕೆಮಿಸ್ಟ್ರೀ ಆಫ್​ ಕರಿಯಪ್ಪ’, ‘ಕ್ರಿಟಿಕಲ್​ ಕೀರ್ತನೆಗಳು’ ಸಿನಿಮಾ ಮಾಡಿ ಸೈ ಎನಿಸಿಕೊಂಡ ನಿರ್ದೇಶಕ ಕುಮಾರ್​ ಅವರು ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಆಕ್ಷನ್​-ಕಟ್​ ಹೇಳಿದ್ದಾರೆ.

ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಕುಮಾರ್​ ಅವರೇ ನಿಭಾಯಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ ಶೂಟಿಂಗ್​ ಮುಗಿದಿದೆ. ‘ಇದೊಂದು ಕಾಮಿಡಿ ಕಥಾಹಂದರದ ಎಮೋಷನಲ್ ಡ್ರಾಮಾ. ಈ ಸಿನಿಮಾದಲ್ಲಿ ತುಂಬ ಕಾಡುವಂತಹ ಕಥೆ ಇದೆ. ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಇದು’ ಎಂದಿದ್ದಾರೆ ಕುಮಾರ್​.

ಇದನ್ನೂ ಓದಿ
Image
ಮುಂಬೈನಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದೆ ‘ಕೆಜಿಎಫ್ 2’; ಯಶ್ ಸಿನಿಮಾದ ಒಟ್ಟೂ ಗಳಿಕೆ ಎಷ್ಟು?
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
ಶ್ವೇತವರ್ಣದ ಉಡುಗೆ ಧರಿಸಿ ಅಭಿಮಾನಿಗಳನ್ನು ಸೆಳೆದುಕೊಂಡ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಆಗಸ್ಟ್​ನಲ್ಲಿ ‘ನ್ಯಾನೋ ನಾರಾಯಣಪ್ಪ’ ಚಿತ್ರವನ್ನು ಬಿಡುಗಡೆ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ. ರಾಜ ಶಿವಶಂಕರ್​ ಅವರು ಛಾಯಾಗ್ರಾಹಣ ಮಾಡಿದ್ದಾರೆ. ಆಕಾಶ್ ಪರ್ವ ಸಂಗೀತ ನಿರ್ದೇಶನ ಹಾಗೂ ಸಿದ್ದು ಅವರ ಸಂಕಲನದೊಂದಿಗೆ ಈ ಸಿನಿಮಾ ಮೂಡಿಬರುತ್ತಿದೆ.

ಇದನ್ನೂ ಓದಿ: ‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ