AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Meets Modi: ‘ಚಿತ್ರರಂಗದ ಬಗೆಗಿನ ಸಣ್ಣ ವಿಚಾರಗಳನ್ನೂ ಮೋದಿ ತಿಳಿದುಕೊಂಡಿರುವುದು ಅಚ್ಚರಿ ಎನಿಸಿತು’: ಯಶ್​

Rocking Star Yash | PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ನಟ ರಾಕಿಂಗ್​ ಸ್ಟಾರ್​ ಯಶ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಎಲ್ಲವನ್ನೂ ಅವರು ತುಂಬ ಶ್ರದ್ಧೆಯಿಂದ ಕೇಳಿದರು’ ಎಂದು ಯಶ್​ ಹೇಳಿದ್ದಾರೆ.

Yash Meets Modi: ‘ಚಿತ್ರರಂಗದ ಬಗೆಗಿನ ಸಣ್ಣ ವಿಚಾರಗಳನ್ನೂ ಮೋದಿ ತಿಳಿದುಕೊಂಡಿರುವುದು ಅಚ್ಚರಿ ಎನಿಸಿತು’: ಯಶ್​
ಯಶ್, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on:Feb 13, 2023 | 5:19 PM

Share

‘ಏರೋ​ ಶೋ 2023’ ನಿಮಿತ್ತ ಬೆಂಗಳೂರಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳನ್ನು ಭೇಟಿ ಮಾಡಿದ್ದಾರೆ. ಇದು ಇಡೀ ಚಂದನವನಕ್ಕೆ ಹೆಮ್ಮೆ ತಂದಿದೆ. ಕನ್ನಡದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವುದರಿಂದ ಇಷ್ಟೆಲ್ಲ ಸಾಧ್ಯವಾಗಿದೆ. ‘ಕೆಜಿಎಫ್: ಚಾಪ್ಟರ್​ 1​’ ಮತ್ತು ‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಸಿನಿಮಾ ಮೂಲಕ ನಟ ಯಶ್​ ಅವರು ಕನ್ನಡ ಚಿತ್ರರಂಗದ ಬಾವುಟವನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಅವರು ಕೂಡ ಭಾನುವಾರ (ಫೆಬ್ರವರಿ 12) ಸಂಜೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಏನೆಲ್ಲ ಚರ್ಚೆ ಆಯಿತು ಎಂಬುದನ್ನು ‘ರಾಕಿಂಗ್​ ಸ್ಟಾರ್​’ ಯಶ್​ (Yash) ತಿಳಿಸಿದ್ದಾರೆ.

‘ಮೋದಿ ಅವರು ಎಲ್ಲವನ್ನೂ ತುಂಬ ಶ್ರದ್ಧೆಯಿಂದ ಕೇಳಿದರು. ನಮ್ಮ ಚಿತ್ರರಂಗದ ಬಗ್ಗೆ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಕೂಡ ತಿಳಿಸಿದರು. ಸರ್ಕಾರದಿಂದ ಚಿತ್ರರಂಗದವರು ಏನನ್ನು ನಿರೀಕ್ಷಿಸುತ್ತಿದ್ದಾರೆ ಅಂತ ವಿಚಾರಿಸಿದರು. ಚಿತ್ರರಂಗವು ದೇಶಕ್ಕೆ ಏನು ಕೊಡುಗೆ ನೀಡಬಹುದು ಎಂಬುದನ್ನು ಚರ್ಚಿಸಿದರು’ ಎಂದು ಯಶ್​ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

ಇದನ್ನೂ ಓದಿ
Image
ಮೋದಿ ಭೇಟಿ ಮಾಡಿದ ಖುಷಿಯಲ್ಲಿ ಶ್ರದ್ಧಾ; ಮೊದಲ ಭೇಟಿಯಲ್ಲೇ ‘ಅಯ್ಯೋ’ ಎಂದ ಪ್ರಧಾನಿ
Image
PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ
Image
ಪಿಎಂ ಮೋದಿ ಭೇಟಿ ವೇಳೆ ವಿಶೇಷ ಮನವಿ ಇಟ್ಟ ರಾಕಿಂಗ್ ಸ್ಟಾರ್ ಯಶ್​; ಏನದು?
Image
ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

‘ಪ್ರಧಾನ ಮಂತ್ರಿಗಳ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡುವ ಅವಕಾಶ ನಮಗೆ ಸಿಕ್ಕಿತು. ನಿಮಗೆ ಏನೇ ಬೇಕಿದ್ದರೂ ಬಂದು ಅವುಗಳನ್ನು ಪಡೆದುಕೊಳ್ಳಿ ಅಂತ ಹೇಳಿದರು.  ಚಿತ್ರರಂಗದ ಬಗೆಗಿನ ಸಣ್ಣ ವಿಚಾರಗಳನ್ನು ಕೂಡ ಅವರು ತಿಳಿದುಕೊಂಡಿರುವುದು ನನಗೆ ಅಚ್ಚರಿ ಎನಿಸಿತು. ಚಿತ್ರೋದ್ಯಮದ ಬಗ್ಗೆ ಅವರಿಗೆ ದೂರದೃಷ್ಟಿ ಇದೆ. ನಮ್ಮ ಕೆಲಸವನ್ನು ಅವರು ಹೊಗಳಿದರು. ಎಂದೆಂದಿಗೂ ಅವರು ನಮಗೆಲ್ಲ ಸ್ಫೂರ್ತಿ’ ಎಂದು ಯಶ್​ ಹೇಳಿದ್ದಾರೆ.

ಮೋದಿ ಭೇಟಿ ಬಗ್ಗೆ ರಿಷಬ್​ ಶೆಟ್ಟಿ ಹೇಳಿದ್ದೇನು?

‘ಕನಸು ನನಸಾದ ಕ್ಷಣ ಇದು. ಪ್ರಧಾನ ಮಂತ್ರಿ ಅವರನ್ನು ನಾನು ಮಹಾನ್​ ನಾಯಕರೆಂದು ತಿಳಿದಿದ್ದೇನೆ. ಅವರನ್ನು ಭೇಟಿ ಮಾಡಿದ್ದಕ್ಕೆ ತುಂಬ ಖುಷಿ ಆಯಿತು. ಕನ್ನಡ ಚಿತ್ರರಂಗ ಮತ್ತು ಭಾರತೀಯ ಚಿತ್ರರಂಗದಲ್ಲಿ ಏನೆಲ್ಲ ನಡೆಯುತ್ತಿದೆ? ನಮಗೆ ಇಲ್ಲಿ ಇನ್ನೂ ಏನೆಲ್ಲ ಬೇಕು ಎಂಬ ಬಗ್ಗೆ ಅವರು ಕೇಳಿದರು. ಮುಂದಿನ ದಿನಗಳಲ್ಲಿ ಅವರು ಏನೆಲ್ಲ ಮಾಡಬಹುದು ಎಂಬುದನ್ನೂ ಹೇಳಿದರು’ ಎಂದಿದ್ದಾರೆ ರಿಷಬ್​ ಶೆಟ್ಟಿ.

ಇದನ್ನೂ ಓದಿ: ಮೋದಿ ಭೇಟಿ ಮಾಡಿದ ಖುಷಿಯಲ್ಲಿ ಶ್ರದ್ಧಾ; ಮೊದಲ ಭೇಟಿಯಲ್ಲೇ ‘ಅಯ್ಯೋ’ ಎಂದ ಪ್ರಧಾನಿ

‘ನಮ್ಮ ಕಾಂತಾರ ಚಿತ್ರದ ಬಗ್ಗೆ ತುಂಬ ಮಾತನಾಡಿದರು. ಈ ಚಿತ್ರದ ಬಗ್ಗೆ ಅವರು ಸಾಕಷ್ಟು ತಿಳಿದಿದ್ದಾರೆ. ನಮ್ಮ ನಾಡಿನ ಕಥೆ, ನಮ್ಮ ಜನಪದ, ನಮ್ಮ ನಂಬಿಕೆ, ಸಂಪ್ರದಾಯವನ್ನು ಇಟ್ಟುಕೊಂಡು ಮಾಡಿದ ಕಾಂತಾರ ಸಿನಿಮಾ ಜಾಗತಿಕ ಮಟ್ಟಕ್ಕೆ ಹೋಗಿದ್ದಕ್ಕೆ ಅಭಿನಂದನೆ ತಿಳಿಸಿದರು. ಅವರ ಬಾಯಲ್ಲಿ ಹಲವು ಬಾರಿ ಕಾಂತಾರ ಸಿನಿಮಾ ಬಗ್ಗೆ ಕೇಳಿ ಖುಷಿ ಆಯಿತು’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:19 pm, Mon, 13 February 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು