AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 30, 2022 | 2:35 PM

‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಬಗ್ಗೆ ಇದ್ದ ಕ್ರೇಜ್ ನೋಡಿ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯಲಿದೆ ಎಂದು ಸಿನಿ ಪಂಡಿತರು ಮೊದಲೇ ಊಹಿಸಿದ್ದರು. ಈ ಊಹೆ ನಿಜವಾಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತೀಯ ಸಿನಿಮಾ ಇತಿಹಾಸದಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಮೂರು ಚಿತ್ರಗಳು ಮಾತ್ರ. ಕನ್ನಡದ ಸಿನಿಮಾ (Kannada Cinema) ಒಂದು ಈ ದಾಖಲೆ ಬರೆದಿದ್ದು ಇದೇ ಮೊದಲು ಅನ್ನೋದು ವಿಶೇಷ.

‘ಕೆಜಿಎಫ್ 2’ ಏಪ್ರಿಲ್​ 14ರಂದು ರಿಲೀಸ್ ಆಯಿತು. ಕೊವಿಡ್ ಸಂಪೂರ್ಣವಾಗಿ ಇಳಿಮುಖ ಆದ್ದರಿಂದ ಜನರು ಹುಚ್ಚೆದ್ದು ಸಿನಿಮಾ ವೀಕ್ಷಿಸಿದರು. ‘ಕೆಜಿಎಫ್ 2’ ಜತೆ ತೆರೆಗೆ ಬಂದ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಮಕಾಡೆ ಮಲಗಿದ್ದರಿಂದ ತಮಿಳುನಾಡಿನಲ್ಲಿ ‘ಕೆಜಿಎಫ್ 2’ಗೆ ಹೆಚ್ಚು ಚಿತ್ರಮಂದಿರಗಳು ಸಿಕ್ಕವು. ಇನ್ನು, ಹಾಲಿವುಡ್​ನ ಯಾವುದೇ ಸಿನಿಮಾ ಈ ಸಂದರ್ಭದಲ್ಲಿ ತೆರೆಗೆ ಬಂದಿಲ್ಲ. ಹೀಗಾಗಿ, ಹೊರ ದೇಶಗಳಲ್ಲೂ ಜನರು ಈ ಸಿನಿಮಾ ವೀಕ್ಷಿಸಿದರು.

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಬಾಲಿವುಡ್​ ಒಂದರಲ್ಲೇ ಈ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡರೂ ಅಚ್ಚರಿ ಏನಿಲ್ಲ ಎನ್ನಲಾಗುತ್ತಿದೆ.

ವಿಶ್ವ ಮಟ್ಟದ ಕಲೆಕ್ಷನ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ರಮೇಶ್ ಬಾಲ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 2 ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ದಂಗಲ್, ಬಾಹುಬಲಿ 2 ಹಾಗೂ ‘ಆರ್​ಆರ್​ಆರ್​’ ಬಳಿಕ 1000 ಕೋಟಿ ಕ್ಲಬ್ ಸೇರಿದ ನಾಲ್ಕನೇ ಸಿನಿಮಾ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಾಲಿವುಡ್​ನಲ್ಲಿ ಹಾಸಿಗೆಯನ್ನೇ ಉದ್ದ ಮಾಡಿ ಕಾಲು ಚಾಚಿದ ರಾಕಿ; ‘ಟೈಗರ್..’, ‘ಪಿಕೆ’ ಕಲೆಕ್ಷನ್ ಹಿಂದಿಕ್ಕಿದ ‘ಕೆಜಿಎಫ್ 2’

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ