AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ.

1,000 ಕೋಟಿ ರೂಪಾಯಿ ದಾಟಿದ ‘ಕೆಜಿಎಫ್ 2’ ಕಲೆಕ್ಷನ್; ಹೊಸ ದಾಖಲೆ ಬರೆದ ಕನ್ನಡ ಸಿನಿಮಾ
ಯಶ್
TV9 Web
| Edited By: |

Updated on: Apr 30, 2022 | 2:35 PM

Share

‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಬಗ್ಗೆ ಇದ್ದ ಕ್ರೇಜ್ ನೋಡಿ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯಲಿದೆ ಎಂದು ಸಿನಿ ಪಂಡಿತರು ಮೊದಲೇ ಊಹಿಸಿದ್ದರು. ಈ ಊಹೆ ನಿಜವಾಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತೀಯ ಸಿನಿಮಾ ಇತಿಹಾಸದಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಮೂರು ಚಿತ್ರಗಳು ಮಾತ್ರ. ಕನ್ನಡದ ಸಿನಿಮಾ (Kannada Cinema) ಒಂದು ಈ ದಾಖಲೆ ಬರೆದಿದ್ದು ಇದೇ ಮೊದಲು ಅನ್ನೋದು ವಿಶೇಷ.

‘ಕೆಜಿಎಫ್ 2’ ಏಪ್ರಿಲ್​ 14ರಂದು ರಿಲೀಸ್ ಆಯಿತು. ಕೊವಿಡ್ ಸಂಪೂರ್ಣವಾಗಿ ಇಳಿಮುಖ ಆದ್ದರಿಂದ ಜನರು ಹುಚ್ಚೆದ್ದು ಸಿನಿಮಾ ವೀಕ್ಷಿಸಿದರು. ‘ಕೆಜಿಎಫ್ 2’ ಜತೆ ತೆರೆಗೆ ಬಂದ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಮಕಾಡೆ ಮಲಗಿದ್ದರಿಂದ ತಮಿಳುನಾಡಿನಲ್ಲಿ ‘ಕೆಜಿಎಫ್ 2’ಗೆ ಹೆಚ್ಚು ಚಿತ್ರಮಂದಿರಗಳು ಸಿಕ್ಕವು. ಇನ್ನು, ಹಾಲಿವುಡ್​ನ ಯಾವುದೇ ಸಿನಿಮಾ ಈ ಸಂದರ್ಭದಲ್ಲಿ ತೆರೆಗೆ ಬಂದಿಲ್ಲ. ಹೀಗಾಗಿ, ಹೊರ ದೇಶಗಳಲ್ಲೂ ಜನರು ಈ ಸಿನಿಮಾ ವೀಕ್ಷಿಸಿದರು.

ಬಾಲಿವುಡ್​ನಲ್ಲಿ ಈ ಸಿನಿಮಾ ಅಬ್ಬರಿಸಿದೆ. ಈವರೆಗೆ 350+ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಹಿಂದಿಯಲ್ಲಿ ಕಳೆದ ವಾರ ಹಾಗೂ ಈ ವಾರ ತೆರೆಗೆ ಬಂದ ಸಿನಿಮಾಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಸಹಜವಾಗಿಯೇ ಯಶ್ ಚಿತ್ರಕ್ಕೆ ಸಹಕಾರಿ ಆಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಬಾಲಿವುಡ್​ ಒಂದರಲ್ಲೇ ಈ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡರೂ ಅಚ್ಚರಿ ಏನಿಲ್ಲ ಎನ್ನಲಾಗುತ್ತಿದೆ.

ವಿಶ್ವ ಮಟ್ಟದ ಕಲೆಕ್ಷನ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ರಮೇಶ್ ಬಾಲ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 2 ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ದಂಗಲ್, ಬಾಹುಬಲಿ 2 ಹಾಗೂ ‘ಆರ್​ಆರ್​ಆರ್​’ ಬಳಿಕ 1000 ಕೋಟಿ ಕ್ಲಬ್ ಸೇರಿದ ನಾಲ್ಕನೇ ಸಿನಿಮಾ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಾಲಿವುಡ್​ನಲ್ಲಿ ಹಾಸಿಗೆಯನ್ನೇ ಉದ್ದ ಮಾಡಿ ಕಾಲು ಚಾಚಿದ ರಾಕಿ; ‘ಟೈಗರ್..’, ‘ಪಿಕೆ’ ಕಲೆಕ್ಷನ್ ಹಿಂದಿಕ್ಕಿದ ‘ಕೆಜಿಎಫ್ 2’

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್