AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1200 ಕೋಟಿ ರೂ. ಕಲೆಕ್ಷನ್​ ಮಾಡುವತ್ತ ‘ಕೆಜಿಎಫ್​ 2’; ಇನ್ನೂ ಒಂದಷ್ಟು ದಾಖಲೆ ಬರೆಯಲಿದೆ ಯಶ್​ ಚಿತ್ರ

KGF Chapter 2 Box Office Collection: ಎಷ್ಟೇ ಹೊಸ ಸಿನಿಮಾಗಳು ತೆರೆಕಂಡರೂ ಕೂಡ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರವನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ. ಯಶ್​ ಫ್ಯಾನ್ಸ್​ ಈ ಸಿನಿಮಾವನ್ನು ಅಷ್ಟರಮಟ್ಟಿಗೆ ಮುಗಿಬಿದ್ದು ನೋಡಿದ್ದಾರೆ.

1200 ಕೋಟಿ ರೂ. ಕಲೆಕ್ಷನ್​ ಮಾಡುವತ್ತ ‘ಕೆಜಿಎಫ್​ 2’; ಇನ್ನೂ ಒಂದಷ್ಟು ದಾಖಲೆ ಬರೆಯಲಿದೆ ಯಶ್​ ಚಿತ್ರ
ಯಶ್
TV9 Web
| Edited By: |

Updated on:May 11, 2022 | 2:51 PM

Share

‘ಕೆಜಿಎಫ್​: ಚಾಪ್ಟರ್​ 2’ (KGF 2 Collection) ಸಿನಿಮಾದ ಕಲೆಕ್ಷನ್​ ನೋಡಿ ಎಲ್ಲರೂ ದಂಗಾಗಿದ್ದಾರೆ. ಹಲವು ಘಟಾನುಘಟಿ ಸ್ಟಾರ್​ ಸಿನಿಮಾಗಳನ್ನೆಲ್ಲ ಹಿಂದಿಕ್ಕಿ ಈ ಚಿತ್ರ ಧೂಳೆಬ್ಬಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ‘ಕೆಜಿಎಫ್​ 2’ ಕಲೆಕ್ಷನ್​ ಇನ್ನೂ ತಗ್ಗಿಲ್ಲ. ಬಿಡುಗಡೆಯಾಗಿ 28 ದಿನ ಕಳೆದಿದೆ. ಆದರೂ ಸಹ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ತನ್ನ ನೆಲೆಯನ್ನು ಬೇರೆ ಸಿನಿಮಾಗೆ ಬಿಟ್ಟುಕೊಟ್ಟಿಲ್ಲ. ಹಾಲಿವುಡ್​ನ ‘ಡಾಕ್ಟರ್​ ಸ್ಟ್ರೇಂಜ್​ ಇನ್​ ದಿ ಮಲ್ಟಿವರ್ಸ್​ ಆಫ್​ ಮ್ಯಾಡ್ನೆಸ್​’ ಸಿನಿಮಾ ಬಂದರೂ ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಕಲೆಕ್ಷನ್​ಗೆ ತೊಂದರೆ ಆಗಿಲ್ಲ. ಯಶ್​ (Yash) ಚಿತ್ರಕ್ಕೆ ಕೆಲವು ಕಡೆಗಳಲ್ಲಿ ಸ್ಕ್ರೀನ್​ ಸಂಖ್ಯೆ ಕಡಿಮೆ ಆಗಿರಬಹುದು. ಆದರೆ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವುದು ಅಚ್ಚರಿಯೇ ಸರಿ. ಈವರೆಗೂ 1160 ಕೋಟಿ ರೂಪಾಯಿ ಗಳಿಸಿರುವ ಈ ಸಿನಿಮಾದಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ‘ಕೆಜಿಎಫ್​ 2’ ಸಿನಿಮಾದ ಕಲೆಕ್ಷನ್​ (KGF Chapter 2 Collection) 1200 ಕೋಟಿ ರೂಪಾಯಿ ಗಡಿ ಮುಟ್ಟಲಿದೆಯೇ ಎಂಬ ಕೌತುಕ ನಿರ್ಮಾಣ ಆಗಿದೆ. ಇನ್ನಷ್ಟು ದಾಖಲೆಗಳನ್ನು ಮುರಿಯುವ ಸಾಧ್ಯತೆ ದಟ್ಟವಾಗಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಶಸ್ವಿಯಾಗಿ 25ನೇ ದಿನವನ್ನು ಪೂರೈಸಿತು. ಇಂದಿನ ಕಾಲದಲ್ಲಿ 25 ದಿನಗಳ ಕಾಲ ಸತತವಾಗಿ ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುವುದು ಎಂದರೆ ತಮಾಷೆಯ ವಿಷಯವೇ ಅಲ್ಲ. ಈ 25 ದಿನಗಳಲ್ಲಿ ಅನೇಕ ಬೇರೆ ಬೇರೆ ಸಿನಿಮಾಗಳು ಬಿಡುಗಡೆ ಆದವು. ಮೊದಲು ದಳಪತಿ ವಿಜಯ್​ ನಟನೆ ‘ಬೀಸ್ಟ್​’, ನಂತರ ಶಾಹಿದ್​ ಕಪೂರ್​ ಅಭಿನಯದ ‘ಜೆರ್ಸಿ’ ಚಿತ್ರ ಬಂದವು. ಆದರೆ ‘ಕೆಜಿಎಫ್​ 2’ ಚಿತ್ರಕ್ಕೆ ಫೈಟ್​ ನೀಡಲು ಆ ಸಿನಿಮಾಗಳಿಗೆ ಸಾಧ್ಯವಾಗಲೇ ಇಲ್ಲ.

ಅಜಯ್​ ದೇವಗನ್​ ನಟನೆ ಮಾಡಿ ನಿರ್ದೇಶಿಸಿದ ‘ರನ್​ವೇ 34’ ಚಿತ್ರ ಕೂಡ ಬಿಡುಗಡೆ ಆಯಿತು. ಆ್ಯಕ್ಷನ್​ ಹೀರೋ ಆಗಿ ಗುರುತಿಸಿಕೊಂಡಿರುವ ಟೈಗರ್​ ಶ್ರಾಫ್​ ಅವರ ‘ಹೀರೋಪಂತಿ 2’ ಸಿನಿಮಾ ರಿಲೀಸ್​ ಆದರೂ ಕೂಡ ‘ಕೆಜಿಎಫ್​ 2’ ಸಿನಿಮಾವನ್ನು ಅಲ್ಲಾಡಿಸಲು ಆಗಲಿಲ್ಲ. ಈಗ ಹಾಲಿವುಡ್​ನ ‘ಡಾಕ್ಟರ್​ ಸ್ಟ್ರೇಂಜ್​ ಇನ್​ ದಿ ಮಲ್ಟಿವರ್ಸ್​ ಆಫ್​ ಮ್ಯಾಡ್ನೆಸ್​’ ಸಿನಿಮಾ ಬಂದಿದ್ದರೂ ಕೂಡ ಅನೇಕ ಕಡೆಗಳಲ್ಲಿ ಯಶ್​ ಸಿನಿಮಾ ಅತ್ಯುತ್ತಮ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು
Image
‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಹಲವು ಕಾರಣಗಳಿವೆ. ರವಿ ಬಸ್ರೂರು ಅವರ ಸಂಗೀತ, ಭುವನ್​ ಗೌಡ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ, ಯಶ್​ ಮ್ಯಾನರಿಸಂ, ಎಲ್ಲ ಕಲಾವಿದರ ನಟನೆ, ತಾಯಿ ಸೆಂಟಿಮೆಂಟ್​, ಮೈ ನವಿರೇಳಿಸುವ ಆ್ಯಕ್ಷನ್​ ಸನ್ನಿವೇಶ, ಸರಿಸಾಟಿ ಇಲ್ಲದ ಮೇಕಿಂಗ್​, ಬೃಹತ್​ ಸೆಟ್​ಗಳು ಸೇರಿದಂತೆ ಅನೇಕ ಅಂಶಗಳನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಎಲ್ಲದರ ಪರಿಣಾಮವಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಯಭೇರಿ ಬಾರಿಸಿದೆ. ಸಂಜಯ್​ ದತ್​, ರವೀನಾ ಟಂಡನ್​ ಅವರು ‘ಕೆಜಿಎಫ್​ 2’ ಸಿನಿಮಾದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡರು. ಹಿಂದಿ ಪ್ರೇಕ್ಷಕರಿಗೆ ಈ ಚಿತ್ರ ಆಪ್ತವಾಗಲು ಇದು ಕೂಡ ಒಂದು ಕಾರಣ. ಈ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Wed, 11 May 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?