AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​

Yash | KGF 3: ‘ಕೆಜಿಎಫ್​: ಚಾಪ್ಟರ್​ 3’ ಸಿನಿಮಾ ಆದಷ್ಟು ಬೇಗ ಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್​ ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಬಗ್ಗೆಯೂ ಅಭಿಮಾನಿಗಳಿಗೆ ಕಾತರ ಇದೆ.

KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​
ಯಶ್
TV9 Web
| Edited By: |

Updated on: Apr 27, 2022 | 8:03 AM

Share

ಊಹಿಸಲು ಅಸಾಧ್ಯವಾದ ರೀತಿಯಲ್ಲಿ ಕನ್ನಡದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಯಶಸ್ಸು ಸಾಧಿಸಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆದ ಈ ಸಿನಿಮಾವನ್ನು ಎಲ್ಲ ಭಾಷೆಯ ಜನರು ಇಷ್ಟಪಟ್ಟಿದ್ದಾರೆ. ನಟ ಯಶ್​ (Rocking Star Yash) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅನೇಕ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳು ಅವರ ಸಂದರ್ಶನ ಮಾಡುತ್ತಿವೆ. ‘ಕೆಜಿಎಫ್​’ ಸಿನಿಮಾ ಅನೌನ್ಸ್​ ಆದಾಗ ಅದು ಎರಡು ಪಾರ್ಟ್​ನಲ್ಲಿ ಬರುತ್ತದೆ ಎಂಬುದು ತಿಳಿದಿರಲಿಲ್ಲ. ಅದೇ ರೀತಿ ‘ಕೆಜಿಎಫ್​: ಚಾಪ್ಟರ್ 2’ ರಿಲೀಸ್​ ಆಗೋದಕ್ಕಿಂತ ಮುನ್ನ ‘ಕೆಜಿಎಫ್​ 3’ (KGF 3) ಬಗ್ಗೆ ಪ್ರೇಕ್ಷಕರಿಗೆ ಕಲ್ಪನೆ ಇರಲಿಲ್ಲ. ‘ಕೆಜಿಎಫ್​ 2’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ‘ಕೆಜಿಎಫ್​: ಚಾಪ್ಟರ್​ 3’ ಬಗ್ಗೆ ಹಿಂಟ್​ ನೀಡಲಾಗಿದೆ. ಹಾಗಾಗಿ ಎಲ್ಲರೂ 3ನೇ ಚಾಪ್ಟರ್​ ಸಲುವಾಗಿ ಕಾಯುವಂತಾಗಿದೆ. ಈ ಸಿನಿಮಾ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಅಷ್ಟರಲ್ಲಾಗಲೇ ಯಶ್​ ಅವರು ಒಂದು ವಿಚಾರವನ್ನು ಬಾಯಿಬಿಟ್ಟಿದ್ದಾರೆ. ‘ವೆರೈಟಿ’ ಮ್ಯಾಗಜಿನ್​ಗೆ ನೀಡಿದ ಸಂದರ್ಶನದಲ್ಲಿ ಅವರು ‘ಕೆಜಿಎಫ್​: ಚಾಪ್ಟರ್​ 3’ ಬಗ್ಗೆ ಮಾತನಾಡಿದ್ದಾರೆ.

‘ನಾವು ಕೆಜಿಎಫ್​ ಚಾಪ್ಟರ್​ 2 ಸಿನಿಮಾದಲ್ಲಿ ತೋರಿಸಲು ಆಗದೇ ಇರುವ ಹಲವು ವಿಷಯಗಳು ಇವೆ. ಪ್ರಶಾಂತ್​ ನೀಲ್​ ಮತ್ತು ನಾನು ಸಾಕಷ್ಟು ದೃಶ್ಯಗಳ ಬಗ್ಗೆ ಯೋಚಿಸಿದ್ದೇವೆ. ಇನ್ನೂ ಅನೇಕ ಸಾಧ್ಯತೆಗಳಿವೆ ಎಂಬುದು ನಮಗೆ ತಿಳಿದಿದೆ. ಭರ್ಜರಿಯಾದ ದೃಶ್ಯಗಳಿವೆ. ಆದರೆ ಅದೆಲ್ಲವೂ ಒಂದು ಐಡಿಯಾ ಅಷ್ಟೇ. ಸದ್ಯಕ್ಕೆ ಅದನ್ನು ಹಾಗೆಯೇ ಇಟ್ಟಿದ್ದೇವೆ’ ಎಂದು ಯಶ್​ ಹೇಳಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 3’ ಸಿನಿಮಾ ಆದಷ್ಟು ಬೇಗ ಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್​ ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆಯೂ ಅಭಿಮಾನಿಗಳಿಗೆ ಕಾತರ ಇದೆ. ಇತ್ತೀಚೆಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸನ್ನು ಇಡೀ ತಂಡ ಸೆಲೆಬ್ರೇಟ್​ ಮಾಡಿದೆ. ಈ ವೇಳೆ ಕತ್ತರಿಸಿದ ಕೇಕ್​ನಲ್ಲಿ ‘ಇದು ಕೇವಲ ಆರಂಭ ಮಾತ್ರ’ ಎಂದು ಬರೆದಿರುವುದು ಕಂಡು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಹಾಗಾಗಿ ಯಶ್​, ಪ್ರಶಾಂತ್​ ನೀಲ್​, ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಬರುವ ಪ್ರತಿ ಅಪ್​ಡೇಟ್​ಗಾಗಿ ಸಿನಿಪ್ರಿಯರು ಕಾದಿದ್ದಾರೆ.

ಒಂದು ಕಾಲದಲ್ಲಿ ಕನ್ನಡ ಸಿನಿಮಾರಂಗವನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇಲ್ಲಿನ ಮಾರುಕಟ್ಟೆ ತುಂಬ ಚಿಕ್ಕದು ಎಂದು ಹೇಳಲಾಗುತ್ತಿತ್ತು. ಆ ಬಗ್ಗೆಯೂ ಯಶ್​ ಅವರು ಮಾತನಾಡಿದ್ದಾರೆ. ‘ಒಂದು ಹೆಜ್ಜೆಯಿಂದಾಗಿ ನಮ್ಮ ಚಿತ್ರರಂಗದಲ್ಲಿ ಬದಲಾವಣೆ ಸಾಧ್ಯವಾಗಿದೆ. ದೇಶದ ಎಲ್ಲ ಮೂಲೆಗಳಲ್ಲೂ ಜನರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ’ ಎಂದು ಯಶ್​ ಹೇಳಿದ್ದಾರೆ.

ವಿಶ್ವಾದ್ಯಂತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಚಿತ್ರದ ಒಟ್ಟು ಕಲೆಕ್ಷನ್​ ಸಾವಿರ ಕೋಟಿ ರೂಪಾಯಿ ಸಮೀಪದಲ್ಲಿದೆ. ಕೇವಲ ಹಿಂದಿ ವರ್ಷನ್​ನಿಂದಲೇ 300 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಆಗಿದೆ. ಇದರಿಂದ ಯಶ್​ ವೃತ್ತಿ ಜೀವನಕ್ಕೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ಅವರ ಡಿಮ್ಯಾಂಡ್​ ಕೂಡ ಹೆಚ್ಚಿದೆ. ಚಿತ್ರದ ಗೆಲುವಿಗೆ ಕಾರಣರಾದ ಎಲ್ಲ ಪ್ರೇಕ್ಷಕರಿಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಇತ್ತೀಚೆಗೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ:

‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?

‘ಬಾಲಿವುಡ್​ ಮೇಲೆ ಸ್ಯಾಂಡಲ್​ವುಡ್​ ಎಸೆದ ಅಣುಬಾಂಬ್​ ಇದು’: ಯಶ್​ ಗೆಲುವನ್ನು ಹೀಗೆ ವರ್ಣಿಸಿದ ಆರ್​ಜಿವಿ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ