1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ
ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 30, 2022 | 2:35 PM

‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಬಗ್ಗೆ ಇದ್ದ ಕ್ರೇಜ್ ನೋಡಿ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯಲಿದೆ ಎಂದು ಸಿನಿ ಪಂಡಿತರು ಮೊದಲೇ ಊಹಿಸಿದ್ದರು. ಈ ಊಹೆ ನಿಜವಾಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತೀಯ ಸಿನಿಮಾ ಇತಿಹಾಸದಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಮೂರು ಚಿತ್ರಗಳು ಮಾತ್ರ. ಕನ್ನಡದ ಸಿನಿಮಾ (Kannada Cinema) ಒಂದು ಈ ದಾಖಲೆ ಬರೆದಿದ್ದು ಇದೇ ಮೊದಲು ಅನ್ನೋದು ವಿಶೇಷ.

‘ಕೆಜಿಎಫ್ 2’ ಏಪ್ರಿಲ್​ 14ರಂದು ರಿಲೀಸ್ ಆಯಿತು. ಕೊವಿಡ್ ಸಂಪೂರ್ಣವಾಗಿ ಇಳಿಮುಖ ಆದ್ದರಿಂದ ಜನರು ಹುಚ್ಚೆದ್ದು ಸಿನಿಮಾ ವೀಕ್ಷಿಸಿದರು. ‘ಕೆಜಿಎಫ್ 2’ ಜತೆ ತೆರೆಗೆ ಬಂದ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಮಕಾಡೆ ಮಲಗಿದ್ದರಿಂದ ತಮಿಳುನಾಡಿನಲ್ಲಿ ‘ಕೆಜಿಎಫ್ 2’ಗೆ ಹೆಚ್ಚು ಚಿತ್ರಮಂದಿರಗಳು ಸಿಕ್ಕವು. ಇನ್ನು, ಹಾಲಿವುಡ್​ನ ಯಾವುದೇ ಸಿನಿಮಾ ಈ ಸಂದರ್ಭದಲ್ಲಿ ತೆರೆಗೆ ಬಂದಿಲ್ಲ. ಹೀಗಾಗಿ, ಹೊರ ದೇಶಗಳಲ್ಲೂ ಜನರು ಈ ಸಿನಿಮಾ ವೀಕ್ಷಿಸಿದರು.

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಬಾಲಿವುಡ್​ ಒಂದರಲ್ಲೇ ಈ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡರೂ ಅಚ್ಚರಿ ಏನಿಲ್ಲ ಎನ್ನಲಾಗುತ್ತಿದೆ.

ವಿಶ್ವ ಮಟ್ಟದ ಕಲೆಕ್ಷನ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ರಮೇಶ್ ಬಾಲ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 2 ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ದಂಗಲ್, ಬಾಹುಬಲಿ 2 ಹಾಗೂ ‘ಆರ್​ಆರ್​ಆರ್​’ ಬಳಿಕ 1000 ಕೋಟಿ ಕ್ಲಬ್ ಸೇರಿದ ನಾಲ್ಕನೇ ಸಿನಿಮಾ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಾಲಿವುಡ್​ನಲ್ಲಿ ಹಾಸಿಗೆಯನ್ನೇ ಉದ್ದ ಮಾಡಿ ಕಾಲು ಚಾಚಿದ ರಾಕಿ; ‘ಟೈಗರ್..’, ‘ಪಿಕೆ’ ಕಲೆಕ್ಷನ್ ಹಿಂದಿಕ್ಕಿದ ‘ಕೆಜಿಎಫ್ 2’

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ