AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ
ಯಶ್
TV9 Web
| Edited By: |

Updated on: Apr 30, 2022 | 2:35 PM

Share

‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಬಗ್ಗೆ ಇದ್ದ ಕ್ರೇಜ್ ನೋಡಿ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯಲಿದೆ ಎಂದು ಸಿನಿ ಪಂಡಿತರು ಮೊದಲೇ ಊಹಿಸಿದ್ದರು. ಈ ಊಹೆ ನಿಜವಾಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತೀಯ ಸಿನಿಮಾ ಇತಿಹಾಸದಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಮೂರು ಚಿತ್ರಗಳು ಮಾತ್ರ. ಕನ್ನಡದ ಸಿನಿಮಾ (Kannada Cinema) ಒಂದು ಈ ದಾಖಲೆ ಬರೆದಿದ್ದು ಇದೇ ಮೊದಲು ಅನ್ನೋದು ವಿಶೇಷ.

‘ಕೆಜಿಎಫ್ 2’ ಏಪ್ರಿಲ್​ 14ರಂದು ರಿಲೀಸ್ ಆಯಿತು. ಕೊವಿಡ್ ಸಂಪೂರ್ಣವಾಗಿ ಇಳಿಮುಖ ಆದ್ದರಿಂದ ಜನರು ಹುಚ್ಚೆದ್ದು ಸಿನಿಮಾ ವೀಕ್ಷಿಸಿದರು. ‘ಕೆಜಿಎಫ್ 2’ ಜತೆ ತೆರೆಗೆ ಬಂದ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಮಕಾಡೆ ಮಲಗಿದ್ದರಿಂದ ತಮಿಳುನಾಡಿನಲ್ಲಿ ‘ಕೆಜಿಎಫ್ 2’ಗೆ ಹೆಚ್ಚು ಚಿತ್ರಮಂದಿರಗಳು ಸಿಕ್ಕವು. ಇನ್ನು, ಹಾಲಿವುಡ್​ನ ಯಾವುದೇ ಸಿನಿಮಾ ಈ ಸಂದರ್ಭದಲ್ಲಿ ತೆರೆಗೆ ಬಂದಿಲ್ಲ. ಹೀಗಾಗಿ, ಹೊರ ದೇಶಗಳಲ್ಲೂ ಜನರು ಈ ಸಿನಿಮಾ ವೀಕ್ಷಿಸಿದರು.

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಬಾಲಿವುಡ್​ ಒಂದರಲ್ಲೇ ಈ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡರೂ ಅಚ್ಚರಿ ಏನಿಲ್ಲ ಎನ್ನಲಾಗುತ್ತಿದೆ.

ವಿಶ್ವ ಮಟ್ಟದ ಕಲೆಕ್ಷನ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ರಮೇಶ್ ಬಾಲ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 2 ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ದಂಗಲ್, ಬಾಹುಬಲಿ 2 ಹಾಗೂ ‘ಆರ್​ಆರ್​ಆರ್​’ ಬಳಿಕ 1000 ಕೋಟಿ ಕ್ಲಬ್ ಸೇರಿದ ನಾಲ್ಕನೇ ಸಿನಿಮಾ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಾಲಿವುಡ್​ನಲ್ಲಿ ಹಾಸಿಗೆಯನ್ನೇ ಉದ್ದ ಮಾಡಿ ಕಾಲು ಚಾಚಿದ ರಾಕಿ; ‘ಟೈಗರ್..’, ‘ಪಿಕೆ’ ಕಲೆಕ್ಷನ್ ಹಿಂದಿಕ್ಕಿದ ‘ಕೆಜಿಎಫ್ 2’

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?